ಲೋಕಸಭೆ ಚುನಾವಣೆ ಮುಗಿದ ಆರೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ: ಭವಿಷ್ಯ ನುಡಿದ ಬಿಜೆಪಿ ನಾಯಕ
ಮಂಗಳೂರು, ಮಾರ್ಚ್ 18: ಲೋಕಸಭೆ ಚುನಾವಣೆ ಮುಗಿದ ಆರು ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತೆ ಎಂದು ನಮಗೆ ನೂರಕ್ಕೆ ನೂರು ವಿಶ್ವಾಸವಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ಬರುತ್ತದೆ ತಯರಾಗಿ. ಈ ಬಗ್ಗೆ ನಮಗೆ ಅತ್ಯಂತ ಸ್ಪಷ್ಟ ವಿಶ್ವಾಸವಿದೆ ಎಂದು ಪದಾಧಿಕಾರಿಗಳ ಸಭೆಯಲ್ಲಿ ಅವರು ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.

ಒಂದೂವರೆ ತಿಂಗಳಿಂದ ಬಿಜೆಪಿಯ ಮತಗಟ್ಟೆಯ ಕಾರ್ಯಗಳು ಪ್ರಾರಂಭವಾಗಿದೆ. ಜಿಲ್ಲೆಯ ಎಲ್ಲಾ ಬೂತ್ ಮಟ್ಟದ ಸಭೆಗಳು, ಶಕ್ತಿಕೇಂದ್ರ ಮಹಾಶಕ್ತಿ ಕೇಂದ್ರದ ಸಭೆಗಳು ಮುಗಿದಿವೆ ನಮ್ಮ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಒಂದು ಸುತ್ತಿನ ಪ್ರವಾಸ ಮುಗಿಸಿದ್ದಾರೆ. ಹಿಂದಿನ ಎಲ್ಲಾ ದಾಖಲೆ ಮುರಿದು ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಬಂಡಾಯ ಸರಿಯಾಗುತ್ತದೆ. ರಾಜಕೀಯ ಪಾರ್ಟಿಯಲ್ಲಿ ಇರುವಂತದ್ದೇ. ನಮ್ಮಲ್ಲಿ ಎಲ್ಲಾ ಕಾರ್ಯಕರ್ತರ ಮನಸ್ಸು ಒಂದೇ ರೀತಿಯಿದೆ. ಮೋದಿಯವರ ಗೆಲುವಿಗಾಗಿ ನಾವು ಪರಿಶ್ರಮ ಪಡುತ್ತಿದ್ದೇವೆ. ಮೂರುವರೆ ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಲು ಪೂರ್ಣ ಪರಿಶ್ರಮ ಹಾಕುತ್ತೇನೆ. ರಾಷ್ಟ್ರೀಯ ನಾಯಕರ ಸೂಚನೆಗೆ ಅನುಕೂಲವಾಗಿ ಕೆಲಸ ಮಾಡುತ್ತೇನೆ. ಅವರು ಹೇಳಿದ ಕಡೆಗಳಲ್ಲಿ ಪ್ರವಾಸ ಮಾಡುತ್ತೇನೆ ಸಂಘಟನಾ ಕಾರ್ಯ ವಿಸ್ತರಣೆ ಮಾಡುತ್ತೇನೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದರು
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು












Click it and Unblock the Notifications