ಹುಬ್ಬಳ್ಳಿ ಸಮಾವೇಶ : ಹಿಂದುತ್ವ ಮತ್ತು ಮಹದಾಯಿ ವಿವಾದ
ಬೆಂಗಳೂರು, ಡಿಸೆಂಬರ್ 22 : ಪತ್ಯೇಕ ಲಿಂಗಾಯತ ಧರ್ಮ ವಿಚಾರದಲ್ಲಿ ಬಿಜೆಪಿಗೆ ಉತ್ತರ ಕರ್ನಾಟಕ ಭಾಗದಲ್ಲಿ ಹಿನ್ನಡೆ ಉಂಟಾಗಿತ್ತು. ಹಿಂದುತ್ವ ಮತ್ತು ಮಹದಾಯಿ ನದಿ ವಿವಾದದ ದಾಳ ಉರುಳಿಸುವ ಮೂಲಕ ಬಿಜೆಪಿ ಹೊಸ ಲೆಕ್ಕಾಚಾರ ಹುಟ್ಟು ಹಾಕಿದೆ.
ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಗುರುವಾರ ಬಿಜೆಪಿಯ ಪರಿವರ್ತನಾ ಯಾತ್ರೆಯ 50ನೇ ದಿನದ ಸಮಾವೇಶ ನಡೆಯಿತು. ಸಮಾವೇಶದ ಮುಖ್ಯ ಆಕರ್ಷಣೆಯಾಗಿದ್ದು ಮಹದಾಯಿ ವಿವಾದ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್.
ಮಹದಾಯಿ ವಿವಾದದ ಕುರಿತು ಗೋವಾ ರಾಜ್ಯದ ನಿಲುವು ಸಮಾವೇಶದಲ್ಲಿ ಪ್ರಕಟವಾಯಿತು. ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಬರೆದ ಪತ್ರವನ್ನು ಓದುವ ಮೂಲಕ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೊಸ ರಾಜಕೀಯ ಲೆಕ್ಕಾಚಾರ ಆರಂಭಿಸಿದರು.
ಸಮಾವೇಶಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಯೋಗಿ ಆದಿತ್ಯನಾಥ್ ಟಿಪ್ಪು ಜಯಂತಿ ವಿಚಾರ ಪ್ರಸ್ತಾಪ ಮಾಡುವ ಮೂಲಕ ಹಿಂದುತ್ವದ ದಾಳ ಉರುಳಿಸಿದರು. ಈ ಎರಡೂ ವಿಚಾರಗಳ ಮೇಲೆಯೇ ಸಮಾವೇಶ ಕೇಂದ್ರಿಕೃತವಾಗಿತ್ತು, ಇದು ಚುನಾವಣೆಗೆ ಹೇಗೆ ಸಹಾಯಕವಾಗಲಿದೆ ಎಂದು ಕಾದು ನೋಡಬೇಕು...

ಬಿಜೆಪಿಯ ದೊಡ್ಡ ಸಮಾವೇಶ
ಹುಬ್ಬಳ್ಳಿಯಲ್ಲಿ ಗುರುವಾರ ನಡೆದ ಸಮಾವೇಶಕ್ಕೆ ಹೆಚ್ಚು ಜನರು ಆಗಮಿಸಿದ್ದರು. ಯೋಗಿ ಆದಿತ್ಯನಾಥ್ ಮತ್ತು ಮಹದಾಯಿ ವಿಚಾರದಲ್ಲಿ ಬಿಜೆಪಿಯ ಘೋಷಣೆ ಇದಕ್ಕೆ ಪ್ರಮುಖ ಕಾರಣವಾಗಿತ್ತು.

ಪತ್ರ ಓದಿದ ಬಿ.ಎಸ್.ಯಡಿಯೂರಪ್ಪ
'ಕುಡಿಯುವ ನೀರು ಒದಗಿಸಲು ನಮ್ಮ ಸರ್ಕಾರದ ವಿರೋಧವಿಲ್ಲ. ಜನರ ಹಿತದೃಷ್ಟಿಯಿಂದ ವಿವಾದ ಬಗೆಹರಿಸಲು ನಾವು ಚರ್ಚೆಗೆ ಸಿದ್ಧರಿದ್ದೇವೆ' ಎಂದು ಗೋವಾ ಸಿಎಂ ಮನೋಹರ್ ಪರಿಕ್ಕರ್ ಬರೆದ ಪತ್ರವನ್ನು ಬಿ.ಎಸ್.ಯಡಿಯೂರಪ್ಪ ಸಮಾವೇಶದಲ್ಲಿ ಓದಿದರು.

ಟಿಪ್ಪು ಜಯಂತಿ ವಿವಾದ ಕೆದಕಿದ ಯೋಗಿ
ಸಮಾವೇಶದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, 'ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ನನಗೆ ವಿಶ್ವಾವಿದೆ. ಕಾಂಗ್ರೆಸ್ ಸರ್ಕಾರಕ್ಕೆ ಹೇಳಿ ನಾವು ದೇಶದಲ್ಲಿ ಹನುಮಾನ್ನನ್ನು ಪೂಜಿಸುತ್ತೇವೆ. ಟಿಪ್ಪು ಸುಲ್ತಾನ್ ನನ್ನು ಅಲ್ಲ' ಎಂದು ಹೇಳಿಕೆ ನೀಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು. ಹಿಂದುತ್ವದ ಅಜೆಂಡಾವನ್ನು ಮಂಡಿಸಿದರು.

ಮಹದಾಯಿ ವಿವಾದ ಮುಂದೇನು?
ಬುಧವಾರ ಬಿಜೆಪಿ ಅಧ್ಯಕ್ಷ ಅಮಿತ್ ಶಾ ನಿವಾಸದಲ್ಲಿ ನಡೆದ ಸಭೆ ಬಳಿಕ ಗೋವಾ ಮಹದಾಯಿ ವಿಚಾರದಲ್ಲಿ ಚರ್ಚೆಗೆ ಸಿದ್ಧ ಎಂದು ಹೇಳಿದೆ. ಆದರೆ, ಗೋವಾ ರಾಜ್ಯದಲ್ಲಿ ಮಾತುಕತೆಗೆ ಪೂರಕವಾದ ವಾತಾವರಣವಿದೆಯೇ?. ಮಹದಾಯಿ ವಿವಾದ ಮತ್ತೆ ಆರಂಭವಾದರೆ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆಯುವುದಾಗಿ ಗೋವಾ ಫಾರ್ವರ್ಡ್ ಪಾರ್ಟಿ ಪರಿಕ್ಕರ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications