Karnataka Police: ಆಸ್ತಿ ಖರೀದಿ, ಮಾರಾಟ ಮಾಡುವ ಪೊಲೀಸರ ಗಮನಕ್ಕೆ
ಬೆಂಗಳೂರು, ಫೆಬ್ರವರಿ 22; ಕರ್ನಾಟಕದ ಪೊಲೀಸ್ ಇಲಾಖೆ ಇಲಾಖೆಯ ನೌಕರರು ಮತ್ತು ಸಿಬ್ಬಂದಿಗಳು ಸ್ಥಿರ/ ಚರಾಸ್ತಿಯನ್ನು ಖರೀದಿ/ ಮಾರಾಟ ಮಾಡುವ ಕುರಿತು ಸುತ್ತೋಲೆಯೊಂದನ್ನು ಹೊರಡಿಸಿದೆ. ಅನುಮತಿಗಾಗಿ ಬರುತ್ತಿದ್ದ ಮನವಿಗಳನ್ನು ಪರಿಶೀಲಿಸಿದ ಬಳಿಕ ಈ ಕುರಿತು ಮಾಹಿತಿ ನೀಡಲಾಗಿದೆ.
ಸೌಮೇಂದು ಮುಖರ್ಜಿ, ಎಡಿಜಿಪಿ ಆಡಳಿತ ಡೈರೆಕ್ಟರ್ ಜನರಲ್ ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಪರವಾಗಿ ಈ ಸುತ್ತೋಲೆಯನ್ನು ಹೊರಡಿಸಲಾಗಿದೆ. ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು 2021, ದಿನಾಂಕ 7/1/2021 ಮತ್ತು ಸುತ್ತೋಲೆ ದಿನಾಂಕ 22/2/2016 ಉಲ್ಲೇಖ ಮಾಡಲಾಗಿದೆ.

ಸುತ್ತೋಲೆಯ ವಿವರಗಳು: ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 'ಎ' ಮತ್ತು 'ಬಿ' ದರ್ಜೆ ಅಧಿಕಾರಿಗಳು (ಐ.ಪಿ.ಎಸ್ ಅಧಿಕಾರಿಗಳನ್ನು ಹೊರತುಪಡಿಸಿ) ಸ್ಥಿರಾಸ್ತಿ ಮತ್ತು ಚರಾಸ್ತಿಗಳನ್ನು ಖರೀದಿಸಲು/ ಮಾರಾಟ ಮಾಡಲು/ ಉಡುಗೊರೆ ಪಡೆಯಲು/ ಗೃಹ ನಿರ್ಮಾಣ ಮಾಡಲು ಅನುಮತಿ ಕೋರಿ ಮನವಿಗಳನ್ನು ಪೊಲೀಸ್ ಪ್ರಧಾನ ಕಛೇರಿಗೆ ಸಲ್ಲಿಸುತ್ತಿದ್ದು, ಸದರಿಯವರುಗಳು ಸಲ್ಲಿಸುತ್ತಿರುವ ಮನವಿ/ ಪ್ರಸ್ತಾವನೆಗಳನ್ನು ಪರಿಶೀಲಿಸಲಾಗಿ, ಸಲ್ಲಿಸುತ್ತಿರುವ ಮನವಿಗಳು ಅಪೂರ್ಣವಾಗಿದ್ದು, ಸಂಬಂಧಪಟ್ಟ ದಾಖಲೆಗಳನ್ನು ಮನವಿಯೊಂದಿಗೆ ಸಲ್ಲಿಸದಿರುವುದು ಕಂಡುಬಂದಿರುತ್ತದೆ ಎಂದು ಸುತ್ತೋಲೆ ಹೇಳಿದೆ. ಇದರಿಂದ ಅನಗತ್ಯ ವಿಳಂಬಕ್ಕೆ ಕಾರಣವಾಗಿರುತ್ತದೆ.
ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು 2021, ದಿನಾಂಕ 07/01/2021ರ ನಿಯಮ 24 ರಂತೆ ಚರ, ಸ್ಥಿರ ಮತ್ತು ಬೆಲೆಬಾಳುವ ಸ್ವತ್ತು ಎಂಬುದರಡಿಯಲ್ಲಿ ಉಪ ನಿಯಮ (3) ರನ್ವಯ ಯಾರೇ ಸರ್ಕಾರಿ ನೌಕರನು ಅಥವಾ ಅವನ ಕುಟುಂಬದ ಯಾರೇ ಸದಸ್ಯನು ನಿಯಮಿಸಲಾದ ಪ್ರಾಧಿಕಾರಕ್ಕೆ ಮೊದಲೇ ತಿಳಿಸಿದ ಹೊರತು, ತನ್ನ ಸ್ವಂತ ಹೆಸರಿನಲ್ಲಾಗಲೀ ಅಥವಾ ತನ್ನ ಕುಟುಂಬದ ಯಾರೇ ಸದಸ್ಯನ ಹೆಸರಿನಲ್ಲಾಗಲೀ ಗುತ್ತಿಗೆಯ, ಅಡಮಾನದ, ಖರೀದಿಯ, ಮಾರಾಟದ ಉಡುಗೊರೆಯ ಮೂಲಕ ಅಥವಾ ಅನ್ಯಥಾ ಯಾವುದೇ ಸ್ಥಿರ ಸ್ವತ್ತನ್ನು ಅರ್ಜಿಸತಕ್ಕದ್ದಲ್ಲ ಅಥವಾ ವಿಲೇ ಮಾಡತಕ್ಕದ್ದಲ್ಲ.
ಒಬ್ಬ ಸರ್ಕಾರಿ ನೌಕರನು ಸಮರ್ಥನೀಯ ಕಾರಣಗಳಿಂದಾಗಿ ನಿಯಮಿತ ಪ್ರಾಧಿಕಾರಿಗೆ ಮೊದಲೇ ತಿಳಿಸದೇ ಯಾವುದೇ ಸ್ಥಿರ ಸ್ವತ್ತನ್ನು ಅರ್ಜಿಸಿದ್ದಲ್ಲಿ ಅಥವಾ ವಿಲೇ ಮಾಡಿದಲ್ಲಿ ಆತ ಅಂತಹ ವ್ಯವಹಾರ ಕೈಗೊಂಡ ಎರಡು ತಿಂಗಳ ಒಳಗಾಗಿ ವಿವರಗಳು ಹಾಗೂ ಪೂರಕ ದಾಖಲೆಗಳನ್ನು ಹಾಗೂ ಸಮರ್ಥನೀಯ ಕಾರಣಗಳೊಂದಿಗೆ ನಿಯಮಿತ ಪ್ರಾಧಿಕಾರಿಗೆ ವರದಿ ಮಾಡತಕ್ಕದ್ದು, ನಿಯಮಿತ ಪ್ರಾಧಿಕಾರಿಯು ಸರ್ಕಾರಿ ನೌಕರನು ನೀಡಿದ ಕಾರಣಗಳು ಅಂಗೀಕಾರ್ಹವೆಂದು ತೃಪ್ತಿಪಟ್ಟಲ್ಲಿ ಸರ್ಕಾರಿ ನೌಕರನು ಸಲ್ಲಿಸಿದ ದಾಖಲೆಗಳು ಹಾಗೂ ವಿವರಗಳನ್ನು ಪರಿಶೀಲಿಸಿ ಅಂತಹ ವ್ಯವಹರಣೆಯನ್ನು ಘಟನೋತ್ತರವಾಗಿ ಟಿಪ್ಪಣಿ ಮಾಡಿಕೊಳ್ಳಬಹುದು ಎಂದು ನಮೂದಿಸಲಾಗಿರುತ್ತದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು 2021 ರಲ್ಲಿ ವಿವರಿಸಿರುವಂತೆ ಸರ್ಕಾರಿ ನೌಕರನು ಅಥವಾ ಅವನ ಕುಟುಂಬದ ಯಾರೇ ಸದಸ್ಯನು ನಿಯಮಿಸಲಾದ ಪ್ರಾಧಿಕಾರಕ್ಕೆ ಮೊದಲೇ ತಿಳಿಸಿದ ಹೊರತು ಅಥವಾ ಸಮರ್ಥನೀಯ ಕಾರಣಗಳಿಂದಾಗಿ ನಿಯಮಿತ ಪ್ರಾಧಿಕಾರಿಗೆ ಮೊದಲೇ ತಿಳಿಸದೇ ಯಾವುದೇ ಸ್ಥಿರ ಸ್ವತ್ತನ್ನು ಅರ್ಜಿಸಿದ್ದಲ್ಲಿ ಅಥವಾ ವಿಲೇ ಮಾಡಿದಲ್ಲಿ ಆತ ಅಂತಹ ವ್ಯವಹಾರ ಕೈಗೊಂಡ ಎರಡು ತಿಂಗಳ ಒಳಗಾಗಿ ವಿವರಗಳು ಹಾಗೂ ಪೂರಕ ದಾಖಲೆಗಳನ್ನು ಹಾಗೂ ಸಮರ್ಥನೀಯ ಕಾರಣಗಳೊಂದಿಗೆ ನಿಯಮಿಸಿದ ಪ್ರಾಧಿಕಾರಿಗೆ ವರದಿ ಮಾಡದೇ ಆನಂತರದಲ್ಲಿ ಸಲ್ಲಿಸುವ ಅಧಿಕಾರಿಗಳ ವಿರುದ್ಧ ಕೆ.ಎಸ್.ಸಿ (ನಡತೆ) ನಿಯಮಗಳನ್ನು ಉಲ್ಲಂಗಿಸಿದ ಆರೋಪದಡಿ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಈ ಮೂಲಕ ತಿಳಿಸಲಾಗಿದೆ.
ಆದ್ದರಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 'ಎ' 'ಬಿ' ಮತ್ತು 'ಸಿ' ದರ್ಜೆ ಅಧಿಕಾರಿಗಳು ಸ್ಥಿರಾಸ್ತಿ ಮತ್ತು ಚರಾಸ್ತಿಗಳನ್ನು ಖರೀದಿಸಲು/ ಮಾರಾಟ ಮಾಡಲು ಪಡೆಯಲು ನಿರ್ಮಾಣ ಮಾಡಲು ಸಲ್ಲಿಸುವ ಮನವಿಗಳನ್ನು ಪರಿಶೀಲಿಸಿ ಟಿಪ್ಪಣೀಕರಿಸಿಕೊಳ್ಳಬೇಕಾಗಿರುವುದರಿಂದ ಈ ಕಛೇರಿಗೆ/ ನಿಯಮಿಸಿದ ಪ್ರಾಧಿಕಾರಿಗಳಿಗೆ ಸಲ್ಲಿಸುವ ಮನವಿಯೊಂದಿಗೆ ವಿಷಯ/ ಅಂಶಗಳನ್ವಯ ಪರಿಶೀಲಿಸಿ, ಭರ್ತಿಮಾಡಿ ಸಂಬಂಧಪಟ್ಟ ಎಲ್ಲಾ ಪೂರಕ ದಾಖಲೆಗಳೊಂದಿಗೆ ನಿಯಮಿಸಿದ ಪ್ರಾಧಿಕಾರಿಗಳಿಗೆ ಸಲ್ಲಿಸುವಂತೆ ತಮ್ಮ ಅಧೀನ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಲಾಗಿದೆ.
-
Karnataka Polic: ದೇಶದಲ್ಲೇ ಮೊದಲು ಕರ್ನಾಟಕದಲ್ಲಿ ನಾವು ನಕ್ಸಲ್ ಮುಕ್ತ ರಾಜ್ಯವನ್ನಾಗಿ ಮಾಡಿದ್ದೇವೆ: ಡಾ.ಜಿ ಪರಮೇಶ್ವರ್ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications