ಅಷ್ಟಮಂಗಲ ಪ್ರಶ್ನೆಯಲ್ಲಿ ಬಯಲಾಯಿತು ದೇಗುಲದ ರಹಸ್ಯ
ಬೆಳ್ತಂಗಡಿ, ಜ 29: ಅಷ್ಟಮಂಗಲ ಪ್ರಶ್ನೆಯಲ್ಲಿ ಜೀರ್ಣಾವಸ್ಥೆಯಲ್ಲಿದ್ದ ದೇವಾಲಯದ ರಹಸ್ಯವೊಂದು ಬಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದಲ್ಲಿ ಈ ದೇವಾಲಯದ ಕುರುಹು ಪತ್ತೆಯಾಗಿತ್ತು.
ಗ್ರಾಮದ ಬಲ್ಲಂಗೇರಿ ಎಂಬಲ್ಲಿ ಜೀರ್ಣಾವಸ್ಥೆಯಲ್ಲಿದ್ದ ಕುರುಹೊಂದು "ಶ್ರೀ ಸೂರ್ಯ ನಾರಾಯಣ" ದೇಗುಲದ್ದು ಎನ್ನುವ ಎಂಬ ಅಂಶ ಈಗ ಅಷ್ಟಮಂಗಲ ಪ್ರಶ್ನೆಯಿಂದ ತಿಳಿದು ಬಂದಿದೆ. (ಉಡುಪಿ ಕ್ಷೇತ್ರಕ್ಕೆ ಕಾದಿದೆ ವಿಪತ್ತು)
ನೂರಾರು ವರುಷಗಳ ಹಿಂದೆಯೇ ಈ ಸ್ಥಳದಲ್ಲಿ ಪೂಜಾ ಕ್ಷೇತ್ರವೊಂದಿದ್ದು ಕಾಲನ ಮಹಿಮೆಗೆ ತುತ್ತಾಗಿ ನಶಿಸಿ ಹೋಗಿತ್ತು. ಈಗ ನದಿ ತಟದಲ್ಲಿ ಕ್ಷೇತ್ರದ ಕುರುಹುಗಳಷ್ಟೇ ಉಳಿದುಕೊಂಡಿವೆ. ಭಾರ್ಗವ ಋಷಿ ಗಾಯತ್ರಿ ಮಂತ್ರೋಪಾಸನೆಯ ಮೂಲಕ ಸೂರ್ಯನನ್ನು ಒಲಿಸಿಕೊಂಡು ಈ ಕ್ಷೇತ್ರ ನಿರ್ಮಾಣ ಮಾಡಿದ್ದರು ಎನ್ನುವ ವಿಷಯ ಅಷ್ಟಮಂಗಲ ಪ್ರಶ್ನೆಯ ವೇಳೆ ಬಹಿರಂಗವಾಗಿದೆ.

ಆರೋಗ್ಯ, ಸಿದ್ಧಿ ಮತ್ತು ಸಂತಾನಕ್ಕೆ ಭಕ್ತಿಯಿಂದ ಈ ಕ್ಷೇತ್ರದಲ್ಲಿ ಸೇವೆ ಮಾಡಿದರೆ ಇಷ್ಟಾರ್ಥ ಫಲಿಸುತ್ತಿತ್ತು. ಕ್ಷೇತ್ರದಲ್ಲಿ ಪ್ರಧಾನ ಶಕ್ತಿಯಾಗಿ ಸೂರ್ಯನಾರಾಯಣನ ಆರಾಧನೆ ನಡೆಯುತ್ತಿತ್ತು ಎಂದು ಅಷ್ಟಮಂಗಲ ಪ್ರಶ್ನೆ ನಡೆಸಿಕೊಡುವ ತಂತ್ರಿಗಳಾದ ಉದಯ ಪಾಂಗಣ್ಣಾಯ ಹೇಳಿದ್ದಾರೆ.
ಕ್ಷೇತ್ರದ ಶಕ್ತಿಗಳಾಗಿ ಗಣಪತಿ, ದುರ್ಗಾಪರಮೇಶ್ವರಿ, ಪೂರ್ಣ ಸಾನ್ನಿಧ್ಯದ ನಾಗ, ಸ್ಥಳದ ಮೂಲ ದೈವ ಪಂಜುರ್ಲಿ, ಗುಳಿಗ, ಕೊಡಮಣಿತ್ತಾಯಿಗಳಿಗೂ ಆರಾಧನೆ ಸಲ್ಲುತ್ತಿತ್ತು. ಇವುಗಳೆಲ್ಲವನ್ನೂ ಪುನರ್ ಪ್ರತಿಷ್ಠಾಪಿಸಿ ಕ್ಷೇತ್ರ ನಿರ್ಮಾಣವಾಗಬೇಕಾಗಿದೆ ಎಂಬ ಅಂಶ ಅಷ್ಟಮಂಗಲ ಪ್ರಶ್ನೆಯ ಸಂದರ್ಭದಲ್ಲಿ ತಿಳಿದು ಬಂದಿದೆ.
ತಂತ್ರಿಗಳಾದ ಉದಯ ಪಾಂಗಣ್ಣಾಯ ನೇತೃತ್ವದಲ್ಲಿ, ಅಜಿಲ ಅರಮನೆಯ ಪದ್ಮಪ್ರಸಾದ್ ಅಜಿಲರ ಮಾರ್ಗದರ್ಶನದಲ್ಲಿ, ದೈವಜ್ಞರಾದ ಮಾಡಾವು ವೆಂಕಟ್ರಮಣ ಭಟ್ ಹಾಗೂ ಕೇಕಣಾಜೆ ಗಣೇಶ್ ಭಟ್ ಅಷ್ಟಮಂಗಲ ಪ್ರಶ್ನೆ ಇರಿಸಿದ್ದರು.
ಅಷ್ಟಮಂಗಲ ಪ್ರಶ್ನೆಯೆಂದರೇನು: ಪ್ರಮುಖವಾಗಿ ಕರ್ನಾಟಕದ ಕರಾವಳಿ ಪ್ರದೇಶ ಮತ್ತು ಕೇರಳದಲ್ಲಿ 'ಅಷ್ಟಮಂಗಲ ಪ್ರಶ್ನೆ' ಪ್ರಕ್ರಿಯೆ ಹೆಚ್ಚಾಗಿ ನಡೆಯುತ್ತದೆ. ದೇವಾಲಯದ ಪ್ರಕ್ರಿಯೆಗಳು ಸುಗಮವಾಗಿ ನಡೆಯುತ್ತಿದೆಯೇ, ಅಲ್ಲಿರುವಂಥ ನೌಕರರು, ಅರ್ಚಕರು, ಆಡಳಿತ ಮೊಕ್ತೇಸರರ ನಡವಳಿಕೆ ಹೇಗಿದೆ, ಪೂಜಾ ವಿದಿವಿಧಾನದಲ್ಲಿ ಏನಾದರೂ ದೋಷಗಳಾಗಿದೆಯೇ? ದೋಷಗಳು ಕಂಡು ಬಂದರೆ ಅದಕ್ಕೆ ಸೂಕ್ತ ಪರಿಹಾರವೇನು? ಮುಂತಾದವುಗಳನ್ನು ಅರಿಯುವುದಕ್ಕೆ ಅಷ್ಟಮಂಗಲ ಪ್ರಶ್ನೆ ಪ್ರಕ್ರಿಯೆ ನಡೆಯುತ್ತದೆ.
ಅಲ್ಲದೇ, ಶಿಥಿಲಾವಸ್ಥೆಯಲ್ಲಿರುವ ದೇವಾಲಯದ ಪುನರ್ ನಿರ್ಮಾಣ, ದೇವಾಲಯದ ಜೀರ್ಣೋದ್ದಾರ, ಗ್ರಾಮದಲ್ಲಿ ಏನಾದರೂ ಸಮಸ್ಯೆ ಕಂಡುಬಂದರೂ ಅಷ್ಟಮಂಗಲ ಪ್ರಶ್ನೆಯ ಮೂಲಕ ಪರಿಹಾರ ಕಂಡುಕೊಳ್ಳುವ ಪದ್ದತಿಯೂ ಜಾರಿಯಲ್ಲಿದೆ.
ಅಷ್ಟಮಂಗಲ ಪ್ರಶ್ನೆ ಹೇಗೆ ನಡೆಯುತ್ತದೆ? ಅಷ್ಟಮಂಗಲ ಪ್ರಶ್ನೆಗೆ ಪ್ರಮುಖವಾಗಿ ಎಂಟು ವಸ್ತುಗಳು ಬೇಕಾಗುತ್ತದೆ. ಬಿಳಿ ಬಟ್ಟೆ, ಕನ್ನಡಿ, ತೆಂಗಿನಕಾಯಿ, ಕುಂಕುಮ, ವೀಳ್ಯದೆಲೆ, ಭತ್ತ, ಅಕ್ಕಿ, ಹೂವಿನ ಅಕ್ಷತೆ. ಒಬ್ಬರಿಗಿಂತ ಹೆಚ್ಚು (ಹೆಚ್ಚಾಗಿ ಎಂಟು ಮಂದಿ) ದೈವಜ್ಞರು ಇರುತ್ತಾರೆ.ಪ್ರಶ್ನೆ ಪ್ರಕ್ರಿಯೆ ಮುಗಿಯಲು ಕಾಲ ಮಿತಿಯಿಲ್ಲ.
ದೈವಜ್ಞರ ಬಳಿ ಪ್ರಶ್ನೆ ಕೇಳಲು ಬರುವ ಸಮಯದಿಂದ ಲೆಕ್ಕಚಾರ ಆರಂಭವಾಗುತ್ತದೆ. ಸಂಖ್ಯಾಶಾಸ್ತ್ರದಿಂದ ಮಾತ್ರವೇ ಅಲ್ಲದೇ, ಬಾಡಿ ಲಾಂಗ್ವೇಜ್ ಮುಖಾಂತರವೂ ಸಮಸ್ಯೆಗಳನ್ನು ಅರಿಯಲಾಗುತ್ತದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications