ಡಿಕೆ ಶಿವಕುಮಾರ್ ಸಿಎಂ ಆಗಲ್ಲ, ಕರ್ನಾಟಕ ಎರಡು ಭಾಗ ಆಗುತ್ತೆ: ಖ್ಯಾತ ಜ್ಯೋತಿಷಿ ಸ್ಫೋಟಕ ಭವಿಷ್ಯ
ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಬದಲಾವಣೆಯ ಚರ್ಚೆಗಳು ಜೋರಾಗಿವೆ. ಇದೇ ವರ್ಷದಲ್ಲಿ ಸಿಎಂ ಬದಲಾಗುತ್ತಾರೆ. ಡಿ.ಕೆ.ಶಿವಕುಮಾರ್ ಅವರು ಹೊಸ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದೆಲ್ಲ ಹೇಳಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ಹಾರಿದ್ದಾರೆ. ಇದರ ನಡುವೆ ಖ್ಯಾತ ಜ್ಯೋತಿಷಿಯೊಬ್ಬರು ಸಿಎಂ ಬದಲಾವಣೆ ವಿಚಾರವಾಗಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಸಿಎಂ ಕನಸು ಕಂಡಿರುವ ಡಿ.ಕೆ.ಶಿವಕುಮಾರ್ ಅವರಿಗೆ ಆಘಾತ ನೀಡುವ ಭವಿಷ್ಯವಾಣಿ ನುಡಿದಿರುವ ಈ ಜ್ಯೋತಿಷಿ, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದಿಲ್ಲ ಎಂದಿದ್ದಾರೆ. ಇದು ಕರ್ನಾಟಕ ರಾಜಕೀಯ ವಲಯದಲ್ಲಿ ಬಿರುಗಾಳಿಯನ್ನೇ ಸೃಷ್ಟಿಸಿದೆ.
ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿನಿ (Prashanth Kini) ಅವರು ಈ ಭವಿಷ್ಯವಾಣಿ ನುಡಿದಿದ್ದಾರೆ. ಸಿನಿಮಾ, ರಾಜಕೀಯ ಸೇರಿದಂತೆ ಈ ಜ್ಯೋತಿಷಿ ನುಡಿದಿರುವ ಭವಿಷ್ಯವಾಣಿಗಳು ಬಹುತೇಕ ಸತ್ಯವೇ ಆಗಿದ್ದು, ಕರ್ನಾಟಕ ರಾಜಕಾರಣದ ಬಗ್ಗೆ ಈ ಹೊಸ ಭವಿಷ್ಯವು ಸಂಚಲನ ಮೂಡಿಸಿದೆ. ಅಲ್ಲದೆ ಅಖಂಡ ಕರ್ನಾಟಕವು ಸದ್ಯದಲ್ಲೇ ಎರಡು ಭಾಗ ಆಗಲಿದೆ ಎಂದೂ ಪ್ರಶಾಂತ್ ಕಿನಿ ಸುಳಿವು ನೀಡಿದ್ದಾರೆ.

ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ತಾರೆ
ತಮ್ಮ ಸೋಷಿಯಲ್ ಮೀಡಿಯಾದಲ್ಲೇ ಭವಿಷ್ಯವಾಣಿಗಳನ್ನು ಪೋಸ್ಟ್ ಮಾಡುತ್ತಾರೆ. ಈಗ ರಾಜ್ಯ ರಾಜಕಾರಣ ಬಗ್ಗೆ ಸ್ಫೋಟಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. "ಕರ್ನಾಟಕ ಕಾಂಗ್ರೆಸ್ನ ಕೆಟ್ಟ ಆಡಳಿತದಿಂದಾಗಿ ಕರ್ನಾಟಕ ಎರಡು ಭಾಗವಾಗಲಿದೆ. ಸಿದ್ದರಾಮಯ್ಯ ಅವರು ಅಧಿಕಾರ ಕಳೆದುಕೊಳ್ಳಲಿದ್ದಾರೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದಿಲ್ಲ" ಎಂದು ಭವಿಷ್ಯ ನುಡಿದಿದ್ದಾರೆ.
ಎರಡು ತಿಂಗಳ ಹಿಂದೆಯೂ ಪ್ರಶಾಂತ್ ಕಿನಿ ಭವಿಷ್ಯ ನುಡಿದಿದ್ದರು. ಕರ್ನಾಟಕ ಕಾಂಗ್ರೆಸ್ ಎರಡು ಭಾಗವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹುದ್ದೆಯನ್ನು ಕಳೆದುಕೊಳ್ಳಲಿದ್ದಾರೆ. ಕರ್ನಾಟಕದ ಜನರು ಇದಕ್ಕೆ ಬೆಲೆ ತೆರಲಿದ್ದಾರೆ. ಮೈಸೂರು ತೊಂದರೆಗಳನ್ನು ಎದುರಿಸಲಿದೆ. ಭವಿಷ್ಯದಲ್ಲಿ ಕರ್ನಾಟಕ ಎರಡು ಭಾಗವಾಗಲಿದೆ" ಎಂದು ಪೋಸ್ಟ್ನಲ್ಲಿ ತಿಳಿಸಿದ್ದರು. ಈಗ ಮತ್ತೊಮ್ಮೆ ಹೊಸ ಭವಿಷ್ಯ ನುಡಿದಿದ್ದಾರೆ.
"ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ ಗೆಲುವು ಸಾಧಿಸಲಿದೆ ಎಂದು ಜುಲೈ ತಿಂಗಳಲ್ಲೇ ಭವಿಷ್ಯ ಹೇಳಿದ್ದರು. ಗಾಂಧಿ ಕುಟುಂಬವಲ್ಲದ ಬೇರೆ ಯಾರಾದರೂ ಕಾಂಗ್ರೆಸ್ಸಿನ ನಾಯಕತ್ವ ವಹಿಸಿಕೊಂಡರೆ ಕಾಂಗ್ರೆಸ್ಸಿನ ಪುನರುಜ್ಜೀವನ ಸಾಧ್ಯ. ರಾಹುಲ್ ಗಾಂಧಿ ಸಕ್ರಿಯ ರಾಜಕಾರಣದಿಂದ ನಿರ್ಗಮಿಸುವ ದಿನ ಬಿಜೆಪಿಗೆ ಕೆಟ್ಟ ದಿನಗಳು ಎದುರಾಗಲಿವೆ" ಎಂದೂ ಪೋಸ್ಟ್ ಹಂಚಿಕೊಂಡಿದ್ದಾರೆ.
ದರ್ಶನ್-ಯಶ್ ಬಗ್ಗೆಯೂ ಅಚ್ಚರಿ ಭವಿಷ್ಯ!
ನಟ ದರ್ಶನ್ ಕೇಸ್ ವಿಚಾರವಾಗಿಯೂ ಪ್ರಶಾಂತ್ ಕಿನಿ ಅಚ್ಚರಿ ಭವಿಷ್ಯ ನುಡಿದಿದ್ದರು. ದರ್ಶನ್ ಅವರು ಶುಭ್ರವಾಗಿ ಹೊರಬರುತ್ತಾರೆ ಎಂದು ನಾನು ಈಗಾಗಲೇ ಭವಿಷ್ಯ ನುಡಿದಿದ್ದೇನೆ. ನಾನು ಯಾವಾಗಲೂ ಸರಿ ಎಂದು ಪ್ರಶಾಂತ್ ಕಿನಿ ಹೇಳಿದ್ದಾರೆ. ಯಶ್ ಅವರ 'ಟಾಕ್ಸಿಕ್' ಸಿನಿಮಾ ಮುಂದಿನ ವರ್ಷ ಬಿಡುಗಡೆಯಾಗುತ್ತೆ. ಯಶ್ ಅವರ ಸಿನಿಮಾ ಬಾಕ್ಸ್ ಆಫೀಸ್ ನಷ್ಟ ಅನುಭವಿಸಲಿದೆ, ಅವರು ಇನ್ನಷ್ಟು ಉತ್ತುಂಗಕ್ಕೇರಿದ ನಂತರ ಮತ್ತೆ ಕೆಳಗೆ ಇಳಿಯುತ್ತಾರೆ, ತೊಂದರೆ ಎದುರಿಸಬೇಕಾಗುತ್ತೆ ಎಂದೂ ಹೇಳಿದ್ದಾರೆ. ಈಗ ನುಡಿದಿರುವ ರಾಜಕೀಯದ ಭವಿಷ್ಯವಾಣಿಯು ಎಷ್ಟರಮಟ್ಟಿಗೆ ನಿಜವಾಗುತ್ತೆ? ಎಂಬುದು ಸದ್ಯದಲ್ಲೇ ತಿಳಿಯಲಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications