ರೋಗಲಕ್ಷಣವಿಲ್ಲದ ಸೋಂಕಿತರ ಡಿಸ್ಚಾರ್ಜ್: ಸರ್ಕಾರದ ಹೊಸ ಆದೇಶ
ಬೆಂಗಳೂರು, ಜೂ. 24: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈಗಲೇ ಆಸ್ಪತ್ರೆಗಳು ತುಂಬುತ್ತಿವೆ. ಹೀಗಾಗಿ ಸೋಂಕು ದೃಢಪಟ್ಟಿದ್ದರೂ ಯಾವುದೇ ರೋಗಲಕ್ಷಣಗಳಿಲ್ಲದ ಸೋಂಕಿತರ ಬಿಡುಗಡೆಗೆ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ.
Recommended Video
ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಸೋಂಕಿತರಿಗೆ ಚಕಿತ್ಸೆ ಕೊಡುವುದು ಸರ್ಕಾರಿ ಆಸ್ಪತ್ರೆಗಳಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಚಿಕಿತ್ಸೆ ಬಳಿಕ ಬಿಡುಗಡೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಮೊದಲು ಎರಡು ಬಾರಿ ಸೋಂಕು ನೆಗಟಿವ್ ಬರಬೇಕಿತ್ತು. ಆದರೆ ಇದೀಗ ಮಾರ್ಗಸೂಚಿ ಬದಲಿಸಿರುವ ಸರ್ಕಾರ ಸತತ 10 ದಿನಗಳ ಕಾಲ ಯಾವುದೇ ರೋಗಲಕ್ಷಣಗಳನ್ನು (asymptomatic) ತೋರಿಸದ ರೋಗಿಗಳನ್ನು ಮತ್ತೆ ಸ್ವಾಬ್ ಪರೀಕ್ಷೆ ಮಾಡದೇ ಬಿಡುಗಡೆ ಮಾಡಬಹುದು ಎಂದು ಸೂಚಿಸಲಾಗಿದೆ.

ಜೊತೆಗೆ ರೋಗ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ದಾಖಲಾದವರು ಸತತ 13 ದಿನಗಳ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡ ಬಳಿಕ ಪರೀಕ್ಷಾ ವರದಿಗೆ ಕಾಯದೆ ಬಿಡುಗಡೆ ಮಾಡಬಹುದು. ಆದರೆ 14 ದಿನಗಳ ಬಳಿಕವೂ ಕೊರೊನಾ ವೈರಸ್ ಲಕ್ಷಣಗಳನ್ನು ತೋರಿಸುವ ರೋಗಿಗಳನ್ನು ಸಂಪೂರ್ಣ ಗುಣಮುಖರಾದ ಬಳಿಕವೇ ಬಿಡುಗಡೆ ಮಾಡಬೇಕೆಂದು ಸೂಚಿಸಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications