ಕಲಬುರಗಿ ನಿರಾಶ್ರಿತರಿಗೆ ಸೂರು ನೀಡಬೇಕು: ಖರ್ಗೆ ಆಶಯ
ಕಲಬುರಗಿ, ಮೇ 13: ಕಲುಬುರಗಿ ಜಿಲ್ಲೆಯಲ್ಲಿ ಸುಮಾರು 8 ಸಾವಿರ ನಿರಾಶ್ರಿತರು ಇದ್ದು, ಅವರಿಗೆ ತಮ್ಮದೇ ಆದ ಸೂರು ಎಂಬುದಿಲ್ಲ. ಮುಂದಿನ ಒಂದು ವರ್ಷದಲ್ಲಿ ಕನಿಷ್ಟ 4 ಸಾವಿರ ಜನರಿಗಾದರೂ ಮನೆ ಕಟ್ಟಿಕೊಡುವ ಕೆಲಸ ಆಗಬೇಕು ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಆಶಿಸಿದರು.
ಇಲ್ಲಿನ ಮಹಾನಗರ ಪಾಲಿಕೆಯಿಂದ ನಿರ್ಮಿಸಲ್ಪಟ್ಟ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಆಶ್ರಯ ಯೋಜನೆಯಡಿ ನಿರ್ಮಿಸಿರುವ ಮನೆಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

''ನಗರ ವ್ಯಾಪ್ತಿಯಲ್ಲಿರುವ ಸರ್ಕಾರಿ ಜಮೀನುಗಳಲ್ಲಿ ಗುರುತಿಸಿ ಅಲ್ಲಿ ಆಶ್ರಯ ರಹಿತರಿಗೆ ಮನೆ ಕಟ್ಟಿಸಿಕೊಡುವ ಕೆಲಸವಾಗಬೇಕು'' ಎಂದು ಅವರು ತಿಳಿಸಿದರು.












Click it and Unblock the Notifications