ಕರ್ನಾಟಕ | ವಿಮಾನ ನಿಲ್ದಾಣಕ್ಕೆ ಆಸ್ಟ್ರಿಯಾದಿಂದ ಬಂದಿಳಿದ 2 ಅಗ್ನಿಶಾಮಕ ವಾಹನ
ಬೆಂಗಳೂರು, ಸೆಪ್ಟಂಬರ್ 23: ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಯಾಗಿರುವ ವಿಜಯಪುರದಲ್ಲಿ ನೂತನ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಉದ್ಘಾಟನೆಗೆ ಸಜ್ಜಾಗುತ್ತಿರುವ ವಿಜಯಪುರದ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಅಗತ್ಯವಾದ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು ದೂರದ ಆಸ್ಟ್ರಿಯಾದಿಂದ ಬಂದಿಳಿದಿದೆ. ಇವು ಹೆಚ್ಚಿನ ಸಾಮರ್ಥ್ಯ ಹೊಂದಿದ ವಾಹನಗಳಾಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಮಾಹಿತಿ ನೀಡಿದರು.
ಈ ಅಗ್ನಿಶಾಮಕ ವಾಹನಗಳು ಕಂಪ್ಯೂಟರೀಕೃತವಾಗಿದ್ದು, ಜಾಗತಿಕ ಟೆಂಡರ್ ಅಡಿಯಲ್ಲಿ ಆಸ್ಟ್ರಿಯಾದಿಂದ ಪೂರೈಕೆಯಾಗಿವೆ. ಇವು ತುರ್ತು ಸಂದರ್ಭಗಳಲ್ಲಿ 160 ಮೀಟರಿನವರೆಗೂ ನೀರನ್ನು ಹಾಯಿಸಿ, ಬೆಂಕಿಯನ್ನು ನಂದಿಸುವ ಸಾಮರ್ಥ್ಯ ಹೊಂದಿವೆ. ಇದರೊಂದಿಗೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಹೇಳಿದ್ದ ಮತ್ತೊಂದು ಅಗತ್ಯ ಪೂರೈಸಲಾಗಿದೆ.

ಹಡಗಿನಲ್ಲಿ ಬಂದ ಅಗ್ನಿಶಾಮಕ ವಾಹನಗಳು
ಈ ಅಗ್ನಿಶಾಮಕ ವಾಹನಗಳು ನೆಲದ ಮೇಲಿನ ಬೆಂಕಿಯನ್ನು ನಂದಿಸಿಕೊಂಡು ವೇಗದಿಂದ ಮುನ್ನುಗ್ಗಬಲ್ಲವು. ವಿಜಯಪುರ ವಿಮಾನ ನಿಲ್ದಾಣದ ಮೂಲ ವಿನ್ಯಾಸದಲ್ಲಿ ಈ ಸೌಲಭ್ಯಗಳು ಇರಲಿಲ್ಲ. ಆಮೇಲೆ ಇದರ ಜತೆಗೆ ಇನ್ನೂ ಹಲವು ಅನುಕೂಲಗಳನ್ನು ಸೇರಿಸಲಾಯಿತು. ಆಸ್ಟ್ರಿಯಾದಿಂದ ಹಡಗಿನಲ್ಲಿ ಮುಂಬೈಗೆ ಬಂದಿಳಿದ ಈ ವಾಹನಗಳನ್ನು, ಅಲ್ಲಿಂದ ಟ್ರಕ್ ಮೂಲಕ ವಿಜಯಪುರಕ್ಕೆ ಸಾಗಿಸಿಕೊಂಡು ಬರಲಾಗಿದೆ.
ಎಂದು ಅವರು ವಿವರಿಸಿದ್ದಾರೆ.
ಅಗ್ನಿಶಾಮಕ ವಾಹನಗಳು ಬಂದಿರುವುದರಿಂದ ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಯತ್ತ ಮತ್ತೊಂದು ಹೆಜ್ಜೆ ಮುಂದಿಡಲಾಗಿದೆ. ಪರಿಸರ ಸಂಬಂಧಿ ಅನುಮತಿ ಮಾತ್ರ ಬಾಕಿ ಇದ್ದು, ಅದನ್ನು ಪಡೆದುಕೊಳ್ಳಲು ಕೂಡ ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.
Vijayapura Airport: Two Firefighting Vehicles Arrive from Austria
— M B Patil (@MBPatil) September 22, 2025
Two state-of-the-art firefighting vehicles have arrived from distant Austria for the soon-to-be-inaugurated Greenfield Airport at Vijayapura.
These vehicles are fully computerized and were supplied through a… pic.twitter.com/EVzCsTbybX
ಏರ್ಪೋರ್ಟ್ಗೆ ಹೆಚ್ಚುವರಿ ಅನುದಾನಕ್ಕೆ ಒಪ್ಪಿಗೆ
ಸದರಿ ವಿಜಯಪುರದ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270 ಕೋಟಿ ರೂಪಾಯಿ ಒದಗಿಸಲು ಇತ್ತೀಚೆಗೆ ಕರ್ನಾಟಕ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಏರ್ಬಸ್-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಹಾಗೂ ರಾತ್ರಿ ವೇಳೆ ಲ್ಯಾಂಡಿಂಗ್ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ಈ ಅನುದಾನ ಬಳಸಿಕೊಳ್ಳಲಾಗುತ್ತದೆ ಎಂದು ಇತ್ತೀಚೆಗೆ ಸಚಿವರು ತಿಳಿಸಿದ್ದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications