ಗುಲ್ಬರ್ಗ : ಆಟೋ ಚಾಲಕರಿಂದ ಅತ್ಯಾಚಾರಕ್ಕೆ ಯತ್ನ
ಗುಲ್ಬರ್ಗ, ಜು. 16 : ಮುಂಬೈನಿಂದ ಬಂದಿದ್ದ ಮಹಿಳೆ ಮೇಲೆ ಇಬ್ಬರು ಆಟೋ ಚಾಲಕರು ಅತ್ಯಾಚಾರ ಮಾಡಲು ಯತ್ನಿಸಿದ ಘಟನೆ ಗುಲ್ಬರ್ಗದಲ್ಲಿ ನಡೆದಿದೆ. ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಚಾಲಕರು 50 ಸಾವಿರ ಹಣ, ಒಡವೆ ದೋಚಿ ಪರಾರಿಯಾಗಿದ್ದಾರೆ.
ಮಂಗಳವಾರ ಸಂಜೆ ಮುಂಬೈನಿಂದ ಗುಲ್ಬರ್ಗಕ್ಕೆ ಮಹಿಳೆ ರೈಲಿನಲ್ಲಿ ಆಗಮಿಸಿದ್ದರು. ನಂತರ ಗಂಜ್ ಪ್ರದೇಶಕ್ಕೆ ತೆರಳಲು ಆಟೋ ಏರಿದ್ದರು. ಆದರೆ, ಆಟೋ ಚಾಲಕ ನಿಗದಿತ ಸ್ಥಳಕ್ಕೆ ಮಹಿಳೆಯನ್ನು ಕರೆದೊಯ್ಯದೆ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮತ್ತೊಬ್ಬನ ಜೊತೆ ಸೇರಿ ಅತ್ಯಾಚಾರ ಮಾಡಲು ಯತ್ನಿಸಿದ್ದಾರೆ.

ಪ್ರತಿರೋಧ ತೋರಿದ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಇಬ್ಬರು, ಮಹಿಳೆ ಬಳಿ ಇದ್ದ 50 ಸಾವಿರ ರೂ. ಹಣ ಮತ್ತು ಒಡವೆಗಳನ್ನು ದೋಚಿ ಪರಾರಿಯಾಗಿದ್ದಾರೆ. ಮಹಿಳೆಯನ್ನು ಗಮನಿಸಿದ ಸ್ಥಳೀಯರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. [ಬೆಂಗಳೂರು : ಅತ್ಯಾಚಾರಕ್ಕೊಳಗಾದ ಯುವತಿ ದೂರಿನಲ್ಲೇನಿದೆ?]
ಮಹಿಳೆಯ ತಲೆ, ಭುಜದ ಭಾಗದಲ್ಲಿ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಹಲ್ಲೆಯಿಂದಾಗಿ ರಕ್ತ ಸೋರಿಕೆಯಾಗಿದ್ದು, ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಣಾಪಾಯದಿಂದ ಅವರು ಪಾರಾಗಿದ್ದಾರೆ ಎಂದು ವೈದ್ಯರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಆಟೋ ಚಾಲಕರಿಗಾಗಿ ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ. ಮಹಿಳೆ ಚೇತರಿಸಿಕೊಂಡ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications