ಕನ್ನಡ ಕೇಂದ್ರಕ್ಕೆ ಸ್ವಾಯತ್ತತೆ: ಕೇಂದ್ರ ಸಚಿವರ ಭರವಸೆ
ನವದೆಹಲಿ. ಏಪ್ರಿಲ್, 26: ಮೈಸೂರಿನಲ್ಲಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸಂಪೂರ್ಣ ಸ್ವಾಯತ್ತತೆ ನೀಡಿ ಕರ್ನಾಟಕ ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ನಿವೇಶನ ನೀಡಿದ ಕೂಡಲೇ ಸ್ಥಳಾಂತರಕ್ಕೆ ಎಲ್ಲ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವೆ ಸ್ಮೃತಿ ಇರಾನಿ ಅವರು ತಿಳಿಸಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಎಲ್. ಹನುಮಂತಯ್ಯ, ಸಂಶೋಧಕ ಡಾ. ಎಂ. ಚಿದಾನಂದ ಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮನುಬಳಿಗಾರ, ಕೇಂದ್ರ ರಸಗೊಬ್ಬರ ಸಚಿವ ಅನಂತ ಕುಮಾರ್, ಸದಾನಂದಗೌಡ, ಸಿದ್ದೇಶ್ವರ್ , ಸಂಸದ ಯಡಿಯೂರಪ್ಪ ನಿಯೋಗ ಸಲ್ಲಿಕೆ ಮಾಡಿದ ಮನವಿಗೆ ಇರಾನಿ ಸ್ಪಂದನೆ ನೀಡಿದ್ದಾರೆ.[ಮೇಷ್ಟ್ರೇ 60 ಅಂಕ ಕೊಡಿ, ನಿಮಗೆ ಪುಣ್ಯ ಗ್ಯಾರಂಟಿ!]

ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸಲು ರಾಜ್ಯ ಸರ್ಕಾರ ನಿವೇಶನವನ್ನು ನೀಡಿದ್ದರೂ ಕಟ್ಟಡಗಳನ್ನೊ ಮತ್ತು ಇತರ ಮೂಲಭೂತ ಸೌಕರ್ಯಗಳಿಲ್ಲದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಕಟ್ಟಡ ನೀಡಿದರೆ 15 ದಿನಗಳೊಳಗೆ ಸ್ಥಳಾಂತರಿಸಲಾಗುವುದು. ಕನ್ನಡ ಭಾಷೆಗೆ ರಾಷ್ಟ್ರ ಮಟ್ಟದ ಭಾಷಾ ಪುರಸ್ಕಾರ ನೀಡಲು ಅಂಗೀಕರಿಸುವಂತೆ ರಾಷ್ಟ್ರಪತಿಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ಶಿಫಾರಸು ಮಾಡಿದೆ ಎಂದು ಅವರು ಇರಾನಿ ತಿಳಿಸಿದರು.
ಕೇಂದ್ರ ಸಚಿವ ಅನಂತ ಕುಮಾರ್ ಮಾತನಾಡಿ, ರಾಜ್ಯ ಸರ್ಕಾರವು 3.5 ಎಕರೆ ನಿವೇಶವನ್ನು ನೀಡಿದೆಯಾದರೂ ಕಟ್ಟಡ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆಯ ಹಿನ್ನೆಲೆಯಲ್ಲಿ ಸ್ಥಳಾಂತರ ಪ್ರಕ್ರಿಯೆಗೆ ವಿಳಂಭವಾಗಬಾರದು. ರಾಜ್ಯ ಸರ್ಕಾರವು ಕೂಡಲೇ ತಾತ್ಕಾಲಿಕ ಕಟ್ಟಡವನ್ನು ಒದಗಿಸಬೇಕು. ಈ ಕುರಿತು ಮುಖ್ಯಮಂತ್ರಿಗಳು ಹಾಗು ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.[ನಮ್ಮ ವೆಬ್ ಸೈಟಿಗೆ 16 ಬೇವು, 16 ಬೆಲ್ಲ]
ನಹದೆಹಲಿಯ ಜವಹಾರಲಾಲ್ ನೆಹರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಪುರುಷೋತ್ತಮ ಬಿಳಿಮಲೆ, ಚಿಂತಕ ರಾ ನಂ ಚಂದ್ರಶೇಖರ್, ಕನ್ನಡ ಭಾಷಾ ಅತ್ಯುನ್ನತ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕರ ಪ್ರೊ. ಪಿ. ಕೆ. ಖಂಡೋಬಾ ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ಡಾ. ಕೆ. ಮುರಳಿಧರ, ಸಂಸದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಶಿವಕುಮಾರ್ ಉದಾಸಿ, ಪ್ರತಾಪ್ ಸಿಂಹ, ಸುರೇಶ್ ಅಂಗಡಿ, ಭಗಂತ ಖೂಬಾ, ರಮೇಶ್ ಜಿಗಜಿಣಗಿ, ಪಿ.ಸಿ. ಮೋಹನ್ ಇದ್ದರು.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್











Click it and Unblock the Notifications