ಕನ್ನಡ ಕೇಂದ್ರಕ್ಕೆ ಸ್ವಾಯತ್ತತೆ: ಕೇಂದ್ರ ಸಚಿವರ ಭರವಸೆ
ನವದೆಹಲಿ. ಏಪ್ರಿಲ್, 26: ಮೈಸೂರಿನಲ್ಲಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸಂಪೂರ್ಣ ಸ್ವಾಯತ್ತತೆ ನೀಡಿ ಕರ್ನಾಟಕ ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ನಿವೇಶನ ನೀಡಿದ ಕೂಡಲೇ ಸ್ಥಳಾಂತರಕ್ಕೆ ಎಲ್ಲ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವೆ ಸ್ಮೃತಿ ಇರಾನಿ ಅವರು ತಿಳಿಸಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಎಲ್. ಹನುಮಂತಯ್ಯ, ಸಂಶೋಧಕ ಡಾ. ಎಂ. ಚಿದಾನಂದ ಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮನುಬಳಿಗಾರ, ಕೇಂದ್ರ ರಸಗೊಬ್ಬರ ಸಚಿವ ಅನಂತ ಕುಮಾರ್, ಸದಾನಂದಗೌಡ, ಸಿದ್ದೇಶ್ವರ್ , ಸಂಸದ ಯಡಿಯೂರಪ್ಪ ನಿಯೋಗ ಸಲ್ಲಿಕೆ ಮಾಡಿದ ಮನವಿಗೆ ಇರಾನಿ ಸ್ಪಂದನೆ ನೀಡಿದ್ದಾರೆ.[ಮೇಷ್ಟ್ರೇ 60 ಅಂಕ ಕೊಡಿ, ನಿಮಗೆ ಪುಣ್ಯ ಗ್ಯಾರಂಟಿ!]

ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸಲು ರಾಜ್ಯ ಸರ್ಕಾರ ನಿವೇಶನವನ್ನು ನೀಡಿದ್ದರೂ ಕಟ್ಟಡಗಳನ್ನೊ ಮತ್ತು ಇತರ ಮೂಲಭೂತ ಸೌಕರ್ಯಗಳಿಲ್ಲದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಕಟ್ಟಡ ನೀಡಿದರೆ 15 ದಿನಗಳೊಳಗೆ ಸ್ಥಳಾಂತರಿಸಲಾಗುವುದು. ಕನ್ನಡ ಭಾಷೆಗೆ ರಾಷ್ಟ್ರ ಮಟ್ಟದ ಭಾಷಾ ಪುರಸ್ಕಾರ ನೀಡಲು ಅಂಗೀಕರಿಸುವಂತೆ ರಾಷ್ಟ್ರಪತಿಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ಶಿಫಾರಸು ಮಾಡಿದೆ ಎಂದು ಅವರು ಇರಾನಿ ತಿಳಿಸಿದರು.
ಕೇಂದ್ರ ಸಚಿವ ಅನಂತ ಕುಮಾರ್ ಮಾತನಾಡಿ, ರಾಜ್ಯ ಸರ್ಕಾರವು 3.5 ಎಕರೆ ನಿವೇಶವನ್ನು ನೀಡಿದೆಯಾದರೂ ಕಟ್ಟಡ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆಯ ಹಿನ್ನೆಲೆಯಲ್ಲಿ ಸ್ಥಳಾಂತರ ಪ್ರಕ್ರಿಯೆಗೆ ವಿಳಂಭವಾಗಬಾರದು. ರಾಜ್ಯ ಸರ್ಕಾರವು ಕೂಡಲೇ ತಾತ್ಕಾಲಿಕ ಕಟ್ಟಡವನ್ನು ಒದಗಿಸಬೇಕು. ಈ ಕುರಿತು ಮುಖ್ಯಮಂತ್ರಿಗಳು ಹಾಗು ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.[ನಮ್ಮ ವೆಬ್ ಸೈಟಿಗೆ 16 ಬೇವು, 16 ಬೆಲ್ಲ]
ನಹದೆಹಲಿಯ ಜವಹಾರಲಾಲ್ ನೆಹರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಪುರುಷೋತ್ತಮ ಬಿಳಿಮಲೆ, ಚಿಂತಕ ರಾ ನಂ ಚಂದ್ರಶೇಖರ್, ಕನ್ನಡ ಭಾಷಾ ಅತ್ಯುನ್ನತ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕರ ಪ್ರೊ. ಪಿ. ಕೆ. ಖಂಡೋಬಾ ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ಡಾ. ಕೆ. ಮುರಳಿಧರ, ಸಂಸದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಶಿವಕುಮಾರ್ ಉದಾಸಿ, ಪ್ರತಾಪ್ ಸಿಂಹ, ಸುರೇಶ್ ಅಂಗಡಿ, ಭಗಂತ ಖೂಬಾ, ರಮೇಶ್ ಜಿಗಜಿಣಗಿ, ಪಿ.ಸಿ. ಮೋಹನ್ ಇದ್ದರು.
-
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ











Click it and Unblock the Notifications