ಜನ ಸಾಮಾನ್ಯರಿಗೂ ಏರ್ ಆಂಬುಲೆನ್ಸ್ ಸೌಲಭ್ಯ ಇನ್ನೇನು ಲಭ್ಯ
ಬೆಂಗಳೂರು, ಮೇ 04: ಏರ್ ಆಂಬುಲೆನ್ಸ್ ಸೇವೆ ಕೇವಲ ಹಣ ಉಳ್ಳವರಿಗೆ ಮಾತ್ರವಲ್ಲದೇ ಇತರರಿಗೂ ದೊರೆಯಬೇಕು ಎನ್ನುವ ಕಲ್ಪನೆಯೊಂದಿಗೆ ಬೆಂಗಳೂರಿನ ಏವಿಯೇಟರ್ಸ್ ಏರ್ ರೆಸ್ಕ್ಯೂ ಕಂಪನಿ ಹೊಸ ಪ್ರಯತ್ನಕ್ಕೆ ಕೈ ಹಾಕಿದೆ. ದಾವಣಗೆರೆಯಿಂದ ಮೊಟ್ಟ ಮೊದಲ ಏರ್ ಆಂಬುಲೆನ್ಸ್ ಸೇವೆ ಟೇಕಾಫ್ ಆಗಲಿದೆ ಎಂಬ ಶುಭ ಸುದ್ದಿ ಸಿಕ್ಕಿದೆ.
ಹೃದಯಾಘಾತ, ರಸ್ತೆ ಅಪಘಾತ ಸೇರಿ ಪ್ರಾಣಾಪಾಯದ ವೇಳೆ ಎದುರಾದಾಗ ವಿಶೇಷ ವೈದ್ಯಕೀಯ ಸೌಲಭ್ಯ ಹೊಂದಿರುವ ಆಸ್ಪತ್ರೆ ಗಳಿಗೆ ರೋಗಿಯನ್ನು ಕರೆದುಕೊಂಡು ಹೋಗಬೇಕಾಗುತ್ತದೆ. ಅಂಥ ಸಂದರ್ಭದಲ್ಲಿ ಸಮಯ ಬಹಳ ಮಹತ್ವ ಪಡೆಯುತ್ತದೆ.
ಯಾವುದಾದರೂ ಖಾಸಗಿ ಹೆಲಿಕಾಪ್ಟರ್ ಸೇವೆ ಪಡೆದು ದಾವಣಗೆರೆಯಿಂದ ಬೆಂಗಳೂರಿಗೆ ಹೋಗಿ ಬರಲು ಕನಿಷ್ಠ 3ಲಕ್ಷ ರೂ. ವೆಚ್ಚವಾಗುತ್ತದೆ.ಅಷ್ಟು ಹಣ ಭರಿಸುವುದು ಎಲ್ಲರಿಗೂ ಸಾಧ್ಯವಾಗದ ಮಾತು.ಇದಕ್ಕಾಗಿಯೇ ಏವಿಯೇಟರ್ಸ್ ಏರ್ ರೆಸ್ಕ್ಯೂ ಕಂಪನಿ ಹೊಸ ಯೋಜನೆಯೊಂದನ್ನು ಜನರ ಮುಂದಿಡುತ್ತಿದೆ.
ಮೇ 5ರಂದು ದಾವಣಗೆರೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಸೇವೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು.ಅಕ್ಟೋಬರ್ ತಿಂಗಳಿಂದ ಸೇವೆ ಲಭ್ಯವಾಗಲಿದೆ.ಇದಕ್ಕಾಗಿ ಆಸಕ್ತರು ಸದಸ್ಯತ್ವ ಪಡೆಯಬೇಕಾಗುತ್ತದೆ.
ಪತಿ, ಪತ್ನಿ, 18ವರ್ಷದೊಳಗಿನ ಎರಡು ಮಕ್ಕಳನ್ನು ಒಳಗೊಂಡ ಒಂದು ಕುಟುಂಬ ಪ್ರತಿ ವರ್ಷ ಕಂಪನಿಗೆ 17,999 ರೂ. ಪಾವತಿಸಬೇಕು. ಯೊಜನೆಯ ಸದಸ್ಯತ್ವ ಪಡೆದ ಕುಟುಂಬದವರಿಗೆ ವರ್ಷದಲ್ಲಿ 3 ಬಾರಿ ಹೆಲಿಕಾಪ್ಟರ್ ಅಗತ್ಯವಿದ್ದರೂ ನೀಡಲಾಗುವುದು ಎನ್ನುತ್ತಾರೆ ಕಂಪನಿಯ ಅಧಿಕಾರಿಗಳು.
ಏವಿಯೇಟರ್ಸ್ ಏರ್ ರೆಸ್ಕ್ಯೂ ಕಂಪನಿ ಅಮೆರಿಕದ ಏರ್ಮೆಡಿಕಲ್ ಗ್ರೂಪ್ ಆಫ್ ಹೋಲ್ಡಿಂಗ್ ಕಂಪನಿಯೊಂದಿಗೆ ಸಹಭಾಗಿತ್ವ ಪಡೆದಿದೆ. ಕಂಪನಿಯು ಮೊದಲ ಹಂತದಲ್ಲಿ ತಲಾ 30ಕೋಟಿ ವೆಚ್ಚದ 3 ಹೆಲಿಕಾಪ್ಟರ್ ಖರೀದಿಸಲಿದೆ.2ನೇ ಹಂತದಲ್ಲಿ 6 ಹೆಲಿಕಾಪ್ಟರ್, ಮುಂದಿನ 5 ವರ್ಷಗಳಲ್ಲಿ 50 ಹೆಲಿಕಾಪ್ಟರ್ ಹೊಂದುವುದು ಕಂಪನಿಯ ಯೋಜನೆಯಾಗಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ













Click it and Unblock the Notifications