ಗುರುವಾರ ರೈಲ್ವೆ ಬಂದ್, ಪೊಲೀಸರಿಂದ ಅಗತ್ಯ ಭದ್ರತೆ
ಬೆಂಗಳೂರು, ಸೆಪ್ಟೆಂಬರ್ 14 : ಕನ್ನಡ ಒಕ್ಕೂಟ ಸೆಪ್ಟೆಂಬರ್ 15ರಂದು ಕರ್ನಾಟಕದಲ್ಲಿ ರೈಲ್ವೆ ಬಂದ್ಗೆ ಕರೆ ನೀಡಿದೆ. ಸುಮಾರು 1 ಲಕ್ಷ ಜನರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಆದ್ದರಿಂದ, ಗುರುವಾರ ರೈಲ್ವೆ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.
ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಸೆಪ್ಟೆಂಬರ್ 15ರ ಗುರುವಾರ ಕರ್ನಾಟಕ ಬಂದ್ಗೆ ಕರೆ ನೀಡಿಲ್ಲ. ಆದರೆ, ಮೊದಲೇ ಘೋಷಣೆ ಮಾಡಿದಂತೆ ರೈಲ್ವೆ ಬಂದ್ ನಡೆಯಲಿದೆ' ಎಂದು ಹೇಳಿದ್ದಾರೆ. [ರೈಲು ಟಿಕೆಟ್ ಕೊಳ್ಳಲು ಆಧಾರ್ ಕಡ್ಡಾಯ]

ಕಾವೇರಿ ನದಿ ನೀರು ಹಂಚಿಕೆ ಮತ್ತು ಮಹದಾಯಿ ವಿವಾದದಲ್ಲಿ ಬಂದ ತೀರ್ಪನ್ನು ಖಂಡಿಸಿ ರೈಲ್ವೆ ಬಂದ್ ನಡೆಸಲಾಗುತ್ತಿದೆ. ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ರೈಲ್ವೆ ಬಂದ್ ಕರೆ ನೀಡಲಾಗಿದೆ. ಆದ್ದರಿಂದ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುರುವಾರ ರೈಲ್ವೆ ಸಂಚಾರ ಅಸ್ತವ್ಯಸ್ತವಾಗುವ ಸಾಧ್ಯತೆ ಇದೆ.[ಮಹದಾಯಿ ನೀರು ಹಂಚಿಕೆ : ಅಂದಿನಿಂದ ಇಂದಿನವರೆಗೆ]
ಮಹದಾಯಿ ಮತ್ತು ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯಲು ಬಂದ್ ಕರೆ ನೀಡಲಾಗಿದೆ. ಸುಮಾರು 1 ಲಕ್ಷ ಜನರು ಈ ಬಂದ್ನಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ವಿವಿಧ ಜಿಲ್ಲೆಗಳಲ್ಲಿ ರೈಲು ಸಂಚಾರವನ್ನು ತಡೆಯಲಿದ್ದಾರೆ.[ಬೆಂಗಳೂರು ರೈಲ್ವೆ ನಿಲ್ದಾಣದಲ್ಲೇ ಸಿಗಲಿದೆ ಓಲಾ ಕ್ಯಾಬ್]
ಸೋಮವಾರ ಬೆಂಗಳೂರಿನಲ್ಲಿ ಗಲಭೆ ನಡೆದಿರುವ ಹಿನ್ನಲೆಯಲ್ಲಿ, ಸೆ.15ರಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಬೆಂಗಳೂರು ಪೊಲೀಸರು ಹೆಚ್ಚಿನ ಬಂದೋಬಸ್ತ್ ಮಾಡಿದ್ದಾರೆ. ಈಗಾಗಲೇ ನಗರದಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. 16 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ತನಕ ಕರ್ಪ್ಯೂ ಜಾರಿಯಲ್ಲಿದೆ.
@BlrCityPolice @blrcitytraffic All security arrangements made in all Railway stations of Karnataka. Tomorrow Trains will be running normally
— KAR Railway Police (@KARailwayPolice) September 14, 2016












Click it and Unblock the Notifications