ಗುರುವಾರ ರೈಲ್ವೆ ಬಂದ್, ಪೊಲೀಸರಿಂದ ಅಗತ್ಯ ಭದ್ರತೆ
ಬೆಂಗಳೂರು, ಸೆಪ್ಟೆಂಬರ್ 14 : ಕನ್ನಡ ಒಕ್ಕೂಟ ಸೆಪ್ಟೆಂಬರ್ 15ರಂದು ಕರ್ನಾಟಕದಲ್ಲಿ ರೈಲ್ವೆ ಬಂದ್ಗೆ ಕರೆ ನೀಡಿದೆ. ಸುಮಾರು 1 ಲಕ್ಷ ಜನರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಆದ್ದರಿಂದ, ಗುರುವಾರ ರೈಲ್ವೆ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.
ಕನ್ನಡ
ಚಳವಳಿ
ವಾಟಾಳ್
ಪಕ್ಷದ
ಅಧ್ಯಕ್ಷ
ವಾಟಾಳ್
ನಾಗರಾಜ್
ಅವರು
ಈ
ಕುರಿತು
ಮಾಹಿತಿ
ನೀಡಿದ್ದಾರೆ.
'ಸೆಪ್ಟೆಂಬರ್
15ರ
ಗುರುವಾರ
ಕರ್ನಾಟಕ
ಬಂದ್ಗೆ
ಕರೆ
ನೀಡಿಲ್ಲ.
ಆದರೆ,
ಮೊದಲೇ
ಘೋಷಣೆ
ಮಾಡಿದಂತೆ
ರೈಲ್ವೆ
ಬಂದ್
ನಡೆಯಲಿದೆ'
ಎಂದು
ಹೇಳಿದ್ದಾರೆ.
[ರೈಲು
ಟಿಕೆಟ್
ಕೊಳ್ಳಲು
ಆಧಾರ್
ಕಡ್ಡಾಯ]
ಕಾವೇರಿ ನದಿ ನೀರು ಹಂಚಿಕೆ ಮತ್ತು ಮಹದಾಯಿ ವಿವಾದದಲ್ಲಿ ಬಂದ ತೀರ್ಪನ್ನು ಖಂಡಿಸಿ ರೈಲ್ವೆ ಬಂದ್ ನಡೆಸಲಾಗುತ್ತಿದೆ. ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ರೈಲ್ವೆ ಬಂದ್ ಕರೆ ನೀಡಲಾಗಿದೆ. ಆದ್ದರಿಂದ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುರುವಾರ ರೈಲ್ವೆ ಸಂಚಾರ ಅಸ್ತವ್ಯಸ್ತವಾಗುವ ಸಾಧ್ಯತೆ ಇದೆ.[ಮಹದಾಯಿ ನೀರು ಹಂಚಿಕೆ : ಅಂದಿನಿಂದ ಇಂದಿನವರೆಗೆ]
ಮಹದಾಯಿ ಮತ್ತು ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯಲು ಬಂದ್ ಕರೆ ನೀಡಲಾಗಿದೆ. ಸುಮಾರು 1 ಲಕ್ಷ ಜನರು ಈ ಬಂದ್ನಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ವಿವಿಧ ಜಿಲ್ಲೆಗಳಲ್ಲಿ ರೈಲು ಸಂಚಾರವನ್ನು ತಡೆಯಲಿದ್ದಾರೆ.[ಬೆಂಗಳೂರು ರೈಲ್ವೆ ನಿಲ್ದಾಣದಲ್ಲೇ ಸಿಗಲಿದೆ ಓಲಾ ಕ್ಯಾಬ್]
ಸೋಮವಾರ ಬೆಂಗಳೂರಿನಲ್ಲಿ ಗಲಭೆ ನಡೆದಿರುವ ಹಿನ್ನಲೆಯಲ್ಲಿ, ಸೆ.15ರಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಬೆಂಗಳೂರು ಪೊಲೀಸರು ಹೆಚ್ಚಿನ ಬಂದೋಬಸ್ತ್ ಮಾಡಿದ್ದಾರೆ. ಈಗಾಗಲೇ ನಗರದಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. 16 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ತನಕ ಕರ್ಪ್ಯೂ ಜಾರಿಯಲ್ಲಿದೆ.
@BlrCityPolice @blrcitytraffic All security arrangements made in all Railway stations of Karnataka. Tomorrow Trains will be running normally
— KAR Railway Police (@KARailwayPolice) September 14, 2016