ಉಪ ಸಭಾಪತಿ ಆತ್ಮಹತ್ಯೆ ಪ್ರಕರಣ: ಆಯನೂರು ಮಂಜುನಾಥ್ ಪತ್ರ!
ಬೆಂಗಳೂರು, ಜ. 08: ಪ್ರತಾಪ್ ಚಂದ್ರ ಶೆಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೇಳಗಿಳಿಸುವ ನಿಟ್ಟಿನಲ್ಲಿ ಬಿಜೆಪಿ ನಡೆಸಿರುವ ಪ್ರಯತ್ನಗಳು ಮುಂದುವರೆದಿವೆ. ಡಿಸೆಂಬರ್ 15 ರಂದು ಪರಿಷತ್ತಿನಲ್ಲಿ ನಡೆದ ಘಟನೆಯ ತನಿಖೆಗೆ ಸದನ ಸಮಿತಿ ರಚನೆ ಮಾಡಿರುವುದು ನಿಯಮ ಬಾಹಿರವಾಗಿದ್ದು, ಅದನ್ನು ರದ್ದು ಪಡಿಸುವಂತೆ ಬಿಜೆಪಿ ಸದಸ್ಯ ಆಯನೂರು ಮಂಜುನಾಥ ಅವರು ಸಭಾಪತಿ ಪ್ರತಾಪ ಚಂದ್ರ ಶೆಟ್ಟಿ ಅವರಿಗೆ ಪತ್ರ ಬರೆದಿದ್ದಾರೆ.
ಸದನದ ಅಭಿಪ್ರಾಯ ಪಡೆಯದೆ ಸದನ ಸಮಿತಿಯನ್ನು ರಚನೆ ಮಾಡಲಾಗಿದೆ. ಅಲ್ಲದೆ ಜೆಡಿಎಸ್ ಸದಸ್ಯ ಮರಿತಿಬ್ಬೆಗೌಡ ಅವರು ತಾಂತ್ರಿಕವಾಗಿ ಜೆಡಿಎಸ್ ಸದಸ್ಯರಾಗಿದ್ದರೂ ಅವರು ಮಾನಸಿಕವಾಗಿ ಕಾಂಗ್ರೆಸ್ ಪರವಾಗಿದ್ದಾರೆ. ಹಾಗೂ ಅಂದಿನ ಘಟನೆಗೆ ಪ್ರಚೋದನೆ ನೀಡಿರುವ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಸಮಿತಿ ಸದಸ್ಯರನ್ನಾಗಿ ಮಾಡಿರುವುದು, ನಿಮ್ಮ (ಸಭಾಪತಿ) ತಪ್ಪನ್ನು ಮುಚ್ಚಿ ಹಾಕಿಕೊಳ್ಳುವ ಪ್ರಯತ್ನವಾಗಿದೆ ಎಂದು ಆಯನೂರು ಮಂಜುನಾಥ ಆರೋಪಿಸಿದ್ದಾರೆ.
ಅಲ್ಲದೇ ಪರಿಷತ್ತಿನಲ್ಲಿ ನಡೆಯುವ ಘಟನೆಗಳನ್ನು ಪರಿಶೀಲಿಸಲು ನೀತಿ ನಿರೂಪಣಾ ಸಮಿತಿ ಇರುವುದರಿಂದ ಈ ಘಟನೆಯನ್ನು ಸದನ ಸಮಿತಿ ಬದಲು ನೀತಿ ನಿರೂಪಣಾ ಸಮಿತಿಗೆ ವಹಿಸುವಂತೆ ಅವರು ಆಗ್ರಹಿಸಿದ್ದಾರೆ.

ಡಿಸೆಂಬರ್ 15ರ ವಿಶೇಷ ಅಧಿವೇಶದನದಲ್ಲಿ ನಡೆದ ಘಟನೆ ಬಳಿಕ, ಡಿ. 29 ರಂದು ಉಪಸಭಾಪತಿಯಾಗಿದ್ದ ಎಸ್.ಎಲ್, ಧರ್ಮೇಗೌಡ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಭಾಪತಿಗಳ ಸ್ಥಾನದಲ್ಲಿದ್ದ ಅವರನ್ನು ಕಾಂಗ್ರೆಸ್ ಸದಸ್ಯರು ಎಳೆದಾಡಿದ್ದರು. ಜೊತೆಗೆ ಬಿಜೆಜಪಿ ಸದಸ್ಯರು ಸಭಾಪತಿ ಪೀಠದಿಂದ ಏಳದಂತೆ ತಡೆದಿದ್ದರು. ಈ ಎಲ್ಲ ಕಾರಣಗಳಿಂದ ತಮ್ಮ ತಪ್ಪಿರದಿದ್ದರೂ, ಮರ್ಯಾದೆಗೆ ಅಂಜಿಕೊಂಡು ಉಪ ಸಭಾಪತಿಯಾಗಿದ್ದ ಎಸ್.ಎಲ್. ಧರ್ಮೇಗೌಡ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications