Get Updates
Get notified of breaking news, exclusive insights, and must-see stories!

ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಿದ್ದು ಕೇಂದ್ರ ಸರ್ಕಾರವಲ್ಲ: ಪೇಜಾವರ ಶ್ರೀ ಹೇಳಿದ್ದೇನು?

ಕೊಪ್ಪಳ, ಮೇ 10: ಹಿಂದೂ ದೇವಾಲಯಗಳನ್ನು ಹಿಂದೂಗಳಿಗೆ ಒಪ್ಪಿಸಬೇಕು. ಇತರ ಧರ್ಮಗಳ ಪ್ರಾರ್ಥನಾ ಮಂದಿರಗಳನ್ನು ಹೇಗೆ ಆಯಾಯ ಧರ್ಮದವರಿಗೆ ನೀಡಲಾಗಿದೆಯೋ ಅದೇ ರೀತಿ ಹಿಂದೂ ದೇವಾಲಯಗಳನ್ನು ಹಿಂದೂಗಳಿಗೆ ಒಪ್ಪಿಸಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಈ ಕುರಿತು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ವೋಚ್ಛ ನ್ಯಾಯಲಯದ ಆದೇಶವನ್ನು ಪಾಲಿಸಬೇಕು. ಹಿಂದೂ ಧರ್ಮ ಹಾಗು ಬ್ರಾಹ್ಮಣರ ಮೇಲೆ ದಬ್ಬಾಳಿಕೆ ಆಗುತ್ತಿದೆ ಅದನ್ನು ನಿಲ್ಲಿಸಬೇಕು. ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಿದ್ದು ಕೇಂದ್ರ ಸರಕಾರವಲ್ಲ. ಸರ್ವೋಚ್ಛ ನ್ಯಾಯಲಯದ ಆದೇಶದಂತೆ ಹಿಂದೂಗಳ ಟ್ರಸ್ಟ್‌ನಿಂದ ನಿರ್ಮಿಸಿದ್ದು. ಅಯೋಧ್ಯೆ ರಾಮ ಮಂದಿರ ಕೆಡವುತ್ತೇನೆ ಎನ್ನುವುದು ಸರ್ವೋಚ್ಚ ನ್ಯಾಯಲಯದ ಆದೇಶ ಉಲ್ಲಂಘಿಸಿದಂತೆ ಎಂದರು.

Ayodhya Ram Mandir Built As Per The Order Of Supreme Court By Hindu Trust Says Pejawara Swamiji

ರಾಮಮಂದಿರ ನಿರ್ಮಾಣವಾಗಿದೆ, ಮಂದಿರವನ್ನು ಮಂದಿರವಾಗಿ ಉಳಿಸಿಕೊಳ್ಳಲು ಹಿಂದೂ ಧರ್ಮ ಉಳಿಯಬೇಕು. ರಾಷ್ಟ್ರ, ದೇಶ ಪ್ರೇಮ ಉಳಿಸಬೇಕು, ದೇಶದ ಎಲ್ಲಾ ಕಡೆ ಹನುಮ ದೇವರ ಮೂರ್ತಿ ಪ್ರತಿಷ್ಠಾಪನೆಯಾಗಬೇಕು ಎಂದು ಪೇಜಾವರ ಶ್ರೀಗಳು ತಿಳಿಸಿದರು.

ಹಿಂದೂ ದೇವಾಲಯಗಳನ್ನು ಹಿಂದೂಗಳಿಗೆ ಒಪ್ಪಿಸಬೇಕು. ಇತರ ಧರ್ಮಗಳ ಪ್ರಾರ್ಥನಾ ಮಂದಿರಗಳನ್ನು ಹೇಗೆ ಆಯಾಯ ಧರ್ಮದವರಿಗೆ ನೀಡಲಾಗಿದೆಯೋ ಅದೇ ರೀತಿ ಹಿಂದೂ ದೇವಾಲಯಗಳನ್ನು ಹಿಂದೂಗಳಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ ರಾಮ ಮಂದಿರವನ್ನು ಕೇಂದ್ರ ಸರ್ಕಾರ ನಿರ್ಮಿಸಿಲ್ಲ, ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಹಿಂದೂಗಳ ಟ್ರಸ್ಟ್‌ನಿಂದ ನಿರ್ಮಾಣವಾಗಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+