ಕಪ್ಪತಗುಡ್ಡದಲ್ಲಿ ಆಯುರ್ವೇದಿಕ್ ಸಂಸ್ಕರಣಾ ಘಟಕ ಸ್ಥಾಪನೆ
ಗದಗ, ಮಾರ್ಚ್, ೦6 : ಕಪ್ಪತ್ತಗುಡ್ಡದ 33 ಸಾವಿರ ಹೆಕ್ಟೇರ್ ಪೈಕಿ 17,872.24 ಹೆ. ಪ್ರದೇಶವನ್ನು ಸಂರಕ್ಷಿತ ಮೀಸಲು ಅರಣ್ಯ ಎಂದು ರಾಜ್ಯ ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಅರಣ್ಯ ಕೈಗಾರಿಕಾ ನಿಗಮವು ಆಯುರ್ವೇದಿಕ್ ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ಉದ್ದೇಶಿಸಿದೆ ಎಂದು ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಟಿ.ಈಶ್ವರ ಹೇಳಿದ್ದಾರೆ.
ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧಿಕಾರಿಗಳ ಜತೆಗೆ ಡೋಣಿ, ಕಡಕೋಳ ಮಾರ್ಗದಲ್ಲಿರುವ ಕಪ್ಪತಗಿರಿಯ ಔಷಧೀಯ ಸಸ್ಯಗಳ ಕಲ್ಪವನ ಪರಿಶೀಲಿಸಿ ಮಾತನಾಡುತ್ತಿದ್ದರು. [ದೇಶದ 6 ಕಡೆ ಫಾರ್ಮಾಪಾರ್ಕ್ ಸ್ಥಾಪನೆ]

ಸಂಸ್ಕರಣ ಘಟಕಕ್ಕೆ ಸೂಕ್ತ ಸ್ಥಳವನ್ನು ಆಯ್ಕೆ ಮಾಡಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಆರ್.ಎಸ್. ಸುರೇಶ, ಕಾರ್ಯಕಾರಿ ನಿರ್ದೇಶಕ ಮಾರ್ಕಂಡೇಯ ಹಾಗೂ ನಿಗಮದ ಆರು ಜನ ಪ್ರಾದೇಶಿಕ ವ್ಯವಸ್ಥಾಪಕರುಗಳ ತಂಡವು ಇಂದು ಗಾಳಿ ಗುಡಿ , ನಂದಿವೇರಿಮಠದ ಸುತ್ತಲೂ, ಕಡಕೋಳ ವಲಯದ ಕಲ್ಪವನ ಔಷಧೀಯ ಸಸ್ಯಗಳ ಸ್ಥಾನ ಹಾಗೂ ಹಿರೇವಡ್ಡಟ್ಟಿ ವ್ಯಾಪ್ತಿಗಳಲ್ಲಿ ವಿವಿಧ ಸ್ಥಳಗಳನ್ನು ಪರಿಶೀಲಿಸಿದೆ.
ವಿಶ್ವದ ಮಾರುಕಟ್ಟೆಗೆ ಪರಿಚಯಿಸಲಾಗುತ್ತದೆ: ಈ ತಂಡವು ವರದಿ ನೀಡಿದ ನಂತರ ಆಯುರ್ವೇದಿಕ ಹಣ್ಣು, ಗಿಡಮೂಲಿಕೆ ಉತ್ಪನ್ನಗಳನ್ನು ವಿಶ್ವದ ಮಾರುಕಟ್ಟೆಗೆ ಪರಿಚಯಿಸಲು ಸಂಸ್ಕರಣ ಘಟಕ ಸ್ಥಾಪಿಸುವ ನಿರ್ಧಾರ ಕೈಗೊಳ್ಳಲಾಗುವುದು. ಈ ಕಪ್ಪತಗುಡ್ಡದ ವ್ಯಾಪ್ತಿಯಲ್ಲಿ 270 ರಿಂದ 300 ರೀತಿಯ ವಿವಿಧ ಹಣ್ಣು, ಗಿಡಮೂಲಿಕೆಗಳು ಲಭ್ಯವಿದ್ದು ಇವುಗಳು ಮಾನವನ ಆರೋಗ್ಯವರ್ಧನೆಗೆ ಉಪಯುಕ್ತವಾಗಿವೆ. [ಅಡ್ಡ ಪರಿಣಾಮ ಬೀರದ ಆಯುರ್ವೇದ ಉತ್ಪನ್ನಗಳು]

ಸ್ಥಳೀಯ ಜನರನ್ನು ತರಬೇತಿ ನೀಡಿ ಅವರಿಗೆ ಉದ್ಯೋಗ ಒದಗಿಸುವ ಅವಕಾಶ ಈ ಘಟಕದಲ್ಲಿದ್ದು ಸಂಬಂಧಿತ ಗ್ರಾಮ ಅರಣ್ಯ ಸಮಿತಿಗಳ ಸಮುದಾಯ ಹಾಗೂ ಸಮಾಜದ ಒಳಿತಿಗಾಗಿ ಈ ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿರ್ಧರಿಸಿದೆ ಎಂದು ಅಧ್ಯಕ್ಷ ಟಿ. ಈಶ್ವರ ನುಡಿದರು. [ಪ್ರಮೇಹ ಮೋಕ್ಷಂ ಸೇವಿಸಿ ಮಧುಮೇಹದಿಂದ ಮುಕ್ತಿ]
ಗದಗ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಾಮನಕಟ್ಟಿ , ಶಿರಹಟ್ಟಿ ವಲಯ ಅರಣ್ಯ ಅಧಿಕಾರಿ ವೀರೇಶ, ಡಿ.ಜಿ.ಎಂ. ಆಯುರ್ವೇದಿಕ್ ಕಾಲೇಜಿನ ನಿವೃತ್ತ ಪ್ರಾಚಾರ್ಯ ಜಿ.ವಿ. ಪಾಟೀಲ ಉಪಸ್ಥಿತರಿದ್ದರು.

ಮುಂಡರಗಿಯಲ್ಲಿ ರೋಣ ಶಾಸಕ ಜಿ.ಎಸ್. ಪಾಟೀಲ, ರಾಜ್ಯ ಜಲಸಂಪನ್ಮೂಲ ಇಲಾಖೆಯ ಸಂಸದೀಯ ಕಾರ್ಯದರ್ಶಿ ಹಾಗೂ ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ಆಯುರ್ವೇದ ಘಟಕ ಸ್ಥಳ ಪರಿಶೀಲನಾ ತಂಡದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications