ಆಜಾನ್ ವಿರುದ್ಧ ಧ್ವನಿ; ದೇವಾಲಯಗಳಲ್ಲಿ ಮೊಳಗಿತು ಸುಪ್ರಭಾತ
ಬೆಂಗಳೂರು, ಮೇ 09: ಮಸೀದಿಗಳಲ್ಲಿನ ಮೈಕ್ ಬಳಕೆ, ಆಜಾನ್ ವಿರುದ್ಧ ಶ್ರೀರಾಮಸೇನೆ ಮತ್ತು ಹಿಂದೂಪರ ಸಂಘಟನೆಗಳು ಕರ್ನಾಟಕದಲ್ಲಿ ಅಭಿಯಾನ ಆರಂಭಿಸಿವೆ. ಸೋಮವಾರ ಮುಂಜಾನೆ ಕರ್ನಾಟಕದ ವಿವಿಧ ಜಿಲ್ಲೆಗಳ ದೇವಾಲಯಗಳಲ್ಲಿ ಸುಪ್ರಭಾತ ಮೊಳಗಿದೆ.
ಅಜಾನ್ ಆರಂಭವಾಗುತ್ತಿದ್ದಂತೆಯೇ ಸುಪ್ರಭಾತ ಶುರುವಾಯಿತು. ವಿವಿಧ ಜಿಲ್ಲೆಗಳಲ್ಲಿ ಹಿಂದೂಪರ ಸಂಘಟನೆಗಳ ಸದಸ್ಯರು ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ ಹನುಮಾನ್ ಚಾಲೀಸಾ ಪಠಿಸಿದರು. ಮೈಕ್ ಮೂಲಕ ಅದನ್ನು ಬಿತ್ತರಿಸಲಾಯಿತು.
ಮೈಸೂರಿನಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅಭಿಯಾನಕ್ಕೆ ಚಾಲನೆ ನೀಡಿದರು. ಆಂಜನೇಯಸ್ವಾಮಿ ದೇಗುಲದಲ್ಲಿ 300 ಮಂದಿ ಒಟ್ಟಾಗಿ ಸಹಸ್ರನಾಮ, ಹಿಂದೂಗೀತೆ, ಭಜನೆ ಮಾಡುವುದರ ಅಭಿಯಾನ ಆರಂಭವಾಯಿತು.
ಸುಮಾರು ಒಂದು ಗಂಟೆಗಳ ಕಾಲ ರಾಜ್ಯದ ಸಾವಿರಕ್ಕೂ ಅಧಿಕ ದೇವಾಲಯಗಳಲ್ಲಿ ಸುಪ್ರಭಾತ ಕೇಳಿ ಬಂದಿತು. ಈ ಅಭಿಯಾನದ ಹಿನ್ನಲೆಯಲ್ಲಿ ರಾಜ್ಯದ್ಯಂತ ಪೊಲೀಸರು ಸಹ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ.

ಹನುಮಾನ್ ಚಾಲೀಸಾ ಪಠಣೆ
ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಅನೇಕ ದೇವಾಲಯಗಳಲ್ಲಿ ಬೆಳಗ್ಗೆ 5 ಗಂಟೆಗೆ ಹಿಂದೂಪರ ಕಾರ್ಯಕರ್ತರರು ಹನುಮಾನ್ ಚಾಲೀಸಾ ಪಠಿಸಿದರು. ಚಾಮರಾಜನಗರದಲ್ಲಿ ಚಾಮರಾಜೇಶ್ವರ ದೇವಾಲಯದಲ್ಲಿ ಕೂಡ ಹಿಂದೂಪರ ಸಂಘಟನೆಗಳಿಂದ ಭಜನೆ ಆರಂಭಗೊಂಡಿತು.
ಹಿಂದುಪರ ಸಂಘಟನೆಗಳು ಯಾದಗಿರಿ ನಗರದ ಮಂದಿರಗಳಿಗೆ ತೆರಳಿ ಜಾಗೃತಿ ಅಭಿಯಾನ ನಡೆಸಿದರು. ಅಜಾನ್ ವಿರುದ್ಧ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ, ಚಳವಳಿ ಶುರುವಾಗಿದೆ. ದೇವಾಲಯಗಲ್ಲಿ ಹನುಮಾನ್ ಚಾಲೀಸಾ, ಭಕ್ತಿಗೀತೆ ಮೊಳಗಿದವು. ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ವಿಜಯ ಪಾಟೀಲ್ ನೇತೃತ್ವದಲ್ಲಿ ಸುಪ್ರಭಾತ ಅಭಿಯಾನ ಶುರುವಾಯಿತು.

ಹಾಸನದಲ್ಲಿ ಹುನುಮಾನ್ ಚಾಲೀಸಾ
ಮಸೀದಿಗಳ ಮೇಲಿನ ಮೈಕ್ ತೆರವುಗೊಳಿಸುವಂತೆ ಶ್ರೀರಾಮಸೇನೆ ಗಡುವು ನೀಡಿತ್ತು. ಗಡುವು ಪೂರ್ಣಗೊಂಡ ಹಿನ್ನಲೆಯಲ್ಲಿ ಹನುಮಾನ್ ಚಾಲೀಸಾ ಪಠಿಸಲಾಯಿತು. ಹಾಸನದಲ್ಲಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಹೇಮಂತ್ ಕುಮಾರ್ ನೇತೃತ್ವದಲ್ಲಿ ಹನುಮಾನ್ ಚಾಲೀಸಾ ಪಠಣ ಮಾಡಲಾಯಿತು. ಹಾಸನದ ಸಂಗಮೇಶ್ವರ ಬಡಾವಣೆಯಲ್ಲಿರುವ ಶ್ರೀಸಂಗಮೇಶ್ವರ ದೇವಾಲಯದಲ್ಲಿ ಧ್ವನಿ ವರ್ಧಕದ ಮೂಲಕ ಹನುಮಾನ್ ಚಾಲೀಸಾ ಜೋರಾಗಿ ಹಾಕಲಾಯಿತು.
ಕೋಲಾರ ಜಿಲ್ಲೆಯ ಕಾರಂಜಿಕಟ್ಟೆಯಲ್ಲಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರಮೇಶ್ ರಾಜ್ ನೇತೃತ್ವದಲ್ಲಿ 10 ದೇವಾಲಯಲ್ಲಿ ಭಜನೆ ನಡೆಯಿತು. ಕೀಲಿಕೋಟೆ ಆಂಜನೇಯ ದೇಗುಲ, ಬ್ರಾಹ್ಮಣ ಬಡಾವಣೆಯಲ್ಲಿ ಶ್ರೀರಾಮ ಗುಡಿ, ಕೆಇಬಿ ದೇವಸ್ಥಾನದಲ್ಲಿ ಭಜನೆ ನಡೆಯಿತು.

ಗದಗನಲ್ಲಿಯೂ ಭಜನೆ
ಸೋಮವಾರ ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಗದಗ ನಗರದ ಬಹುತೇಕ ಮಂದಿರಗಳಲ್ಲಿ ಭಜನೆಗಳ ಸುದ್ದು ಕೇಳಿತು. ಇದರಿಂದ ನಗರದ ವಿವಿಧೆಡೆ ಬ್ರಾಹ್ಮೀ ಮುಹೂರ್ತದಲ್ಲಿ ಭಜನೆ v/s ಆಜಾನ್ ಶುರುವಾಯಿತು. 4.55ಕ್ಕೆ ಶ್ರೀರಾಮಸೇನೆ ಕಾರ್ಯಕರ್ತರು ಭಜನೆಗಳನ್ನು ಮೊಳಗಿಸಿದರು. ನಗರದ ವಿವಿಧ 10 ದೇವಸ್ಥಾನಗಳಲ್ಲಿ ಏಕ ಕಾಲಕ್ಕೆ ಭಜನೆ ನಡೆಯಿತು. ಐತಿಹಾಸಿಕ ಜುಮ್ಮಾ ಮಸೀದಿ ಕೂಗಳತೆ ದೂರದಲ್ಲಿ ಆಜಾನ್ಗೆ ವಿರುದ್ಧವಾಗಿ ಭಜನೆಯನ್ನು ಆರಂಭಿಸಲಾಯಿತು.
ಜುಮ್ಮಾ ಮಸೀದಿ ಆವರಣದಲ್ಲಿ ಮುಂಜಾಗ್ರತೆ ಕ್ರಮವಾಗಿ ಪೊಲೀಸ್ ಬಿಗಿಭದ್ರತೆ ಒದಗಿಸಲಾಗಿತ್ತು. ಒಂದು ಕೆಎಸ್ಆರ್ಪಿ ತುಕುಡಿ ಸೇರಿದಂತೆ ಸ್ಥಳೀಯ ಪೊಲೀಸರಿಂದ ಭದ್ರತೆ ನೀಡಲಾಗಿತ್ತು.

ಹಳೇಹುಬ್ಬಳ್ಳಿಯಲ್ಲಿ ಭಜನೆ
ಹಳೇ ಹುಬ್ಬಳ್ಳಿಯ ದಿಡ್ಡಿ ಹನುಮಂತ ದೇವಾಲಯದಲ್ಲಿ ಸುಪ್ರಭಾತ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಶ್ರೀರಾಮಸೇನೆ, ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು ಮತ್ತು ಅರ್ಚಕರಿಂದ ಪೂಜೆ ಸಲ್ಲಿಸಲಾಯಿತು. ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹನುಮನ ಮಂತ್ರ ಜಪಿಸಿದರು. ಭಕ್ತಿಗೀತೆಗಳು ಮೊಳಗಿದವು, ಕಳೆದ ತಿಂಗಳು ಕೋಮು ಗಲಭೆಯಲ್ಲಿ ಈ ದೇವಸ್ಥಾನದ ಮೇಲೆ ದಾಳಿಯಾಗಿದ್ದ ಹಿನ್ನಲೆಯಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ತುಮಕೂರು ತಾಲೂಕಿನ ಪಾವಗಡದ ಕೋಟೆ ಆಂಜನೇಯ ದೇವಾಲಯದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಲೌಡ್ ಸ್ಪೀಕರ್ ಮೂಲಕ ಆಜಾನ್ ಕೂಗುವ ವೇಳೆ ಹನುಮಾನ್ ಚಾಲಿಸಾ ಸುಪ್ರಭಾತ ಹಾಕಿದರು.
Recommended Video
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications