B Khata: ಬಿ - ಖಾತಾದಿಂದ ಎ - ಖಾತಾ ಪರಿವರ್ತನೆ ಭರ್ಜರಿ ಗುಡ್ನ್ಯೂಸ್ ಕೊಟ್ಟ ಸರ್ಕಾರ!
B Khata: ಬೆಂಗಳೂರಿನಲ್ಲಿ ಮೊದಲ ಹಂತದಲ್ಲಿ ಆಸ್ತಿಗಳಿಗೆ ಇ - ಖಾತಾ ಪರಿಚಯಿಸಲಾಗಿತ್ತು. ಇದಾದ ನಂತರ ಕರ್ನಾಟಕದಾದ್ಯಂತ ಆಸ್ತಿಗಳಿಗೆ ಇ - ಖಾತಾ ಪರಿಚಯಿಸಲಾಗಿದೆ. ಅಲ್ಲದೇ ಮುಂದುವರಿದು ಆಸ್ತಿದಾರರು ಹಲವು ವರ್ಷಗಳಿಂದ ಕಾಯುತ್ತಿದ್ದ ಬಿ - ಖಾತಾದಿಂದ ಎ ಖಾತಾ ಪರಿವರ್ತನೆಗೂ ಅವಕಾಶ ನೀಡಲಾಗಿದೆ. ಇದೀಗ ಬಿ ಖಾತಾಗೆ ಸಂಬಂಧಿಸಿದಂತೆ ಮತ್ತೊಂದು ಬಿಗ್ ಗುಡ್ನ್ಯೂಸ್ ಕೊಟ್ಟಿದೆ.
ರಾಜ್ಯದ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದ, ಅನಧಿಕೃತ ಬಡಾವಣೆಗಳ ಸ್ವತ್ತುಗಳಿಗೆ ಬಿ ಖಾತಾದಿಂದ ಎ-ಖಾತಾ ನೀಡುವ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಹೇಳಿದ್ದಾರೆ. ವಿಧಾನಪರಿಷತ್ನಲ್ಲಿ ಕಾಂಗ್ರೆಸ್ನ ರಾಮೋಜಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು ಮಹತ್ವದ ಅಪ್ಡೇಟ್ಸ್ ಕೊಟ್ಟಿದ್ದಾರೆ.

ರಾಜ್ಯದಲ್ಲಿ ಬಿ ಖಾತಾದಿಂದ ಎ ಖಾತಾಗೆ ಆಸ್ತಿಗಳನ್ನು ಪರಿವರ್ತನೆ ಮಾಡಿಕೊಳ್ಳಬೇಕು ಎಂದು ಲಕ್ಷಾಂತರ ಜನ ಆಸ್ತಿದಾರರು ಕಾಯುತ್ತಿದ್ದಾರೆ. ಈ ರೀತಿ ಆಸ್ತಿ ಖಾತೆ ಸರಿಪಡಿಸಿಕೊಳ್ಳಬೇಕು ಎನ್ನುವ ನಿರೀಕ್ಷೆಯಲ್ಲಿರುವ ಆಸ್ತಿದಾರರಿಗೆ ಬಂಪರ್ ಗುಡ್ನ್ಯೂಸ್ ಕೊಡಲಾಗಿದೆ. ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದ ವಿನ್ಯಾಸಗಳು, ವಿವಿಧ ಯೋಜನೆಗಳಲ್ಲಿ ಮಂಜೂರಾದ ನಿವೇಶನಗಳಿಗೆ ಈಗಾಗಲೇ ಬಿ-ಖಾತಾ ನೀಡಲಾಗುತ್ತಿದ್ದು, ತೆರಿಗೆ ವ್ಯಾಪ್ತಿಗೆ ಒಳಪಡಿಸಲಾಗುತ್ತಿದೆ. ಎ-ಖಾತಾ ನೀಡಲು ಬೇಡಿಕೆ ಇದೆ ಎಂದು ಸರ್ಕಾರ ತಿಳಿಸಿದೆ.
ಇನ್ನು ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆದ ವಿನ್ಯಾಸಗಳ, ಗ್ರಾಮೀಣ, ವಿವಿಧ ಯೋಜನೆಯಡಿ ಮಂಜೂರಾದ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಪರವಾನಗಿ ನೀಡಲಾಗುತ್ತಿದೆ. ಇದರಿಂದಾಗಿ ಭೂ-ಪರಿವರ್ತನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ. ಅಧಿಕೃತ ನಿವೇಶನ ಕಟ್ಟಡಗಳಿಗೆ ನಮೂನೆ -3 ಮತ್ತು ಅನುಮೋದನೆ ಪಡೆಯದ ಸ್ವತ್ತುಗಳಿಗೆ ನಮೂನೆ 3-ಎ ಕೊಡಲಾಗುತ್ತಿದೆ ಎಂದೂ ಹೇಳಿದ್ದಾರೆ.
ಅಲ್ಲದೇ ಕಟ್ಟಡ ಪರವಾನಿಗೆ ಕೋರಿ ವಾಸ್ತುಶಿಲ್ಪ ಶಾಸ್ತ್ರಜ್ಞರ ಮೂಲಕ ಅಗತ್ಯ ದಾಖಲೆಗಳ ಜತೆ ಅರ್ಜಿ ಸಲ್ಲಿಸಿದರೆ, 15 ದಿನಗಳ ಒಳಗಾಗಿ ಕಟ್ಟಡ ಲೈಸೆನ್ಸ್ ನೀಡಲಾಗುತ್ತಿದೆ. ಖಾತಾ ಪಡೆಯಲು ಅನುಸರಿಸಬೇಕಾದ ಕ್ರಮಗಳನ್ನು ತಿಳಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಲಕ್ಷಾಂತರ ಬಿ ಖಾತಾ ಆಸ್ತಿದಾರರಿಗೆ ಅನುಕೂಲ: ಇನ್ನು ರಾಜ್ಯ ಸರ್ಕಾರವು ಬಿ ಖಾತಾ ವಿಚಾರದಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುತ್ತಿರುವುದರಿಂದ ರಾಜ್ಯದಲ್ಲಿ ಬಿ ಖಾತಾ ಹೊಂದಿರುವ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ. ರಾಜ್ಯದಲ್ಲಿ ಅಂದಾಜು 30 ರಿಂದ 40 ಲಕ್ಷಕ್ಕೂ ಹೆಚ್ಚು ಬಿ ಖಾತಾ ಆಸ್ತಿಗಳಿದ್ದು. ಈ ಆಸ್ತಿದಾರರಿಗೆ ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications