ಕಾಂಗ್ರೆಸ್ನ ಮತಬ್ಯಾಂಕ್ ಆಧಾರಿತ ಪಕ್ಷಪಾತ ನಡೆ ಕರುನಾಡನ್ನು ದಹಿಸುತ್ತಿದೆ - ಬಿ. ವೈ ವಿಜಯೇಂದ್ರ ಕಿಡಿ
ಮಂಡ್ಯ, ಸೆಪ್ಟೆಂಬರ್ 12: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಯುವಕರ ಗುಂಪೊಂದು ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಮಂಡ್ಯದ ನಾಗಮಂಗಲ ಬದರಿಕೊಪ್ಪಲಿನಲ್ಲಿ ನಡೆದಿದೆ. ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಕಲ್ಲು ತೂರಾಟ ಆರಂಭವಾಗುತ್ತಿದ್ದಂತೆ ಹಿಂದೂ-ಮುಸ್ಲಿಂ ಯುವಕರ ನಡುವೆ ತಳ್ಳಾಟ ನೂಕಾಟ ನಡೆದಿದ್ದು, ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಆದರೆ ಹಬ್ಬದ ಆಚರಣೆ ವೇಳೆ ಈ ರೀತಿಯ ಕಿಡಿಗೇಡಿ ಕೃತ್ಯ ಮಾಡಿರುವ ಆರೋಪಿಗಳನ್ನು ಬಂಧಿಸುವಂತೆ ಪೊಲೀಸ್ ಠಾಣೆ ಎದುರು ಗಣಪತಿ ಮೂರ್ತಿ ನಿಲ್ಲಿಸಿ ಹಿಂದೂಗಳು ಪ್ರತಿಭಟನೆ ನಡೆಸಿದ್ದಾರೆ. ನಾಗಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಘಟನೆಯ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ನಾಗಮಂಗಲದಲ್ಲಿ ಗಣಪತಿ ವಿಸರ್ಜನೆಯ ವೇಳೆ ಕಲ್ಲು ತೂರಾಟ ನಡೆಸಿರುವ ಹಿಂದೂ ವಿರೋಧಿ ಮತಾಂದ ಕಿಡಿಗೇಡಿಗಳ ಅಟ್ಟಹಾಸದಿಂದ ಉದ್ಭವಿಸಿರುವ ಪ್ರಕ್ಷುಬ್ಧ ಪರಿಸ್ಥಿತಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದ್ದು ಈ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.
ಈ ಹಿಂದಿನ ವರ್ಷವೂ ಪುಂಡರು ಇದೇ ರೀತಿ ವರ್ತಿಸಿದ್ದ ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ಮುಂಜಾಗ್ರತೆಯ ಕಟ್ಟೆಚ್ಚರ ವಹಿಸವಲ್ಲಿ ಎಚ್ಚರ ತಪ್ಪಿರುವುದು ಸ್ಪಷ್ಟವಾಗಿದೆ. ಕಾಂಗ್ರೆಸ್ ಸರ್ಕಾರದ ಆಡಳಿತ ಅವಧಿಯಲ್ಲಿ ನಮಗೆ ರಕ್ಷಣೆ ಸಿಗುತ್ತದೆ ಎಂಬ ದೃಢನಂಬಿಕೆ ವಿದ್ರೋಹಿ ಶಕ್ತಿಗಳು ವಿದ್ವಂಸಕ ಕೃತ್ಯಗಳನ್ನು ನಡೆಸಲು ಪ್ರಚೋದನೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಜನರ ಧಾರ್ಮಿಕ ಶ್ರದ್ಧೆಯನ್ನು ಘಾಸಿಗೊಳಿಸಲು ಶಾಂತಿಯುತ ಗಣಪತಿ ವಿಸರ್ಜನೆಯ ಸಂದರ್ಭದಲ್ಲಿ ನಡೆದಿರುವ ಈ ಘಟನೆ ಹಿಂದೂ ಸಮುದಾಯವನ್ನು ಪ್ರಚೋದಿಸುವ ಕುಕೃತ್ಯವಾಗಿದೆ. ಸೌಹಾರ್ದತೆಯ ಸಮಾಜದಲ್ಲಿ ದಳ್ಳುರಿ ಹಚ್ಚಲು ಯತ್ನಿಸುತ್ತಿರುವ, ಹಿಂದೂ ಸಮುದಾಯದ ಆಚಾರ ವಿಚಾರಗಳನ್ನು ದಮನ ಮಾಡುವ ರೀತಿಯಲ್ಲಿ ವರ್ತಿಸಿರುವ ಹಾಗೂ ಭಾರತೀಯ ಪರಂಪರೆಯನ್ನು ಸದಾ ಕಾಲಕ್ಕೂ ಅಪಮಾನಿಸಲು ಯತ್ನಿಸುತ್ತಿರುವ ಉಗ್ರ ಮನಸ್ಥಿತಿಯ ವಿದ್ರೋಹಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿ ಎಂದು ಆಗ್ರಹಿಸಿದ್ದಾರೆ.
ನಾಗಮಂಗಲ ಘಟನೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿ ಹಿಂದೂ ವಿರೋಧಿ ಚಟುವಟಿಕೆಗಳನ್ನು ಸಂಘಟಿಸುತ್ತಿರುವ ದುಷ್ಟ ಶಕ್ತಿಗಳನ್ನು ನಿಗ್ರಹಿಸದೇ ಹೋದರೆ ಮುಂದಾಗುವ ಪರಿಣಾಮಗಳ ಹೊಣೆ ಕಾಂಗ್ರೆಸ್ ಸರ್ಕಾರವೇ ಹೊರಬೇಕಾಗುತ್ತದೆ. ಕಾಂಗ್ರೆಸ್ನ ಮತಬ್ಯಾಂಕ್ ಆಧಾರಿತ ಪಕ್ಷಪಾತ ನಡೆ ಕರುನಾಡನ್ನು ದಹಿಸುತ್ತಿದೆ ಎಂದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications