ಬಾಬಾಬುಡನ್ಗಿರಿ ವಿವಾದ ನೀವೇ ಬಗೆಹರಿಸಿಕೊಳ್ಳಿ: ಸುಪ್ರೀಂ
ನವದೆಹಲಿ, ಸೆಪ್ಟೆಂಬರ್.04: ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್ಗಿರಿ ವಿವಾದದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಈ ವಿವಾದಕ್ಕೆ ಕರ್ನಾಟಕ ರಾಜ್ಯ ಸರ್ಕಾರವೇ ತಾರ್ಕಿಕ ಅಂತ್ಯ ಕಂಡುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಧಾರ್ಮಿಕ ಆಚರಣೆ ಹೇಗಿರಬೇಕೆಂಬುದೂ ಸೇರಿದಂತೆ ವಿವಿಧ ಅಂಶಗಳನ್ನು ನಿರ್ಧರಿಸುವ ಜವಾಬ್ದಾರಿಯನ್ನು ಸುಪ್ರೀಂ ಕರ್ನಾಟಕ ಸರ್ಕಾರವೇ ನಿಭಾಯಿಸಬೇಕು ಎಂದು ತಿಳಿಸಿದೆ. ವಿವಾದಿತ ಸ್ಥಳದಲ್ಲಿ ಯಾವ ಬಗೆಯ ಆಚರಣೆ ಮಾಡಬೇಕು ಎಂಬುದನ್ನು ಜಿಲ್ಲಾಧಿಕಾರಿ ವರದಿ ಆಧರಿಸಿ ತೀರ್ಮಾನಕ್ಕೆ ಬರಬೇಕು ಎಂದು ತಿಳಿಸಿದೆ.

ರಾಜ್ಯ ಸರ್ಕಾರ ತನ್ನ ನಿರ್ಧಾರ ಪ್ರಕಟಿಸುವ ಮುನ್ನ ಎರಡು ಕೋಮಿನ ಅಭಿಪ್ರಾಯ ಮತ್ತು ಆಕ್ಷೇಪ ಆಲಿಸಬೇಕು ಎಂದು ಸೂಚಿಸಿದೆ. ರಾಜ್ಯ ಸರ್ಕಾರ ಪ್ರಕರಣ ಇತ್ಯರ್ಥ ಪಡಿಸುವರೆಗೂ 1989ರಲ್ಲಿ ನೀಡಿರುವ ಆದೇಶದಂತೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ತಿಳಿಸಿದೆ.
ಸಿಟಿಜನ್ ಫಾರ್ ಜಸ್ಟಿಸ್ ಆಡ್ ಪೀಸ್ ಸಂಘಟನೆ ಮತ್ತು ಸಯ್ಯದ್ ಗೌಸ್ ಮೊಹಿದ್ದೀನ್ ಶಾಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ.ರಂಜನ್ ಗೊಗೊಯ್ ಮತ್ತು ನ್ಯಾ.ಎನ್.ವಿ.ರಮಣ ನ್ಯಾಯಪೀಠ ಒಂದು ವೇಳೆ ಯಾವುದೇ ಧರ್ಮದ ಪ್ರತಿನಿಧಿಗಳಿಗೆ ರಾಜ್ಯ ಸರ್ಕಾರದ ತೀರ್ಮಾನ ಒಪ್ಪಿಗೆಯಾಗದೇ ಇದ್ದರೆ, ನ್ಯಾಯಾಲಯದ ಮೆಟ್ಟಿಲು ಏರಲು ಅವಕಾಶವಿದೆ ಎಂದು ತಿಳಿಸಿದೆ.
ಆದರೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಸಲ್ಲಿಸಿರುವ ವರದಿಯಲ್ಲಿ ವಿವಾದಿತ ಸ್ಥಳವು ಹಿಂದೂ-ಮುಸ್ಲಿಮರ ಸೌಹಾರ್ದತೆಯ ಪ್ರತೀಕವಾಗಿದೆ. ಗುಹೆಯಲ್ಲಿ ನಿತ್ಯ ಪೂಜೆಗೆ ಅರ್ಚಕರ ನೇಮಕ ಮಾಡಬೇಕು ಅದರೊಂದಿಗೆ ಶಾಖಾದ್ರಿಯವರ ನೇತೃತ್ವದಲ್ಲಿ ಉರುಸ್ ಸಹ ನಡೆಸಬೇಕು ಎಂದು ಶಿಫಾರಸು ಮಾಡಲಾಗಿದೆ.
ಬಾಬಾಬುಡನ್ ಗಿರಿ ಎಲ್ಲಿದೆ?
ಚಿಕ್ಕಮಗಳೂರು ಜಿಲ್ಲೆಯಲ್ಲಿನ ಪರ್ವತ ಶ್ರೇಣಿ. ಹಿಂದೂ ಮತ್ತು ಮುಸ್ಲಿಮರಿಬ್ಬರಿಗೂ ಪವಿತ್ರ ಸ್ಥಳವಾಗಿ ಕಾಣಿಸಿಕೊಂಡು ಬಂದಿದೆ. ಮುಳ್ಳಯ್ಯನಗಿರಿ ಬಾಬಾ ಬುಡನ್ ಗಿರಿಯ ಸಾಲಿನಲ್ಲಿ ಬರುವ ಪ್ರವಾಸಿ ತಾಣ. ಹಿಮಾಲಯ ಮತ್ತು ನೀಲಗಿರಿ ಬೆಟ್ಟಗಳ ನಡುವಿನ ಅತ್ಯಂತ ಎತ್ತರದ ಶಿಖರವಾಗಿದ್ದು ಚಾರಣಿಗಹರ ಸ್ವರ್ಗ ಎಂದೇ ಕರೆಸಿಕೊಂಡಿದೆ.
-
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ












Click it and Unblock the Notifications