Sadahiva Mutya Prediction: ರಾಜಕೀಯ, ಮಳೆ ಬಗ್ಗೆ ಬಬಲಾದಿ ಸದಾಶಿವ ಮುತ್ಯಾ ಸ್ಫೋಟಕ ಭವಿಷ್ಯ
2024ರಲ್ಲಿ ಭಾರಿ ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ರಾಜ್ಯಕ್ಕೆ ಬಳಿಕ ವ್ಯಾಪಕ ಮಳೆಯಿಂದಾಗಿ ಜೀವ ಬಂದಂತಾಗಿತ್ತು. ಉತ್ತಮವಾಗಿ ಮಳೆಯಾಗಿದ್ದರಿಂದ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು ಈ ಬಾರಿ ಬೇಸಿಗೆಯಲ್ಲಿ ನೀರಿನ ಅಭಾವ ಕಾಡುವುದಿಲ್ಲ ಎಂದು ನಿರೀಕ್ಷೆ ಮಾಡಲಾಗಿದೆ. ಈ ಬಾರಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಲಕ್ಷಾಂತರ ಭಕ್ತರು ನಂಬಿಕೆಯ ಕಾಲಜ್ಞಾನಿ ಸದಾಶಿವ ಮುತ್ಯಾ 2025ರ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ವಿಜಯಪುರದ ಬೆಂಕಿ ಬಬಲಾದಿ ಸದಾಶಿವ ಮುತ್ಯಾನಮಠದ ಸದಾಶಿವ ಮುತ್ಯಾ 2025ರ ಕುರಿತು ಕಾಲಜ್ಞಾನವನ್ನು ಹೇಳಿದ್ದಾರೆ. ಅವರ ಹೇಳಿಕೆ ಸದ್ಯ ಭಕ್ತರಲ್ಲಿ ಆತಂಕ ಮೂಡಿಸಿದೆ. ಈ ವರ್ಷ ಸದಾಶಿವಪ್ಪ ಚಿಕ್ಕಯ್ಯಮುತ್ಯಾ ಬರೆದಿಟ್ಟಿರುವ ಕಾಲಜ್ಞಾನವನ್ನು ಓದಿ ಹೇಳಿದ್ದು, ಕಲಿಯುಗದ ಆಟ ಸರ್ವನಾಶ ಹೊಂದುವ ಸಮಯ ಬಂದಿತು ತಿಳಿಯಿರಣ್ಣ ಎಂದು ಹೇಳಿರುವುದಾಗಿ ತಿಳಿಸಿದರು.

ಈ ವರ್ಷ ಶಿಕ್ಷಣ ಕ್ಷೇತ್ರದಲ್ಲಿ ಹೊಸ ತಿರುವುಗಳಾಗಲಿದ್ದು, ಹಣದ ಹಿಂದೆ ಜನರಿಗೆ ಬಂಧುತ್ವದ ಬಗ್ಗೆ ತಿಳಿಯುವ ಸಮಯ ಬಂದಿದೆ. ಈ ವರ್ಷ ವಿದ್ಯುಚ್ಛಕ್ತಿ ಮತ್ತು ನೀರಿನ ಕೊರತೆ ಬಹಳವಾಗಿ ಕಾಡಲಿದೆ ಎಂದು ಹೇಳಿದ್ದಾರೆ. ಅಂದರೆ ಈ ಬಾರಿ ರಾಜ್ಯದಲ್ಲಿ ಮಳೆಯ ಕೊರತೆಯಾಗಬಹುದು ಎಂದು ಹೇಳಿದ್ದು ಭಕ್ತರ ಆತಂಕಕ್ಕೆ ಕಾರಣವಾಗಿದೆ.
ರಾಜ್ಯ ರಾಜಕೀಯದಲ್ಲಿ ಬದಲಾವಣೆ
ರಾಜ್ಯ ರಾಜಕೀಯದ ಬಗ್ಗೆ ಕೂಡ ಭವಿಷ್ಯ ನುಡಿದಿದ್ದು, ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆಯಾಗಲಿದೆ ಎಂದು ಹೇಳಿದ್ದಾರೆ. ಭೂಕಂಪ, ಅಗ್ನಿ ದುರಂತ ಹೆಚ್ಚಾಗಲಿದ್ದು, ಧರ್ಮ ಧರ್ಮಗಳ ನಡುವೆ ಕಿತ್ತಾಟ ಹೆಚ್ಚಾಗಲಿದೆ. ಈ ವರ್ಷ ಮಾನವೀಯತೆ, ಮನುಷ್ಯತ್ವದ ಹೊಸ ಸಂಚಲನ ತಿಳಿಯಿರಣ್ಣ ಎಂದು ಮುತ್ಯಾ ಹೇಳಿದ್ದಾರೆ ಎಂದು ಸದಾಶಿವ ಮುತ್ಯಾ ತಿಳಿಸಿದ್ದಾರೆ.
ಕಾಡ್ಗಿಚ್ಚು ಹೆಚ್ಚಾಗಲಿದ್ದು ಎಲ್ಲಾ ಪ್ರಾಣಿಗಳು ಕಾಡಿನಿಂದ ನಾಡಿನ ಕಡೆಗೆ ಬರುವಂತಾಗುತ್ತದೆ. ನಿರೀಕ್ಷೆಗೂ ಮೀರಿದ ಹೊಸ ಕಾಯಿಲೆಗಳು ಬರುತ್ತವೆ. ದೇಶದ ಆರ್ಥಿಕತೆ, ರಾಜ್ಯದ ಆರ್ಥಿಕತೆಗೆ ಹಾನಿಯಾಗಲಿದೆ. ಹೆಣ್ಣು ಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ಮೇಲುಗೈ ಸಾಧಿಸುತ್ತಾರೆ ಎಂದು ಕಾಲಜ್ಞಾನದಲ್ಲಿ ಹೇಳಲಾಗಿದೆ.
ದೇಶದಲ್ಲಿ ಕಳ್ಳರ ಕಾಟ ಮತ್ತಷ್ಟು ಹೆಚ್ಚಾಗಲಿದೆ. ಮಳೆ, ಬೆಳೆ ಮಧ್ಯಮ ಪ್ರಮಾಣದಲ್ಲಿರಲಿದೆ. ಜನಸಾಮಾನ್ಯರಿಗೆ ವಿವಿಧ ರೋಗಗಳು ಕಾಡಲಿವೆ. ವ್ಯಾಪಾರಸ್ಥರಿಗೆ ಸಾಧಾರಣ ಲಾಭ ಸಿಗಲಿದೆ. ರಾಷ್ಟ್ರದ ನಾಯಕರಿಗೆ ಅನಿಷ್ಠ ಕಾದಿದ್ದು, ಆಳುವ ಮಹಾನಾಯಕರಿಗೆ ಅಪಾಯವಿದೆ ಎಂದು ಹೇಳಿದ್ದಾರೆ.
ಈ ಬಾರಿ ಜೋರಾದ ಗಾಳಿ ಬೀಸಲಿದೆ, ಆಳುವ ದೊರೆಗಳಿಗೆ ಒಳಗೊಳಗೆ ಕಿತ್ತಾಟ ಹೆಚ್ಚಾಗಲಿದೆ. ಯುದ್ಧ, ವೈರತ್ವ ಹೆಚ್ಚಾಗಿ ದೇಶಕ್ಕೆ ಕೆಡುಕು ಸಂಭವಿಸಲಿದೆ. ಮೇವು, ಕಾಳು ಕಡಿಗಳನ್ನು ಜೋಪಾನವಾಗಿಟ್ಟುಕೊಳ್ಳುವಂತೆ ರೈತರಿಗೆ ಹೇಳಿದ್ದಾರೆ. ಕಾಳು-ಕಡ್ಡಿಗಳ ಬೆಲೆ ಗಗನಕ್ಕೇರಲಿದೆ. ಮಹಾನಗರಗಳಿಗೆ ತೊಂದರೆ ಇದೆ, ಬೆಲೆ ಏರಿಕೆಯಿಂದ ಜನ ತೊಂದರೆ ಅನುಭವಿಸಲಿದ್ದಾರೆ ಎಂದು ಕಾಲಜ್ಞಾನದಲ್ಲಿ ಹೇಳಿರುವುದಾಗಿ ಸದಾಶಿವ ಮುತ್ಯಾ ತಿಳಿಸಿದ್ದಾರೆ.
-
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications