ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಾಗಲಕೋಟೆ : ಅಂಗನವಾಡಿಗೆ ಜಿಲ್ಲಾಧಿಕಾರಿಗಳ ದಿಢೀರ್ ಭೇಟಿ

By ನಮ್ಮ ಪ್ರತಿನಿಧಿ
|
Google Oneindia Kannada News

ಬಾಗಲಕೋಟೆ, ಅಕ್ಟೋಬರ್ 16 : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಇಳಕಲ್‌ನಲ್ಲಿನ ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾತೃಪೂರ್ಣ ಯೋಜನೆ ಸರಿಯಾಗಿ ಅನುಷ್ಠಾನವಾಗುತ್ತಿಲ್ಲ ಎಂಬ ದೂರಿನ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬಾಗಲಕೋಟೆ : ಹಳ್ಳದ ದಂಡೆಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆಬಾಗಲಕೋಟೆ : ಹಳ್ಳದ ದಂಡೆಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಸೋಮವಾರ ಜಿಲ್ಲಾಧಿಕಾರಿ ಪಿ.ಎ.ಮೇಘಣ್ಣವರ್ ಅವರು ಇಳಕಲ್‌ನ ಜಿವೇಶ್ವರ ಮಂಗಲ ಭವನದ ಮುಂದೆ ಇರುವ ಅಂಗನವಾಡಿ ಕೇಂದ್ರಕ್ಕೆ ಅನೀರಿಕ್ಷಿತವಾಗಿ ಭೇಟಿ ಕೊಟ್ಟರು. ಸರ್ಕಾರದ ಕಾರ್ಯಕ್ರಮಗಳನ್ನು ಸರಿಯಾಗಿ ಅನುಷ್ಠಾನಗೊಳಿಸದ ಅಂಗನವಾಡಿ ಕಾರ್ಯಕರ್ತೆಯನ್ನು ತರಾಟೆಗೆ ತೆಗೆದುಕೊಂಡರು.

ಕಸದಿಂದ ರಸ : 'ಮುಳುಗಡೆ ನಗರಿ' ಬಾಗಲಕೋಟೆ ಈಗ ಮಾದರಿ ನಗರಸಭೆಕಸದಿಂದ ರಸ : 'ಮುಳುಗಡೆ ನಗರಿ' ಬಾಗಲಕೋಟೆ ಈಗ ಮಾದರಿ ನಗರಸಭೆ

ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿದಾಗ ಆಹಾರ ಧಾನ್ಯಗಳ ಸಂಗ್ರಹ, ದಾಖಲಾತಿ ಮಾಹಿತಿಗಳ ವಿವರವನ್ನು ಮನೆಯಲ್ಲಿ ಇಟ್ಟಿದ್ದೇನೆ ಎಂದು ಅಂಗನವಾಡಿ ಕಾರ್ಯಕರ್ತೆ ಹೇಳಿದರು. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸದೇ ಹಾಳು ಮಾಡುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗರ್ಭಿಣಿಯರಿಗೆ 'ಮಾತೃಪೂರ್ಣ' ಭಾಗ್ಯ ನೀಡಿದ ಸಿದ್ದರಾಮಯ್ಯಗರ್ಭಿಣಿಯರಿಗೆ 'ಮಾತೃಪೂರ್ಣ' ಭಾಗ್ಯ ನೀಡಿದ ಸಿದ್ದರಾಮಯ್ಯ

ಕರ್ನಾಟಕ ಸರ್ಕಾರ ಬಾಣಂತಿಯರು, ಗರ್ಭಿಣಿಯರಿಗೆ ಮಧ್ಯಾಹ್ನದ ಪೌಷ್ಠಿಕಾಂಶಯುಕ್ತ ಆಹಾರ ಒದಗಿಸಲು ಮಾತೃಪೂರ್ಣ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಬೇಕು ಎಂದು ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚನೆ ನೀಡಲಾಗಿದೆ. ಆದ್ದರಿಂದ, ಯೋಜನೆ ಬಗ್ಗೆ ಜಿಲ್ಲಾಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ..

ಸರ್ಕಾರದ ಮಹತ್ವದ ಯೋಜನೆ

ಸರ್ಕಾರದ ಮಹತ್ವದ ಯೋಜನೆ

ಕರ್ನಾಟಕ ಸರ್ಕಾರ ಕೆಲವು ದಿನಗಳ ಹಿಂದೆ ಬಾಣಂತಿಯರು, ಗರ್ಭಿಣಿಯರಿಗೆ ಮಧ್ಯಾಹ್ನದ ಪೌಷ್ಠಿಕಾಂಶಯುಕ್ತ ಆಹಾರ ಒದಗಿಸಲು ಮಾತೃಪೂರ್ಣ ಯೋಜನೆಯನ್ನು ಜಾರಿಗೆ ತಂದಿದೆ. ಯೋಜನೆ ಸರಿಯಾಗಿ ಅನುಷ್ಠಾನವಾಗುತ್ತಿಲ್ಲ ಎಂಬ ದೂರಿನ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ವಿವಿಧ ಅಂಗನವಾಡಿಗಳಲ್ಲಿ ಖುದ್ದಾಗಿ ಪರಿಶೀಲನೆ ನಡೆಸುತ್ತಿದ್ದಾರೆ.

ಜಿಲ್ಲಾಧಿಕಾರಿಗಳಿಂದ ಖುದ್ದು ಪರಿಶೀಲನೆ

ಜಿಲ್ಲಾಧಿಕಾರಿಗಳಿಂದ ಖುದ್ದು ಪರಿಶೀಲನೆ

ಸೋಮವಾರ ಜಿಲ್ಲಾಧಿಕಾರಿ ಪಿ.ಎ.ಮೇಘಣ್ಣವರ್ ಅವರು ಇಳಕಲ್‌ನ ಜಿವೇಶ್ವರ ಮಂಗಲ ಭವನದ ಮುಂದೆ ಇರುವ ಅಂಗನವಾಡಿ ಕೇಂದ್ರಕ್ಕೆ ಅನೀರಿಕ್ಷಿತವಾಗಿ ಭೇಟಿ ಕೊಟ್ಟರು. ಮಾತೃಪೂರ್ಣ ಯೋಜನೆ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳು ಹೇಗೆ ಜನರನ್ನು ತಲುಪುತ್ತಿವೆ ಎಂದು ಮಾಹಿತಿ ಪಡೆದರು.

ಕಾರ್ಯಕರ್ತೆಯನ್ನು ತರಾಟೆಗೆ ತೆಗೆದುಕೊಂಡರು

ಕಾರ್ಯಕರ್ತೆಯನ್ನು ತರಾಟೆಗೆ ತೆಗೆದುಕೊಂಡರು

ಅಂಗನವಾಡಿ ಕೇಂದ್ರದಲ್ಲಿ ದಾಖಲೆಗಳು ಸರಿ ಇರಲಿಲ್ಲ. ಈ ಕೇಂದ್ರಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಿದರು. ಕೇಂದ್ರಗಳಿಗೆ ಭೇಟಿ ನೀಡಿ ಯೋಜನೆ ಅನುಷ್ಠಾನದ ಬಗ್ಗೆ ಕಾಳಜಿ ವಹಿಸಬೇಕು ಎಂದು ತಾಲೂಕು ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಆಹಾರ ಧಾನ್ಯ ಮನೆಯಲ್ಲಿ

ಆಹಾರ ಧಾನ್ಯ ಮನೆಯಲ್ಲಿ

ಅಂಗನವಾಡಿ ಕೇಂದ್ರದಲ್ಲಿ ಆಹಾರ ತಯಾರಿಸದೆ ಹಾಗೂ ಆಹಾರ ಧಾನ್ಯವನ್ನು ಮನೆಯಲ್ಲಿ ಇಟ್ಟು ಕೊಂಡಿರುವುದಕ್ಕೆ ಅಂಗನವಾಡಿ ಕಾರ್ಯಕರ್ತೆ ವಿರುದ್ಧ ಜಿಲ್ಲಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು. ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

English summary
Bagalkot Deputy Commissioner P.A.Meghannavar visited anganwadi in Ilkal on October 16, 2017 and inspected the implement ion of Matrupurna Yojane.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X