ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ
ಬೆಂಗಳೂರು, ಅಕ್ಟೋಬರ್ 24: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯೊಬ್ಬ ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಹೃಷಿಕೇಶ್ ದೇವ್ಡಿಕರ್ ಅವರನ್ನು ಜನವರಿ 2020ರಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ನಂತರ, ಅವರು ವಿಶೇಷ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 167 (2) ಅಡಿಯಲ್ಲಿ ಕಾನೂನುಬದ್ಧ ಜಾಮೀನು ಅರ್ಜಿಯನ್ನು ಸಲ್ಲಿಸಿದರು.
ಆದರೆ, ಅವರ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿರಲಿಲ್ಲ. ಹೀಗಾಗಿ ಇದನ್ನು ವಿರೋಧಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೊಂದು ಕೊಲೆ ಪ್ರಕರಣವಾದ್ದರಿಂದ ಬಂಧನವಾದ 90 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಬೇಕು ಎಂಬುದು ಆರೋಪಿಯ ವಾದವಾಗಿತ್ತು. ಆದರೆ ಏಪ್ರಿಲ್ 4, 2020 ರಂದು ಸಹ ಅವರ ವಿರುದ್ಧ ಯಾವುದೇ ಚಾರ್ಜ್ ಶೀಟ್ ದಾಖಲಾಗಿರಲಿಲ್ಲ. ಆದ್ದರಿಂದ ಅವರು ಸಿಆರ್ಪಿಸಿಯ ಸೆಕ್ಷನ್ 167 ರ ಉಪವಿಭಾಗ (2) ರ ಪ್ರಕಾರ ಸ್ವಯಂಚಾಲಿತವಾಗಿ ಜಾಮೀನು ಪಡೆಯಬೇಕು ಎನ್ನಲಾಗಿತ್ತು.

ದೇವ್ಡಿಕರ್ ಅವರು ಪರಾರಿಯಾಗಿದ್ದು, ಅವರ ಅನುಪಸ್ಥಿತಿಯಲ್ಲಿ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಸರ್ಕಾರಿ ವಕೀಲರು ವಾದಿಸಿದರು. ಅಕ್ಟೋಬರ್ 21, 2022 ರಂದು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು ಈ ಆರೋಪಿಯನ್ನು ಬಂಧಿಸುವ ಮೊದಲು ಪ್ರಕರಣದ ಚಾರ್ಜ್ ಶೀಟ್ ಅನ್ನು ಈಗಾಗಲೇ ಸಲ್ಲಿಸಲಾಗಿದೆ ಎಂದು ಹೇಳುವ ಮನವಿಯನ್ನು ತಿರಸ್ಕರಿಸಿದರು. ಆದ್ದರಿಂದ ಅವರು ಸಿಆರ್ಪಿಸಿಯ ಸೆಕ್ಷನ್ 167 ರ ಉಪವಿಭಾಗ (2) ರ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ ಎನ್ನಲಾಗಿದೆ.
ಆರೋಪಿಯು ಸಿಆರ್ಪಿಸಿಯ ಸೆಕ್ಷನ್ 167 ರ ಉಪವಿಭಾಗ (2) ರ ಅಡಿಯಲ್ಲಿ ಅವರ ಬಂಧನಕ್ಕೆ ಮುಂಚಿತವಾಗಿ ಆರೋಪಪಟ್ಟಿ ಸಲ್ಲಿಸಿದ ಸಂದರ್ಭದಲ್ಲಿ ಜಾಮೀನು ಪಡೆಯಲು ಅರ್ಹನಾಗಿರುವುದಿಲ್ಲ ಎಂದು ನ್ಯಾಯಾಧೀಶರು ಹೇಳಿದರು.

ಪ್ರಸ್ತುತ ಹತ್ಯೆ ಪ್ರಕರಣದಲ್ಲಿ, ಅರ್ಜಿದಾರರ ಬಂಧನಕ್ಕೂ ಮುಂಚೆಯೇ ಅರ್ಜಿದಾರರ ವಿರುದ್ಧ ಚಾರ್ಜ್ ಶೀಟ್ ಹಾಕಲಾಗಿದೆ ಎಂದು ನಾನು ಪರಿಗಣಿಸುತ್ತೇನೆ. ಅರ್ಜಿದಾರರನ್ನು ಆರೋಪಿಯಾಗಿ ಹಾಜರುಪಡಿಸಲಾಗಿದೆ ಮತ್ತು ಕೆಲವು ಅಪರಾಧದ ಆರೋಪಗಳನ್ನು ಹೊರಿಸಲಾಗಿದೆ. ಆದ್ದರಿಂದ ಸಿಆರ್ಪಿಸಿಯ ಸೆಕ್ಷನ್ 167 ರ ಉಪವಿಭಾಗ (2) ರ ಜಾಮೀನು ನೀಡುವ ಅವಕಾಶ ಉದ್ಭವಿಸುವುದಿಲ್ಲ ಎಂದು ಅವರು ಹೇಳಿದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications