Breaking; ದಿವ್ಯಾ ಹಾಗರಗಿಗೆ ಜಾಮೀನು, ಯಾಕೆ ಸಂಭ್ರಮ ಎಂದ ಕಾಂಗ್ರೆಸ್!
ಬೆಂಗಳೂರು, ಜನವರಿ 08; ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದ್ದು ಪಿಎಸ್ಐ ನೇಮಕಾತಿ ಹಗರಣ. ಈ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸೇರಿ 27 ಆರೋಪಿಗಳಿಗೆ ಜಾಮೀನು ಸಿಕ್ಕಿದೆ.
ಕಲಬುರಗಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ ಆರೋಪಿಗಳಿಗೆ ಜಾಮೀನು ನೀಡಿದ ಬಳಿಕ ಎಲ್ಲರೂ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಪಟಾಕಿ ಸಿಡಿಸಿ ದಿವ್ಯಾ ಹಾಗರಗಿ ಬರಮಾಡಿಕೊಳ್ಳಲಾಗಿದೆ ಎಂಬ ಸುದ್ದಿಗಳು ಹಬ್ಬಿವೆ.
ಭಾನುವಾರ ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. 'ಸರ್ಕಾರದ ಸಹಕಾರ, ಗೃಹಸಚಿವರ ಮುತುವರ್ಜಿಯಿಂದ ಜಾಮೀನು ಪಡೆದು ಹೊರಬಂದ PSI ಅಕ್ರಮದ ಆರೋಪಿ, ಬಿಜೆಪಿ ನಾಯಕಿ ದಿವ್ಯ ಹಾಗಾರಗಿಯನ್ನು ಪಟಾಕಿ ಹಚ್ಚಿ ಸಂಭ್ರಮಿಸಿ ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರು' ಎಂದು ಹೇಳಿದೆ.

'ಯಾಕೆ ಈ ಸಂಭ್ರಮ @BJP4Karnataka?. 56 ಸಾವಿರ ಯುವಕರ ಬದುಕು ಮುಳುಗಿಸಿದ್ದಕ್ಕಾ?. ಸರ್ಕಾರದ ಕಿಂಗ್ಪಿನ್ಗಳನ್ನು ಬಚಾವು ಮಾಡಿದ್ದಕ್ಕಾ?' ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಮತ್ತೊಂದು ಟ್ವೀಟ್ನಲ್ಲಿ ಕಾಂಗ್ರೆಸ್, 'ಭ್ರಷ್ಟ @BJP4Karnataka ಆಡಳಿತದ ವಿಪರ್ಯಾಸ ಇದು. ಪ್ರಾಮಾಣಿಕವಾಗಿ ಪರೀಕ್ಷೆ ಬರೆದ 56 ಸಾವಿರ PSI ಅಭ್ಯರ್ಥಿಗಳು ಭವಿಷ್ಯದ ದಿಕ್ಕು ಕಾಣದೆ ನೋವು ಅನುಭವಿಸುತ್ತಿದ್ದಾರೆ' ಎಂದು ಹೇಳಿದೆ.
'ಅಕ್ರಮ ನಡೆಸಿದ ಆರೋಪಿಗಳು ಸರ್ಕಾರದ ಸಹಕಾರದಿಂದ ಜಾಮೀನು ಪಡೆದು, ಪಟಾಕಿ ಹಚ್ಚಿ ಸಂಭ್ರಮಿಸುತ್ತಿದ್ದಾರೆ. ಈ ಮೂಲಕ 56 ಸಾವಿರ ಯುವಕರನ್ನು ಅಣಕಿಸುತ್ತಿದೆ ಸರ್ಕಾರ' ಎಂದು ಟೀಕೆ ಮಾಡಿದೆ.
ಸರ್ಕಾರದ ಸಹಕಾರ, ಗೃಹಸಚಿವರ ಮುತುವರ್ಜಿಯಿಂದ ಜಾಮೀನು ಪಡೆದು ಹೊರಬಂದ PSI ಅಕ್ರಮದ ಆರೋಪಿ, ಬಿಜೆಪಿ ನಾಯಕಿ ದಿವ್ಯ ಹಾಗಾರಗಿಯನ್ನು ಪಟಾಕಿ ಹಚ್ಚಿ ಸಂಭ್ರಮಿಸಿ ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರು.
— Karnataka Congress (@INCKarnataka) January 8, 2023
ಯಾಕೆ ಈ ಸಂಭ್ರಮ @BJP4Karnataka?
56 ಸಾವಿರ ಯುವಕರ ಬದುಕು ಮುಳುಗಿಸಿದ್ದಕ್ಕಾ?
ಸರ್ಕಾರದ ಕಿಂಗ್ಪಿನ್ಗಳನ್ನು ಬಚಾವು ಮಾಡಿದ್ದಕ್ಕಾ? pic.twitter.com/R6NhEvVzxS
ಗೃಹ ಸಚಿವರಿಗೆ ಪ್ರಶ್ನೆ; ಕಾಂಗ್ರೆಸ್ ತನ್ನ ಟ್ವೀಟ್ನಲ್ಲಿ, 'ಗೃಹ ಸಚಿವ @JnanendraAraga
ಅವರೇ, PSI ಹಗರಣದ ಆರೋಪಿಗಳಿಗೆ ಅರ್ಥಾತ್ ನಿಮ್ಮ ಆಪ್ತರಿಗೆ ಜಾಮೀನು ದೊರಕಿದ್ದು ನಿಮ್ಮ ವೈಫಲ್ಯದಿಂದಲೋ ಅಥವಾ ಸಹಕಾರದಿಂದಲೋ?. ಜಾಮೀನು ದೊರಕಿಸಿಕೊಡುವಲ್ಲಿ ಸರ್ಕಾರವೇ ಶ್ರಮ ಹಾಕಿದಂತಿದೆ. ವಿಧಾನಸೌಧದ ಒಳಗಿನ ಕುಳಗಳನ್ನು ವಿಚಾರಣೆಗೆ ಒಳಪಡಿಸಿದೆ ತನಿಖೆಯನ್ನು ದುರ್ಬಲಗೊಳಿಸಿದ್ದೇಕೆ?' ಎಂದು ಪ್ರಶ್ನೆ ಮಾಡಿದೆ.
ಪಿಎಸ್ಐ ನೇಮಕಾತಿ ಹಗರಣ ಬೆಳಕಿಗೆ ಬಂದ ಬಳಿಕ ದಿವ್ಯಾ ಹಾಗರಗಿ ತಲೆಮರೆಸಿಕೊಂಡಿದ್ದರು. ಬಳಿಕ ಅವರನ್ನು ಬಂಧಿಸಲಾಗಿತ್ತು. ಎಂಟು ತಿಂಗಳ ಕಾಲ ಜೈಲಿನಲ್ಲಿದ್ದ ಆಕೆಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕೃಷ್ಣಾಜಿ ಪಾಟೀಲ ಜಾಮೀನು ಮಂಜೂರು ಮಾಡಿದ್ದರು. ಆಕೆ ಪತಿ ರಾಜೇಶ್ ಸಹ ಈ ಪ್ರಕರಣದಲ್ಲಿ ಆರೋಪಿಯಾಗಿದ್ದು, ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.












Click it and Unblock the Notifications