ಚುಂಚಶ್ರೀ ಹುಟ್ಟೂರಾದ ಬಾನಂದೂರು ಅಭಿವೃದ್ಧಿಗೆ ಕ್ರಮ: ಸಿಎಂ
ಮಂಡ್ಯ,ಜನವರಿ,19: ಆದಿಚುಂಚನಗಿರಿ ಮಠದ ರೂವಾರಿಗಳಾದ ಬಾಲಗಂಗಾಧರನಾಥ ಶ್ರೀಗಳ ಹುಟ್ಟೂರಾದ ರಾಮನಗರ ತಾಲೂಕು ಬಿಡದಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾನಂದೂರು ಗ್ರಾಮವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ನಾಗಮಂಗಲ ತಾಲೂಕು ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ ಆಯೋಜಿಸಿದ್ದ ಪದ್ಮಭೂಷಣ ಡಾ. ಬಾಲಗಂಗಾಧರನಾಥ ಸ್ವಾಮೀಜಿಯವರ 71ನೇ ಜಯಂತೋತ್ಸವ ಹಾಗೂ ಶ್ರೀ ಗುರುನಮನ - ಭಕ್ತ ಸಂಗಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.[ಆದಿಚುಂಚನಗಿರಿ ಏಳಿಗೆ ರೂವಾರಿಯೇ ಬಾಲಗಂಗಾಧರರು]

ಪ್ರಾಥಮಿಕ ಶಿಕ್ಷಣದಿಂದ ತಾಂತ್ರಿಕ, ವೈದ್ಯಕೀಯ ಶಿಕ್ಷಣದವರೆಗೆ ಎಲ್ಲಾ ಪ್ರಕಾರ ಶಿಕ್ಷಣವನ್ನು ನೀಡುವ ಆದಿಚುಂಚನಗಿರಿ ಮಠದ ಶೈಕ್ಷಣಿಕ ಸಂಸ್ಥೆಗಳಲ್ಲಿ 1.25 ಲಕ್ಷ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಈ ಸಂಸ್ಥೆಗಳಲ್ಲಿ ಜಾತ್ಯಾತೀತ, ಸೀಮಾತೀತವಾಗಿ ಎಲ್ಲಾ ವರ್ಗದ ಮಕ್ಕಳು ಕಲಿಯುತ್ತಿರುವುದೇ ಈ ಸಂಸ್ಥೆಯ ಹೆಗ್ಗಳಿಕೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.[ಕೆಆರ್.ಪೇಟೆ ಸರ್ಕಾರಿ ಶಾಲಾ ಮಕ್ಕಳಿಗೆ ಆಕಾಶವೇ ಸೂರು!]
ಬಾಲಗಂಗಾಧರನಾಥ ಶ್ರೀಗಳಿಗೆ ಪ್ರಕೃತಿ, ನಿಸರ್ಗದ ಬಗ್ಗೆ ಅಪಾರ ಪ್ರೀತಿ ಇತ್ತು. ಜನರಿಗೆ ಧಾರ್ಮಿಕ ಜಾಗೃತಿ, ಶಿಕ್ಷಣ ಸಿಗಬೇಕಾದರೆ ನಿಸರ್ಗದ ಪ್ರೀತಿ ಬೇಕು ಎಂಬುದನ್ನು ಅವರು ತೋರಿಸಿದರು. ಹಸಿರು ಕ್ರಾಂತಿಗೆ ಹೆಚ್ಚು ಒತ್ತು ಕೊಟ್ಟಿದ್ದ ಅವರು 5 ಕೋಟಿ ಗಿಡಗಳನ್ನು ನೆಟ್ಟು ಮರ ಬೆಳೆಸುವುದನ್ನು ಯಜ್ಞದ ರೀತಿಯಲ್ಲಿ ಮಾಡಿದರು ಎಂದು ಹೇಳಿದರು.
ಹಿಂದಿನ ಶ್ರೀಗಳ ಹಾದಿಯಲ್ಲೇ ಪ್ರಸ್ತುತ ಪೀಠಾಧ್ಯಕ್ಷರಾಗಿರುವ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಸಾಗುತ್ತಿದ್ದಾರೆ. ಅವರು ಮಠದ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ, ಮಠ ಜಾತ್ಯಾತೀತವಾಗಿ ಮತ್ತಷ್ಟು ಏಳಿಗೆ ಹೊಂದಲಿ ಎಂದು ಹಾರೈಸಿದ ಮುಖ್ಯಮಂತ್ರಿಗಳು, ಮಠದ ಅಭಿವೃದ್ಧಿಗೆ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದರು.[ಆರ್ ಟಿಇಯಡಿ ಎಲ್ ಕೆಜಿ, ಯುಕೆಜಿ ಪ್ರವೇಶಕ್ಕೆ ತಡೆ ನೀಡಿದ ಹೈಕೋರ್ಟ್]
ಆದಿಚುಂಚನಗಿರಿ ಸೇರಿದಂತೆ ಸುತ್ತಮುತ್ತಲಿನ 125 ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ಯೋಜನೆ ಅನುಷ್ಟಾನ ಹಾಗೂ ಮಠದ ಸುತ್ತ ಇರುವ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಶಾಸಕರಾದ ಎನ್. ಚಲುವರಾಯಸ್ವಾಮಿ ಅವರು ಮನವಿ ಮಾಡಿದ್ದು, ಈ ಯೋಜನೆ ಅನುಷ್ಟಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications