1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು
ಬೆಂಗಳೂರು: ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಸೆಳೆಯಲು ಫ್ಲಿಪ್ಕಾರ್ಟ್ (Flipkart) ಸಂಸ್ಥೆ ಕೇವಲ 1 ರೂಪಾಯಿಗೆ 1 ಲೀಟರ್ ಹಾಲು ಮಾರಾಟ ಮಾಡಲು ಮುಂದಾಗಿರುವುದು ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಫ್ಲಿಪ್ಕಾರ್ಟ್ನ ಇಷ್ಟು ದೊಡ್ಡ ಮಟ್ಟದ 'ಡಿಸ್ಕೌಂಟ್' ನಡೆಯ ವಿರುದ್ಧ ಬೆಂಗಳೂರು ಹಾಲು ಒಕ್ಕೂಟದ (ಬಮೂಲ್) ಅಧ್ಯಕ್ಷ ಡಿ.ಕೆ. ಸುರೇಶ್ ತೀವ್ರ ವಾಗ್ದಾಳಿ ನಡೆಸಿದ್ದು, ಇದು ರೈತ ಸಮುದಾಯವನ್ನು ನಾಶಮಾಡುವ ಹುನ್ನಾರ ಎಂದು ಗುಡುಗಿದ್ದಾರೆ.
ಶನಿವಾರ ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಫ್ಲಿಪ್ಕಾರ್ಟ್ ವಿರುದ್ಧ ಭಾರತೀಯ ಸ್ಪರ್ಧಾತ್ಮಕ ಆಯೋಗಕ್ಕೆ ದೂರು ನೀಡುವುದಾಗಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆಯುವುದಾಗಿ ಎಚ್ಚರಿಸಿದ್ದಾರೆ.

ಸ್ಪರ್ಧಾ ಆಯೋಗಕ್ಕೆ ದೂರು ಮತ್ತು ಪ್ರಧಾನಿಗೆ ಪತ್ರ
"ಹಣ ಮಾಡುವ ಭರದಲ್ಲಿ ಫ್ಲಿಪ್ಕಾರ್ಟ್ ಸಂಸ್ಥೆ ಕೇವಲ ಒಂದು ರೂಪಾಯಿಗೆ ಒಂದು ಲೀಟರ್ ಹಾಲು ನೀಡಲು ಮುಂದಾಗಿದೆ. ಇದು ರೈತ ಸಮುದಾಯವನ್ನು ಧ್ವಂಸ ಮಾಡುವಂತಹ ಕೃತ್ಯ. ಈ ಕುರಿತು ನವದೆಹಲಿಯಲ್ಲಿರುವ ಕಾಂಪಿಟೇಷನ್ ಕಮಿಷನ್ ಆಫ್ ಇಂಡಿಯಾಗೆ ಸೆಕ್ಷನ್ 19/1 ಎ (Section 19/1A) ಅಡಿ ಕಠಿಣ ಕ್ರಮ ತೆಗೆದುಕೊಳ್ಳುವಂತೆ ದೂರು ನೀಡಲಾಗುತ್ತಿದೆ. ಜತೆಗೆ, ಈ ಗಂಭೀರ ವಿಚಾರವನ್ನು ಪ್ರಧಾನಿ ಮೋದಿಯವರಿಗೆ ಇ-ಮೇಲ್ ಮುಖಾಂತರ ಕಳುಹಿಸುತ್ತಿದ್ದೇನೆ," ಎಂದು ಡಿ.ಕೆ. ಸುರೇಶ್ ತಿಳಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಬಗ್ಗೆ ಕೂಡಲೇ ಎಚ್ಚೆತ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಎಚ್ಚರಿಕೆ ನೀಡಿದರು.
ಬಂಡವಾಳಶಾಹಿಗಳಿಂದ ಸಹಕಾರಿ ವ್ಯವಸ್ಥೆ ನಾಶದ ಯತ್ನ
ಮಾರುಕಟ್ಟೆಯನ್ನು ಆಕ್ರಮಿಸಿಕೊಳ್ಳುವ ದುರುದ್ದೇಶದಿಂದ ನಡೆಸುತ್ತಿರುವ ಈ ಬೆಲೆ ಸಮರದಿಂದ ನೇರವಾಗಿ ರೈತರಿಗೆ ಬಲವಾದ ಹೊಡೆತ ಬೀಳುತ್ತದೆ. ಗ್ರಾಹಕರನ್ನು ಆಕರ್ಷಿಸಲು ಸಾರ್ವಜನಿಕರ ಷೇರಿನ ಹಣವಾಗಿರುವ ಸುಮಾರು 2 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗುತ್ತಿದೆ. ಇದು ಸೂಕ್ತವಲ್ಲ. ಸ್ವಾತಂತ್ರ್ಯ ಪೂರ್ವದಿಂದಲೂ ಬೆಳೆದುಬಂದಿರುವ ಹಾಲು ಒಕ್ಕೂಟಗಳನ್ನು ಮತ್ತು ಸಹಕಾರಿ ವ್ಯವಸ್ಥೆಯನ್ನು ನಾಶ ಮಾಡುವ ಪ್ರಕ್ರಿಯೆ ಇದಾಗಿದೆ. ಬಹುರಾಷ್ಟ್ರೀಯ ಕಂಪನಿಗಳು (MNC) ರೈತರ ಹಿತವನ್ನು ಹಾಳು ಮಾಡುತ್ತಿವೆ. ಕಡಿಮೆ ದರಕ್ಕೆ ಎಷ್ಟು ದಿನ ಹಾಲನ್ನು ನೀಡುತ್ತಾರೆ ಎಂದು ಅವರು ಜಾಹೀರಾತಿನಲ್ಲಿ ಸ್ಪಷ್ಟವಾಗಿ ತಿಳಿಸಬೇಕು. ಈ ಕೂಡಲೇ ಫ್ಲಿಪ್ಕಾರ್ಟ್ ಸಂಸ್ಥೆ ಈ ಯೋಜನೆಯಿಂದ ಹಿಂದೆ ಸರಿಯಬೇಕು ಎಂದು ಅವರು ಆಗ್ರಹಿಸಿದರು.
ಬಮೂಲ್ ಮಾರಾಟದಲ್ಲಿ ದಿಢೀರ್ ಕುಸಿತ
ಫ್ಲಿಪ್ಕಾರ್ಟ್ನ ಈ 1 ರೂಪಾಯಿ ಆಫರ್ನಿಂದಾಗಿ ಈಗಾಗಲೇ ಬರೋಬ್ಬರಿ 14.5 ಲಕ್ಷ ಲೀಟರ್ ಹಾಲು ಮಾರಾಟವಾಗಿದೆ. ಗ್ರಾಹಕರನ್ನು ಸೆಳೆಯಲು ಎಲ್ಲೆಡೆ ವ್ಯಾಪಕವಾಗಿ ಜಾಹೀರಾತುಗಳನ್ನು ನೀಡಲಾಗುತ್ತಿದೆ. ಈ ನಡೆಯಿಂದಾಗಿ ಬಮೂಲ್ ಒಕ್ಕೂಟದ ಹಾಲಿನ ಮಾರಾಟದಲ್ಲಿ ದಿನಕ್ಕೆ 40 ರಿಂದ 50 ಸಾವಿರ ಲೀಟರ್ನಷ್ಟು ಕುಸಿತ ಕಂಡಿದೆ. "ಆ ಕಂಪನಿಯವರು ಕಡಿಮೆ ದರಕ್ಕೆ ಎಷ್ಟು ದಿನ ಹಾಲು ಕೊಡುತ್ತಾರೆ ಎಂಬುದನ್ನು ಬಹಿರಂಗಪಡಿಸಬೇಕು. ಮಾರುಕಟ್ಟೆಯಲ್ಲಿ ನಂದಿನಿ ಮಾತ್ರವಲ್ಲ, ಅನೇಕ ಕಂಪನಿಗಳಿವೆ. ಆದರೆ ವ್ಯಾಪಾರದ ಹೆಸರಿನಲ್ಲಿ ರೈತ ಸಂಕುಲಕ್ಕೆ ಬೆಂಕಿ ಇಡುವುದು ಎಷ್ಟರಮಟ್ಟಿಗೆ ಸರಿ? ದೇಶದ ಒಳಗೆ ಇರುವವರೇ ಹೀಗೆ ಮಾಡುವುದು ಎಷ್ಟು ಸರಿ?" ಎಂದು ಅವರು ತೀವ್ರ ಬೇಸರ ವ್ಯಕ್ತಪಡಿಸಿದರು.
ಹಾಲಿನ ಗುಣಮಟ್ಟದ ಬಗ್ಗೆ ಅನುಮಾನ - ಲ್ಯಾಬ್ಗೆ ರವಾನೆ
"ರೈತರಿಂದ ಹಾಲು ಖರೀದಿಸುವಾಗ ಒಕ್ಕೂಟಗಳು ಪ್ರತಿ ಲೀಟರ್ಗೆ 38, 39, 40 ರೂಪಾಯಿ ಹಣವನ್ನು ಪಾವತಿಸುತ್ತಿವೆ. ಹೀಗಿರುವಾಗ ಫ್ಲಿಪ್ಕಾರ್ಟ್ ಒಂದು ರೂಪಾಯಿಗೆ ಒಂದು ಲೀಟರ್ ಹಾಲು ಕೊಡಲು ಹೇಗೆ ಸಾಧ್ಯ? ಅವರು ಯಾರಿಂದ ಹಾಲು ಖರೀದಿಸುತ್ತಿದ್ದಾರೆ? ಎಲ್ಲಿಂದ ಬರುತ್ತಿದೆ? ಎಂಬುದರ ಬಗ್ಗೆ ತನಿಖೆಯಾಗಬೇಕಿದೆ. ಒಂದುವೇಳೆ ಹಾಲಿಗೆ ಹಾಲಿನ ಪುಡಿ (Milk Powder) ಬೆರೆಸುತ್ತಿದ್ದಾರೆಯೇ ಎನ್ನುವ ಅನುಮಾನವೂ ಇದೆ. ಹೀಗಾಗಿ ಆ ಹಾಲಿನ ಸ್ಯಾಂಪಲ್ ತರಿಸಿ, ಲ್ಯಾಬ್ನಲ್ಲಿ ಗುಣಮಟ್ಟದ ಪರೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ" ಎಂದು ಡಿ.ಕೆ. ಸುರೇಶ್ ಮಾಹಿತಿ ನೀಡಿದರು.
ರೈತರು ಯಾರಿಗೆ ಹಾಲು ಮಾರಾಟ ಮಾಡುತ್ತಾರೆ ಎಂಬುದು ನಿಖರವಾಗಿ ತಿಳಿಯುವುದಿಲ್ಲ. ಬಲ್ಕ್ ಮಿಲ್ಕ್ ಉತ್ಪಾದಕರಿಂದಲೂ ಅವರು ಖರೀದಿಸುತ್ತಿರಬಹುದು. ಆದರೆ, ಸಹಕಾರಿ ಸಂಘಗಳು ಒಮ್ಮೆ ಮುಗ್ಗರಿಸಿದರೆ ಅದರ ನೇರ ಹಾಗೂ ಭೀಕರ ಪರಿಣಾಮ ರೈತರ ಮೇಲೆಯೇ ಬೀಳುತ್ತದೆ. ಆದ್ದರಿಂದ ಮಾಧ್ಯಮಗಳು ಈ ವಿಚಾರವಾಗಿ ರಾಷ್ಟ್ರದ ಗಮನ ಸೆಳೆಯಬೇಕು. ರೈತರ ಪರವಾಗಿ ನಿಲ್ಲಬೇಕು ಹಾಗೂ ರೈತರು ಹೋರಾಟಕ್ಕೆ ಇಳಿಯಬೇಕು ಎಂದು ಬಮೂಲ್ ಅಧ್ಯಕ್ಷರು ಕರೆ ನೀಡಿದ್ದಾರೆ.
-
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ













Click it and Unblock the Notifications