ಬಾಳೆಹಣ್ಣು ತಿನ್ನುವ ಸರಿಯಾದ ಕ್ರಮ ಯಾವುದು? ಈ ಸಣ್ಣ ತಪ್ಪು ನಿಮ್ಮ ಆರೋಗ್ಯವನ್ನೇ ಹಾಳು ಮಾಡಬಹುದು
ಬಾಳೆಹಣ್ಣುಗಳನ್ನು ಆರೋಗ್ಯಕರ ಮತ್ತು ಶಕ್ತಿದಾಯಕ ಹಣ್ಣು ಎಂದು ಹೇಳಲಾಗುತ್ತದೆ. ಕಡಿಮೆ ಬೆಲೆಯಲ್ಲಿ ಸುಲಭವಾಗಿ ದೊರೆಯುವ ಈ ಹಣ್ಣು ದೇಹಕ್ಕೆ ತಕ್ಷಣ ಶಕ್ತಿಯನ್ನು ನೀಡುವ ಗುಣ ಹೊಂದಿದೆ. ಆನಾರೋಗ್ಯ ಅಥವಾ ಸ್ನಾಯು ಶಕ್ತಿ ದೌರ್ಬಲ್ಯ ಸಮಸ್ಯೆಗಳು ಉಂಟಾದಾಗ ಬಾಳೆಹಣ್ಣು ಸೇವಿಸಿ. ಇದು ದೇಹದಲ್ಲಿ ಶಕ್ತಿ ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ಹಲವು ತಜ್ಞರು ಹೇಳುತ್ತಾರೆ.
ಆದರೆ, ಈ ಬಾಳೆಹಣ್ಣು ಎಲ್ಲರಿಗೂ ಸೂಕ್ತವಲ್ಲ. ಕೆಲವು ಆರೋಗ್ಯ ಸಮಸ್ಯೆಗಳಿಗೆ ಒಳಗಾಗಿರುವವರು ಇದನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಬೇಕು ಎಂದು ಹಲವು ಆರೋಗ್ಯ ತಜ್ಙರು ಸಲಹೆಯಾಗಿದೆ.
ಆರೋಗ್ಯದಲ್ಲಿ ಆಗುವ ಪ್ರಯೋಜನಗಳು
ಬಾಳೆಹಣ್ಣುಗಳಲ್ಲಿ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಅಂಶಗಳು ಹೆಚ್ಚಾಗಿರುತ್ತದೆ. ಇದು ರಕ್ತದೊತ್ತಡ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ. ದೇಹದ ಎಲೆಕ್ಟ್ರೊಲೈಟ್ ಸಮತೂಲನವನ್ನು ಕಾಪಾಡಿ ಹೃದಯದ ಕಾಯಿಲೆ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುವಲ್ಲಿ ಸಹಕಾರಿ ಆಗಬಲ್ಲದು ಎಂದು ತಜ್ಙರು ಹೇಳುತ್ತಾರೆ.

ಕೆಲವು ಆರೋಗ್ಯ ಸಮಸ್ಯೆಗಳಿರುವವರು ಬಾಳೆಹಣ್ಣನ್ನು ಮಿತವಾಗಿ ಸೇವನೆ ಮಾಡಬೇಕು. ಅಲರ್ಜಿ ಸಮಸ್ಯೆ, ಮಧುಮೇಹ ರೋಗಿಗಳು, ಮೈಗ್ರೇನ್, ಮೂತ್ರಪಿಂಡದ ಸಮಸ್ಯೆಗಳು, ಆಸ್ತಮಾ, ಜೀರ್ಣಕ್ರಿಯೆಯಂತಹ ಆರೋಗ್ಯ ಸಮಸ್ಯೆ ಇರುವವರು ಬಾಳೆಹಣ್ಣುಗಳನ್ನು ಸೀಮಿತ ಪ್ರಮಾಣದಲ್ಲಿ ಮಾತ್ರ ಸೇವಿಸುವುದು ಉತ್ತಮ ಎಂದು ತಜ್ಞರು ಹೇಳುತ್ತಾರೆ.
ಹೆಚ್ಚು ಸೇವಿಸಿದರೆ ಏನಾಗುತ್ತದೆ?
ಅತಿಯಾಗಿ ಬಾಳೆಹಣ್ಣು ತಿನ್ನುವುದರಿಂದ ತೂಕ ಹೆಚ್ಚಾಗುವ ಸಾಧ್ಯತೆಯಿದೆ. ಇದರಲ್ಲಿ ನೈಸರ್ಗಿಕ ಸಕ್ಕರೆ ಇರುವುದರಿಂದ ಮಧುಮೇಹಿಗಳಿಗೆ ಇದು ಸೂಕ್ತವಲ್ಲ. ಜೊತೆಗೆ ಗ್ಯಾಸ್ಟ್ರಿಕ್, ಉಬ್ಬರ ಮತ್ತು ಜೀರ್ಣ ಸಮಸ್ಯೆಗಳು ಉಂಟಾಗಬಹುದು. ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿದರೆ ದೇಹದಲ್ಲಿ ಕ್ಯಾಲೊರಿಗಳು ಹೆಚ್ಚಾಗಿ ತೂಕ ನಿಯಂತ್ರಣ ಕಷ್ಟವಾಗಬಹುದು. ವಿಶೇಷವಾಗಿ ಡಯಟ್ ಅನುಸರಿಸುವವರು ಬಾಳೆಹಣ್ಣಿನ ಪ್ರಮಾಣವನ್ನು ನಿಯಂತ್ರಿಸುವುದು ಅಗತ್ಯ.
ಖಾಲಿ ಹೊಟ್ಟೆಯಲ್ಲಿ ತಿನ್ನಬೇಡಿ
ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ಸೇವಿಸುವುದರಿಂದ ದೇಹದಲ್ಲಿ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಮಟ್ಟ ಹೆಚ್ಚಾಗಬಹುದು. ಇದರಿಂದ ವಾಂತಿಯಾಗುವ ಸಾಧ್ಯತೆ ಹೆಚ್ಚಿರುತ್ತದೆ. ಅದೇ ರೀತಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ಕೆಲವರಿಗೆ ಅಜೀರ್ಣ ಅಥವಾ ಅಸ್ವಸ್ಥತೆ ಕಾಣಿಸಬಹುದು. ಆದ್ದರಿಂದ, ಬಾಳೆಹಣ್ಣುಗಳನ್ನು ಆಹಾರ ಜೊತೆಗೆ ಅಥವಾ ಊಟದ ನಂತರ ಸೇವಿಸುವುದು ಉತ್ತಮ.
ಯಾವ ಸಮಯದಲ್ಲಿ ತಿನ್ನುವುದು ಉತ್ತಮ?
ಪೊಟ್ಯಾಸಿಯಮ್ ಮತ್ತು ಮೆಗ್ನೇಸಿಯಮ್ ಪೋಷಕಾಂಶಗಳ ಸಂಪೂರ್ಣ ಲಾಭ ಪಡೆಯಲು ಬಾಳೆಹಣ್ಣುಗಳನ್ನು ಮಧ್ಯಾಹ್ನ ಅಥವಾ ಸಂಜೆ ಸಮಯದಲ್ಲಿ ತಿನ್ನುವುದು ಸೂಕ್ತ ಎಂದು ತಜ್ಞರು ಹೇಳುತ್ತಾರೆ. ವ್ಯಾಯಾಮದ ಮೊದಲು ಅಥವಾ ನಂತರ ತಿನ್ನುವುದರಿಂದ ದೇಹಕ್ಕೆ ತಕ್ಷಣ ಶಕ್ತಿ ದೊರೆಯುತ್ತದೆ. ಬಾಳೆಹಣ್ಣು ಆರೋಗ್ಯಕ್ಕೆ ಉತ್ತಮವಾದರೂ ಎಲ್ಲರಿಗೂ ಒಂದೇ ರೀತಿಯಲ್ಲಿ ಅನುಕೂಲಕರವಾಗುವುದಿಲ್ಲ. ಆರೋಗ್ಯ ಸಮಸ್ಯೆಗಳಿರುವವರು ವೈದ್ಯರ ಸಲಹೆಯೊಂದಿಗೆ ಮಾತ್ರ ಇದನ್ನು ಸೇವಿಸುವುದು ಸೂಕ್ತ.
-
ನಿಮ್ಮ ಮನೆಯ ವಾಸ್ತು ಸರಿಯಿದೆಯೇ? ಶಾಂತಿ ಮತ್ತು ಪ್ರಗತಿಗಾಗಿ ಇಲ್ಲಿವೆ ಪರಿಹಾರಗಳು -
E-Bike: ಗ್ರಾಮೀಣ ಆರೋಗ್ಯ ಸೇವೆಗೆ ಇ-ಬೈಕ್ ವೇಗ: ಮನೆ ಬಾಗಿಲಿಗೆ ವೈದ್ಯಕೀಯ ನೆರವು, ಏನಿದು ಯೋಜನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ














Click it and Unblock the Notifications