Dharmasthala Case: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಬಂದ್ಗೆ ಕರೆ
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತುಹಾಕಿರುವ ಬಗ್ಗೆ ಅನಾಮಿಕ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ, ರಾಜ್ಯ ಸರ್ಕಾರವು ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ಎಸ್ಐಟಿ ರಚಿಸಲಾಗಿದೆ. ವಿಶೇಷ ತನಿಖಾ ತಂಡವು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಮುಸುಕುಧಾರಿ ದೂರುದಾರನೊಂದಿಗೆ ಮಹಜರು ಕಾರ್ಯವನ್ನು ನಡೆಸಿದೆ. ದೂರುದಾರ ಹೂತು ಹಾಕಿರುವ ಶಂಕಿತ ಸ್ಥಳಗಳನ್ನು ಪರಿಶೀಲನೆ ನಡೆಸಲಾಗಿದ್ದು, ಕೆಲ ಸ್ಥಳಗಳಲ್ಲಿ ಅಸ್ತಿಪಂಜರ ಸಿಕ್ಕಿದೆ. ಇನ್ನೂ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬಂದಿದ್ದು, ಇದೀಗ ಬಂದ್ ಗೆ ಕರೆ ನೀಡಲಾಗಿದೆ.
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಇಂದು ವಿವಿಧ ಸಂಘಟನೆಗಳು ಮಂಡ್ಯ ಜಿಲ್ಲೆಯ ಮದ್ದೂರು ಬಂದ್ ಗೆ ಕರೆ ನೀಡಿವೆ.ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ, ಹಿಂದೂ ರಕ್ಷಣಾ ಸಮಿತಿಯಿಂದ ಮದ್ದೂರು ಬಂದ್ ಗೆ ಕರೆ ನೀಡಲಾಗಿದ್ದು, ವರ್ತಕರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬಂದ್ ಗೆ ವ್ಯಾಪಕ ಬೆಂಬಲ ಸೂಚಿಸಿದ್ದಾರೆ. ನರಸಿಂಹಸ್ವಾಮಿ ದೇವಸ್ಥಾನದಿಂದ ಹಿಂದೂ ಸಂಘಟನೆಗಳ ಬೃಹತ್ ರ್ಯಾಲಿ ನಡೆಯಲಿದೆ. ಮಂಜುನಾಥ ಸ್ವಾಮಿಯ ಪವಿತ್ರಾ ಕ್ಷೇತ್ರವಾದ ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುತ್ತಿರುವವರನ್ನು ಗಡಿಪಾರು ಮಾಡಬೇಕು. ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮದ್ದೂರು ಬಂದ್ ಮಾಡಲಾಗಿದೆ. ಇನ್ನು ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ.

ಧರ್ಮಸ್ಥಳ ಬಗ್ಗೆ RSS,BJP ನಿಲುವು ಭಿನ್ನ: ಬೇಳೂರು ಗೋಪಾಲಕೃಷ್ಣ
ಧರ್ಮಸ್ಥಳ ವಿಚಾರದಲ್ಲಿ ಆರ್ ಎಸ್ ಎಸ್, ಬಿಜೆಪಿ ನಿಲುವು ಭಿನ್ನ ಇರಬಹುದು ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯ ಪಟ್ಟಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಧರ್ಮಸ್ಥಳ ಇಂದಿನದಲ್ಲ, 800 ವರ್ಷಗಳ ಇತಿಹಾಸ ಇರುವ ಕ್ಷೇತ್ರವಾಗಿದೆ. ಇತ್ತೀಚಿನ ಕೆಲವು ಘಟನೆಗಳಿಂದ ದುಷ್ಟ ಶಕ್ತಿಗಳು ಕ್ಷೇತ್ರದ ಮೇಲೆ ಅಟ್ಯಾಕ್ ಮಾಡುತ್ತಿದ್ದಾರೆ. ಹುಂಡಿ ಹಣ ಕೇಳುವ ಅಧಿಕಾರ ಯಾರಿಗೂ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವೀರೇಂದ್ರ ಹೆಗಡೆ ಅವರು ಸ್ಪಾಪನೆ ಮಾಡಿರುವ ಕ್ಷೇತ್ರ ಅದು.ಧರ್ಮಸ್ಥಳ ಕ್ಷೇತ್ರಕ್ಕೆ ಹಾನಿ ಮಾಡುವುದನ್ನು ನಾವು ಸಹಿಸಲ್ಲ. ಹುಂಡಿ ಹಣ ಅದರ ಅಭಿವೃದ್ಧಿ ಬಳಸುತ್ತಿದ್ದಾರೆ. ಸಿಂಗದೂರು ದೇವಸ್ಥಾನವನ್ನು ಪಾಪಗಳ ಸರ್ಕಾರಕ್ಕೆ ಬರದುಕೊಟ್ರು. ಯಡಿಯೂರಪ್ಪ ಸರ್ಕಾರ ಸಿಂಗದೂರು ದೇವಸ್ಥಾನವನ್ನು ಸರ್ಕಾರಕ್ಕೆ ಬರೆದುಕೊಟ್ಟಾಗ ಯಾಕೆ ಮಾತನಾಡಲಿಲ್ಲ? ಎಂದು ಪ್ರಶ್ನಿಸಿದರು.
ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಅವರು ಸುಮ್ಮನೆ ಕೂತಿಲ್ಲ. ಅವರು ಶಿಕ್ಷಣ ಸಂಸ್ಥೆಗಳನ್ನು ಮಾಡಿ ಜನರ ಜೊತೆ ಇದ್ದಾರೆ. ಧರ್ಮಸ್ಥಳಕ್ಕೆ ನಾವೂ ಹೋಗುತ್ತೇವೆ. ಕ್ಷೇತ್ರದ ಜನರ ಜೊತೆ ನಾವೂ ಧರ್ಮಸ್ಥಳಕ್ಕೆ ಹೋಗುತ್ತವೆ. ಬಿಜೆಪಿಯವರು ಧರ್ಮಸ್ಥಳ ಚಲೋ ಮಾಡಿದ್ದು ಡ್ರಾಮಾ ಎಂದರು. ಬಿಜೆಪಿಯವರು ಎಸ್ ಐ ಟಿ ತನಿಖೆಯನ್ನು ಸ್ವಾಗತ ಮಾಡಿ ನಂತರ ಈಗ ವಿರೋಧ ಮಾಡುವುದು ಸರಿಯಲ್ಲ. ಯಾರೋ ದುಷ್ಟ ಶಕ್ತಿಗಳು ಮಾಡಿದ್ದನ್ನು ಸರ್ಕಾರದ ಮೇಲೆ ಹಾಕೋದು ಸರಿಯಲ್ಲ. ಬಿಜೆಪಿಯಿಂದ ಧರ್ಮ ಸಂರಕ್ಷಣೆ ಅಭಿಯಾನ ಬರೀ ನಾಟಕ. ಯಾರೇ ಹಿಂದೂಗಳೂ ಸಾವಿನಪ್ಪಿದರೂ, ಕೊಲೆಯಾದರೂ ಅದನ್ನು ಹಿಂದುತ್ವ ಅಂತ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.
ಆರ್ ಎಸ್ ಎಸ್ ಮುಖಂಡ ಕಲ್ಕಡ್ಕ ಪ್ರಭಾಕರ ಭಟ್ ಈಗ ಎಲ್ಲಿ ಹೋಗಿದ್ದಾರೆ? ಅವರು ಹಿಂದುತ್ವ ವಿಚಾರ ಇಟ್ಟುಕೊಂಡು ಮತ್ತೊಮ್ಮೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ RSS ಹಾಗೂ ಬಿಜೆಪಿ ನಿಲುವು ಭಿನ್ನವಾಗಿರಬಹುದು. ಧರ್ಮಸ್ಥಳದ ಪರವಾಗಿ ಬರೀ ವಿಜಯೇಂದ್ರ, ಅಶೋಕ್. ಸಿಟಿ ರವಿ ಅಷ್ಟೇ ಮಾತನಾಡುತ್ತಿದ್ದಾರೆ ಎಂದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications