ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜನರಿಲ್ಲ -ಸಾರಿಗೆಯಿಲ್ಲ: ಕಲಬುರಗಿ, ಚಿಕ್ಕೋಡಿ, ಹು-ಧಾ ಬಂದ್

By ಒನ್ ಇಂಡಿಯಾ ಪ್ರತಿನಿಧಿ
|
Google Oneindia Kannada News

ಕಲಬುರಗಿ/ಧಾರವಾಡ, ಜನವರಿ 08: ಕೋರೆಗಾಂವ್ ನಲ್ಲಿ ದಲಿತರ ಮೇಲೆ ನಡೆದ ಹಲ್ಲೆ ಖಂಡಿಸಿ, ಉತ್ತರ ಕರ್ನಾಟಕದ ವಿವಿಧೆಡೆ ಸೋಮವಾರ ಬಂದ್‌ಗೆ ಕರೆ ನೀಡಿದ್ದು, ಸಾರಿಗೆ ಸಂಚಾರ ಸ್ಥಗಿತಗೊಂಡಿದೆ, ಜನರು, ವಾಹನಗಳ ಸಂಚಾರವಿಲ್ಲದೆ ರಸ್ತೆಗಳು ಬಿಕೋ ಎನ್ನುತ್ತಿವೆ. ವಾಹನಗಳಿಂದ ಗಿಜಿಗುಡುತ್ತಿದ್ದ ರಸ್ತೆಗಳಲ್ಲಿ ಬೀಡಾಡಿ ದನಗಳು ಸ್ವಚ್ಛಂದವಾಗಿ ಓಡಾಡುತ್ತಿವೆ.

ಕಲಬುರಗಿಯ ಆಳಂದ, ಚಿಕ್ಕೋಡಿ, ಹುಬ್ಬಳ್ಳಿ-ಧಾರವಾಡಗಳಲ್ಲೂ ಇದೇ ಚಿತ್ರಣ ಇದ್ದು, ಈ ನಗರಗಳಲ್ಲಿಯೂ ಬಂದ್ ಆಚರಣೆ ಮಾಡಲಾಗುತ್ತಿದೆ.

ಉತ್ತರ ಕರ್ನಾಟಕಕ್ಕೆ ಇಂದು ಬಂದ್ ಬಿಸಿ, ಅವಳಿ ನಗರ ಸಂಪೂರ್ಣ ಸ್ತಬ್ಧಉತ್ತರ ಕರ್ನಾಟಕಕ್ಕೆ ಇಂದು ಬಂದ್ ಬಿಸಿ, ಅವಳಿ ನಗರ ಸಂಪೂರ್ಣ ಸ್ತಬ್ಧ

Bandh in Hubli, Dharwad, Chickodi, Kalaburagi

ಭೀಮ ಕೋರೆಗಾಂವ್ ನಲ್ಲಿ ದಲಿತರ ಮೇಲೆ ಹಲ್ಲೆ ಖಂಡಿಸಿ ಚಿಕ್ಕೋಡಿಯಲ್ಲಿ ಬಂದ್ ಆಚರಣೆ ಮಾಡಲಾಗುತ್ತಿದ್ದು, ಅಂಗಡಿಗಳು ಬಾಗಿಲು ಹಾಕಿವೆ. ಬಸ್ ಸಂಚಾರ ಬಂದ್ ಆಗಿದ್ದು, ಬೆಳಿಗ್ಗೆ 6 ರಿಂದ ಬಂದ್ ಮುಗಿಯುವವರೆಗೂ ಸರಕಾರಿ ಬಸ್ ಸಂಚಾರ ಇರುವುದಿಲ್ಲ ಎಂದು ಚಿಕ್ಕೋಡಿ ಉಪವಿಭಾಗದ ಅಧಿಕಾರಿ ಚಂದ್ರಶೇಖರ್ ಹೇಳಿದ್ದಾರೆ. ನಗರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ವಿಜಯಪುರ ದಾನಮ್ಮ ಅತ್ಯಾಚಾರ ಕೊಲೆ ಪ್ರಕರಣ, ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರ ಸಂವಿಧಾನ ಬದಲಿಸುವ ಕುರಿತ ಹೇಳಿಕೆ, ಉಡುಪಿ ಧರ್ಮ ಸಂಸತ್ ನಲ್ಲಿ ಪೇಜಾವರ ಸ್ವಾಮೀಜಿ ಹೇಳಿಕೆಗಳನ್ನು ಖಂಡಿಸಿ ಧಾರವಾಡ - ಹುಬ್ಬಳ್ಳಿ ಬಂದ್‌ಗೆ ದಲಿತಪರ ಸಂಘಟನೆಗಳು ಕರೆ ಕೊಟ್ಟಿವೆ.

Bandh in Hubli, Dharwad, Chickodi, Kalaburagi

ದಲಿತಪರ ಸಂಘಟನೆಗಳ ಸದಸ್ಯರು ಧಾರವಾಡ ನಗರದ ಜ್ಯೂಬಿಲಿ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಪೊಲೀಸ್ ಬಂದೋಬಸ್ತ್ ಇದೆ. ಅಂಗಡಿಗಳನ್ನು ಪ್ರತಿಭಟನಾಕಾರರು ಬಂದ್ ಮಾಡಿಸುತ್ತಿದ್ದಾರೆ.

English summary
Called Bandh In Uttar Karantaka's Kalaburagi, Hubli, Dharwad, Chickodi in protest against Vijayapura rape incident, Ananth Kumar Hegde's constitution Statement, Bheema Kotregaon attack.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X