Breaking: ಡಿ.31ರಂದು ಕರ್ನಾಟಕ ಬಂದ್: ಎಂದಿನಂತೆ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಸಂಚಾರ
ಬೆಂಗಳೂರು, ಡಿಸೆಂಬರ್ 22: ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರು ನಡೆಸಿರುವ ಪುಂಡಾಟಿಕೆ ವಿರೋಧಿಸಿರುವ ವಿವಿಧ ಕನ್ನಡ ಪರ ಸಂಘಟನೆಗಳು ಡಿ.31ರಂದು ಕರ್ನಾಟಕ ಬಂದ್ ಮಾಡಲು ನಿರ್ಧರಿಸಿವೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಬುಧವಾರ ಸಭೆ ಸೇರಿ ಬಂದ್ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದ್ದು, ಸುಮಾರು 35ಕ್ಕೂ ಅಧಿಕ ಸಂಘಟನೆಗಳಿಂದ ಕರ್ನಾಟಕ ಬಂದ್ಗೆ ಬೆಂಬಲ ನೀಡಿವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗಾರಾಜ್ ಹೇಳಿದ್ದಾರೆ.
ಡಿ.31ರಂದು ನಡೆಯುವ ಕರ್ನಾಟಕ ಬಂದ್ ದಿನದಂದು ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ಗಳ ಸಂಚಾರ ಎಂದಿನಂತೆ ಇರಲಿದೆ ಎಂದು ಎಐಟಿಯುಸಿ ಮುಖಂಡ ಅನಂತ ಸುಬ್ಬರಾವ್ ಹೇಳಿದರು.

ಕನ್ನಡಪರ ಸಂಘಟನೆಗಳಲ್ಲಿ ಒಮ್ಮತವಿಲ್ಲ
ಡಿಸೆಂಬರ್ 31ರಂದು ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್ಗೆ ನಿರ್ಧಾರ ಮಾಡಲು ಮುಂದಾಗಿದ್ದವು. ಆದರೆ, ಈ ಬಗ್ಗೆ ಕನ್ನಡಪರ ಸಂಘಟನೆಗಳಲ್ಲಿ ಒಮ್ಮತ ಮೂಡಿರಲಿಲ್ಲ.
ಎಂಇಎಸ್ ಪುಂಡಾಟಿಕೆ ಹಿನ್ನೆಲೆಯಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ನಿರ್ಧಾರ ಮಾಡಲು ಸಭೆ ಸೇರಲು ನಿರ್ಧರಿಸಿದ್ದವು.
ಅದರಂತೆ, ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗಿದೆ. ಬೆಳಗ್ಗೆ 6ರಿಂದ ಸಂಜೆ 6ರ ತನಕ ಎಲ್ಲಾ ಚಟುವಟಿಕೆ ಬಂದ್ ಆಗಲಿದೆ.
ಡಿಸೆಂಬರ್ 31ರ ಕರ್ನಾಟಕ ಬಂದ್ಗೆ ಕರವೇ ಬೆಂಬಲವಿಲ್ಲ
ಡಿಸೆಂಬರ್ 31ರ ಕರ್ನಾಟಕ ಬಂದ್ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲವಿಲ್ಲ ಎಂದು ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಸ್ಪಷ್ಟನೆ ನೀಡಿದ್ದಾರೆ. ಇಂತಹ ಬಂದ್ಗೆ ಬೆಂಬಲಿಸಿದರೆ ಜನರಿಗೆ ತೊಂದರೆ ಆಗುತ್ತದೆ. ಜನ ಸಾಮಾನ್ಯನಿಗೆ ನಮ್ಮ ಹೋರಾಟವೆಂಬ ಭಾವನೆ ಬರಬೇಕು. ಜನಜಾಗೃತಿ ಸಭೆ ಮೂಲಕ ಜನರನ್ನು ವಿಶ್ವಾಸಕ್ಕೆ ಪಡೆಯಬೇಕು.
ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಕಾನೂನಾತ್ಮಕವಾಗಿ ಎಂಇಎಸ್ ಸಂಘಟನೆ ನಿಷೇಧಿಸಬೇಕು. ಹೀಗಾಗಿ ಕಾನೂನಾತ್ಮಕವಾಗಿ ನಾವೂ ಸಹ ಒತ್ತಡ ಹಾಕಬೇಕಿದೆ. ರಾಜಭವನದ ಮೇಲೆ ಒತ್ತಡ ಹಾಕಲು ಕರವೇ ಹೋರಾಟ ಮಾಡಲಿದೆ ಎಂದು ಟಿ.ಎ. ನಾರಾಯಣಗೌಡ ಹೇಳಿದ್ದಾರೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್












Click it and Unblock the Notifications