ಕರ್ನಾಟಕ ಬಂದ್: ಸಾರ್ವಜನಿಕರಿಗೆ ಗೈಡ್ ಲೈನ್ಸ್
ಬೆಂಗಳೂರು, ಏ.17: ಮೇಕೆದಾಟು ಬಳಿ ಕರ್ನಾಟಕ ಸರ್ಕಾರ ನಿರ್ಮಿಸಲು ಹೊರಟಿರುವ ಅಣೆಕಟ್ಟು ವಿವಾದಕ್ಕೆ ಕಾರಣವಾಗಿದೆ. ಕಾವೇರಿಕೊಳ್ಳದಲ್ಲಿ ಕಾಮಗಾರಿ ಕೈಗೊಂಡು ಕರ್ನಾಟಕ ಕಾವೇರಿ ಐ ತೀರ್ಪನ್ನು ಉಲ್ಲಂಘಿಸುತ್ತಿದೆ ಎಂದು ತಮಿಳುನಾಡು ದೂರಿದೆ. ತಮಿಳುನಾಡಿನ ನಿಲುವು ಖಂಡಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಏ.18ರಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ.
'ಕರ್ನಾಟಕ ಬಂದ್'ಗೆ ಕರ್ನಾಟಕದ ಎಲ್ಲ ವಲಯಗಳಿಂದ, ಎಲ್ಲ ಸಂಸ್ಥೆಗಳಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದೆ. ಶನಿವಾರ ಕರ್ನಾಟಕ ಬಂದ್ ಸಂಪೂರ್ಣ ಯಶಸ್ವಿಯಾಗುವ ಎಲ್ಲ ಲಕ್ಷಣಗಳು ಕಾಣಿಸುತ್ತಿವೆ ಎಂದು ವಾಟಾಳ್ ನಾಗರಾಜ್ ಅವರು ಹೇಳಿದ್ದಾರೆ. [ಕರ್ನಾಟಕ ಬಂದ್ : 500 ಸಂಘಟನೆಗಳ ಬೆಂಬಲ]
ಶನಿವಾರ (ಏ.18) ಬಂದ್ ದಿನ ಬಸ್ ಸಂಚಾರ, ಆಟೋರಿಕ್ಷಾ, ಕ್ಯಾಬ್ ಸೇವೆ ಇರುತ್ತದೆಯೇ? ಸರ್ಕಾರಿ ನೌಕರರು ಬೆಂಬಲ ಸೂಚಿಸಿದ್ದಾರೆಯೇ? ಖಾಸಗಿ ವಲಯದ ಅಭಿಪ್ರಾಯ ಹೇಗಿದೆ? ಸಾರ್ವಜನಿಕರಿಗೆ ಮಾರ್ಗದರ್ಶಿ ಇಲ್ಲಿದೆ.
ಬಸ್ ಸಂಚಾರ ವ್ಯತ್ಯಯ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಸಾರ್ಟಿಸಿ) ನೌಕರರ ಸಂಘದಿಂದ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಬಿಎಂಟಿಸಿ ಹಾಗೂ ಕೆಎಸ್ಸಾರ್ಟಿಸಿ ಬಸ್ ಸಂಚಾರ ವ್ಯತ್ಯಯಗೊಳ್ಳಲಿದೆ. [ಬನ್ನಿ ಮೇಕೆದಾಟು, ಸಂಗಮ ಸುತ್ತಿ ಬರೋಣ]
ಮೆಟ್ರೋ ಸಂಚಾರ ಬಂದ್:
ಬಿಎಂಆರ್ ಸಿಎಲ್ ನಮ್ಮ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಖರೋಲಾ ಮಾತನಾಡಿ, ಪೊಲೀಸರ ನಿರ್ದೇಶನದಂತೆ ರೈಲು ಸಂಚಾರ ಸ್ಥಗಿತಗೊಳಿಸಲಾಗುವುದು. ಬಹುತೇಕ ರೈಲು ಸಂಚಾರ ನಿಲ್ಲಿಸಲಾಗುವುದು. [ಮೇಕೆದಾಟು ಯೋಜನೆ ಏನು, ವಿವಾದ ಏಕೆ?]

ಸಿನಿಮಾ ರಂಗ, ಚಿತ್ರ ಪ್ರದರ್ಶನ ಬಂದ್
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬಂದ್ಗೆ ಬೆಂಬಲ ನೀಡಿದ್ದು, ಶನಿವಾರ ಚಿತ್ರೀಕರಣ, ಚಿತ್ರ ಪ್ರದರ್ಶನ ಸ್ಥಗಿತಗೊಳ್ಳಲಿದೆ. ಮಲ್ಟಿಪ್ಲೆಕ್ಸ್ ಸ್ಕ್ರೀನ್ ಗಳು ಕೂಡಾ ಬಂದ್ ಆಗಲಿವೆ.
ಕೆಎಫ್ ಸಿಸಿ ಕರೆಗೆ ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ನೆನಪಿರಲಿ ಪ್ರೇಮ್ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಸಿನಿಮಾ ರಂಗ ಬಂದ್
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬಂದ್ಗೆ ಬೆಂಬಲ ನೀಡಿದ್ದು, ಶನಿವಾರ ಚಿತ್ರೀಕರಣ, ಚಿತ್ರ ಪ್ರದರ್ಶನ ಸ್ಥಗಿತಗೊಳ್ಳಲಿದೆ. ಮಲ್ಟಿಪ್ಲೆಕ್ಸ್ ಸ್ಕ್ರೀನ್ ಗಳು ಕೂಡಾ ಬಂದ್ ಆಗಲಿವೆ.

ಶಾಪಿಂಗ್ ಮಾಲ್, ಮೆಟ್ರೋ ಇತ್ಯಾದಿ
ಸೂಪರ್ ಬಜಾರ್, ಶಾಪಿಂಗ್ ಮಾಲ್, ಮಲ್ಟಿಪೆಕ್ಸ್ ಗಳು ಸಂಜೆ 6ರತನಕ ಬಂದ್ ಮಾಡುವ ಎಲ್ಲಾ ಲಕ್ಷಣಗಳಿವೆ. ಸಂಜೆ ನಂತರ ಎಂದಿನಂತೆ ವಹಿವಾಟು ನಡೆಯಲಿದೆ.

ಅಡುಗೆ ಅನಿಲ ಸರಬರಾಜು
ಶನಿವಾರ ಇಡೀ ದಿನ ಅಡುಗೆ ಅನಿಲ ಸಿಲಿಂಡರ್ ಸರಬರಾಜು ಇರುವುದಿಲ್ಲ. ಸಿಲಿಂಡರ್ ಮನೆಗೆ ಬರದಿದ್ದರೆ ಏಜೆಂಟರನ್ನು ದೂರಬೇಡಿ.

ಪೆಟ್ರೋಲ್ ಬಂಕ್
ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಪೆಟ್ರೋಲ್ ಕೂಡ ಬಂಕ್ಗಳಲ್ಲಿ ಲಭ್ಯವಾಗದು. ಮೊದಲೇ ಪೆಟ್ರೋಲ್ ಟ್ಯಾಂಕ್ ತುಂಬಿಟ್ಟುಕೊಂಡರೆ ಒಳಿತು. ಅಥವಾ ಸಂಜೆ 6ರವರೆಗೆ ಕಾಯಬೇಕು. ಪೆಟ್ರೋಲ್ ಹಾಕುವ ಹುಡುಗ/ಗಿಯರು ಮುಷ್ಕರ ಹೂಡಿದ್ದಾರೆ.

ಬ್ಯಾಂಕ್ ವಹಿವಾಟು
ಶನಿವಾರ ಬ್ಯಾಂಕ್ಗಳು ತೆರೆಯುತ್ತವಾ ಗೊತ್ತಿಲ್ಲ. ಈ ಕುರಿತಂತೆ ಯಾವುದೇ ಅಧಿಕೃತ ಪ್ರಕಟಣೆಯನ್ನು ಹೊರಡಿಸಿಲ್ಲ. ಕೆಲ ಬ್ಯಾಂಕುಗಳು ಅರ್ಧ ದಿನ ಅರ್ಧ ಬಾಗಿಲು ತೆರೆದು ಅಗತ್ಯ ಸೇವೆ ಒದಗಿಸುವ ಭರವಸೆ ನೀಡಿವೆ.

ಆಸ್ಪತ್ರೆ ಹಾಗೂ ಅಗತ್ಯಸೇವೆ
ಬೆಳಗ್ಗೆ 6ರಿಂದ ಸಂಜೆ 6ರವರೆಗೆ ನಡೆಯಲಿರುವ ಬಂದ್ನಿಂದ ಆಂಬ್ಯುಲೆನ್ಸ್ ಮತ್ತು ಅಗ್ನಿ ಶಾಮಕ ವಾಹನಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ.

ಆಟೋರಿಕ್ಷಾ, ಕ್ಯಾಬ್
ಆಟೋರಿಕ್ಷಾ ಯೂನಿಯನ್, ಟ್ರಕ್ ಚಾಲಕರು, ಪ್ರವಾಸಿ ಟ್ಯಾಕ್ಸಿ ಮಾಲೀಕರ ಸಂಘ ಬಂದ್ ಗೆ ಬೆಂಬಲ ನೀಡಿವೆ. ಆನ್ ಲೈನ್ ಟ್ಯಾಕ್ಸಿ ಸೇವೆ ಒದಗಿಸುವ ಟ್ಯಾಕ್ಸಿ ಫಾರ್ ಶ್ಯೂರ್, ಓಲಾ, ಉಬರ್ ಮಾತ್ರ ಪರಿಸ್ಥಿತಿ ನೋಡಿಕೊಂಡು ಟ್ಯಾಕ್ಸಿ ರಸ್ತೆಗಿಳಿಸುವುದಾಗಿ ಹೇಳಿದ್ದಾರೆ.

ಐಟಿ ಬಿಟಿ ಕಂಪನಿಗಳು
ಬಹುತೇಕ ಕಂಪನಿಗಳಿಗೆ ಶನಿವಾರ ರಜೆ ದಿನವಾಗಿದೆ. ಹೀಗಾಗಿ ಹೆಚ್ಚಿನ ಸಮಸ್ಯೆ ಇಲ್ಲ. ಶನಿವಾರ ಕೆಲಸ ಇದ್ದವರು ವರ್ಕ್ ಫ್ರಂ ಹೋಮ್ ಸೌಲಭ್ಯ ಬಳಸಿಕೊಳ್ಳಬಹುದು. ಇಲ್ಲವೇ ರಜೆ ತೆಗೆದುಕೊಂಡು ಭಾನುವಾರ ಕೆಲಸಕ್ಕೆ ಬರಬಹುದು ಎಂದು ಕಂಪನಿಗಳು ಹೇಳಿವೆ.

ಕೋರ್ಟ್ ಕಚೇರಿ
ಶನಿವಾರ ಯಾವುದೇ ಕೋರ್ಟ್ ಕಲಾಪಗಳು ಇರುವುದಿಲ್ಲ. ಕೋರ್ಟ್ ಹತ್ತಿರ ಹೆಜ್ಜೆ ಹಾಕಲೇಬೇಡಿ ಎಂಬುದು ಕಕ್ಷಿದಾರರಿಗೆ ನೀಡಲಾಗಿರುವ ಸಂದೇಶ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications