ತಿಗಳ ಸಮುದಾಯತ್ತ ಸಿಎಂ ಸಿದ್ದರಾಮಯ್ಯ ಸ್ನೇಹ 'ಹಸ್ತ'
ಬೆಂಗಳೂರು, ಫೆ. 17: ನೂರಾರು ವರ್ಷಗಳಿಂದ ಭಕ್ತಿಯ ಪರಾಕಾಷ್ಠೆಯೊಂದಿಗೆ ಅದ್ದೂರಿಯಾಗಿ ಆಚರಿಸಿಕೊಂಡು ಬರುತ್ತಿರುವ ಕರಗಕ್ಕೆ ಈ ಬಾರಿ ವಿಶೇಷ ಕೊಡುಗೆ ಪ್ರಾಪ್ತಿಯಾಗಿದೆ. ಜತೆಗೆ ಕರಗವನ್ನು ಹೊರುವ ತಿಗಳರ ಸಮುದಾಯಕ್ಕೂ ಭಾರಿ ಕೊಡುಗೆ ಲಭಿಸುವ ಭರವಸೆ ಸಿಕ್ಕಿದೆ.
ಹೌದು ನಿನ್ನೆ ಬಸವನಗುಡಿಯಲ್ಲಿ ಬೃಹತ್ ಪ್ರಮಾಣದಲ್ಲಿ ನಡೆದ ಕರ್ನಾಟಕ ರಾಜ್ಯ ತಿಗಳ ಕ್ಷತ್ರಿಯ ಜನಾಂಗದ ಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಗಳ ಸಮುದಾಯಕ್ಕೆ ಈ ಅಭಯ ನೀಡಿದ್ದಾರೆ. ಲೋಕಸಭಾ ಚುನಾವಣೆ ಒಂದೆರಡು ತಿಂಗಳಲ್ಲಿ ಕಣ್ಣೇದುರಿಗೇ ಇರುವಾಗ ದೊಡ್ಡ ಸಂಖ್ಯೆಯ ತಿಗಳ ಸಮುದಾಯದತ್ತ ಸಿದ್ದರಾಮಯ್ಯ ಸ್ನೇಹ 'ಹಸ್ತ' ಚಾಚಿದ್ದಾರೆ.

ಜತೆಗೆ, ತಿಗಳ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ನೆರವು ನೀಡುವುದಾಗಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಹಾಗೆಯೇ, ತಿಗಳ ಸಮುದಾಯದ ವತಿಯಿಂದ ವಿದ್ಯಾಸಂಸ್ಥೆ, ವಿದ್ಯಾರ್ಥಿನಿಲಯಗಳನ್ನು ಆರಂಭಿಸಿದರೆ ಸರ್ಕಾರದಿಂದ ಅಗತ್ಯ ನೆರವು ನೀಡಲಾಗುತ್ತದೆ ಎಂದೂ ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಇನ್ನು, ತಿಗಳ ಜಾತಿಯನ್ನು ಮೀಸಲು ಅಧಿನಿಯಮ ಪ್ರವರ್ಗ 2ಎ ನಲ್ಲಿ ಅಡಕವಾಗಿದೆ. ಇದರಿಂದ 114ಕ್ಕಿಂತ ಹೆಚ್ಚು ಸಂಖ್ಯೆಯಲ್ಲಿರುವ ಜಾತಿಗಳ ಮಧ್ಯೆ ಸ್ಪರ್ಧೆ ನಡೆಸಲು ತಿಗಳ ಜಾತಿಯವರಿಗೆ ಸಾಧ್ಯವಾಗುತ್ತಿಲ್ಲ. (thigala.com)
ಈ ಹಿನ್ನೆಲೆಯಲ್ಲಿ ತಿಗಳರನ್ನು ಈಗಿರುವ 2ಎ ಪ್ರವರ್ಗದಿಂದ ತೆಗೆದು ಪ್ರವರ್ಗ 1ಕ್ಕೆ ಸೇರಿಸುವಂತೆ ಆ ಜನಾಂಗದ ಮುಖಂಡರು ಸರಕಾರಕ್ಕೆ ಮನವಿ ಮಾಡಿದ್ದಾರೆ. ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಜಾತಿವಾರು ಸಮೀಕ್ಷೆ ನಡೆದಿದ್ದು, ಅದು ಮುಗಿದ ಬಳಿಕ ತಿಗಳ ಜಾತಿಯನ್ನು ಯಾವ ಪ್ರವರ್ಗಕ್ಕೆ ಸೇರಿಸಬೇಕು ಎಂಬುದರ ಬಗ್ಗೆ ತೀರ್ಮಾನಿಸುವುದಾಗಿ ಸಿಎಂ ಸಿದ್ದು ಭರವಸೆ ನೀಡಿದ್ದಾರೆ.
ಕರ್ನಾಟಕ, ತಮಿಳುನಾಡು ಮತ್ತು ಆಂಧ್ರಪ್ರದೇಶ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ತಿಗಳರು ಸಮಾವೇಶಕ್ಕೆ ಆಗಮಿಸಿದ್ದರು. ಕೇಂದ್ರ ಸಚಿವರಾದ ವೀರಪ್ಪ ಮೊಯ್ಲಿ, ಕೆಎಚ್ ಮುನಿಯಪ್ಪ, ಸಚಿವ ದಿನೇಶ್ ಗುಂಡೂರಾವ್, ಸಂಸದ ಅನಂತ ಕುಮಾರ್,
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ, ಬಿಬಿಎಂಪಿ ಸದಸ್ಯ ಗುಣಶೇಖರ್, ರಾಜ್ಯ ತಿಗಳ ಕ್ಷತ್ರಿಯ ಜನಾಂಗದ ಅಧ್ಯಕ್ಷ ಎಚ್ ಸುಬ್ಬಣ್ಣ ಅವರುಗಳು ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications