ಬೆಂಗಳೂರು ಹಂಪ್ಗೆ ಶಿಕಾರಿಪುರದ ಟೆಕ್ಕಿ ವಿನಾಯಕ ಬಲಿ

ಈತ ಶುಕ್ರವಾರ ಬೆಳಗ್ಗೆ ಎಚ್ಎಎಲ್ ಬಳಿಯ ಸಾಫ್ಟ್ ವೇರ್ ಕಂಪನಿಗೆ ಕೆಲಸಕ್ಕೆಂದು ಬೈಕಿನಲ್ಲಿ ಹೊರಟಿದ್ದಾಗ ಮಾರ್ಗ ಮಧ್ಯೆ ಕುಂದಲಹಳ್ಳಿ- ಮಾರತ್ ಹಳ್ಳಿ ಜಂಕ್ಷನ್ ಸಮೀಪ ನಡೆದ ಅವಘಡದಲ್ಲಿ ಪ್ರಾಣತೆತ್ತಿದ್ದಾನೆ.
ದಿಢೀರನೆ ಹಂಪ್ ಕಂಡು ಗಾಬರಿಗೊಂಡ ವಿನಾಯಕ ನಾಮದೇವ ಬ್ರೇಕ್ ಹಾಕಿದಾಗ ಹಿಂದಿನಿಂದ ಬಂದ ನೀರಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿದ್ದಾನೆ ಎಂದು ಎಚ್ಎಎಲ್ ಸಂಚಾರ ಪೊಲೀಸರು ತಿಳಿಸಿದ್ದಾರೆ. ಘಟನೆಯ ಸಂಬಂಧ ಟ್ಯಾಂಕರ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಯಮದೂತನಂತೆ ಹಿಂದೆಯೇ ಬರುತ್ತಿದ್ದ ಟ್ಯಾಂಕರ್: ಶಿಕಾರಿಪುರ ತಾಲೂಕು ಮಾಸೂರಿನ Vinayaka Namdev Patanakar ಆರು ತಿಂಗಳ ಹಿಂದೆ ಇಲ್ಲಿನ ಸಾಫ್ಟ್ ವೇರ್ ಕಂಪನಿಯಲ್ಲಿ ಉದ್ಯೋಗ ದೊರೆತಿದ್ದರಿಂದ ನಗರಕ್ಕೆ ಬಂದು ನೆಲೆಸಿದ್ದ. ಎಂದಿನಂತೆ ಶುಕ್ರವಾರ ಬೈಕಿನಲ್ಲಿ ಕೆಲಸಕ್ಕೆ ಅತಿವೇಗವಾಗಿ ತೆರಳುತ್ತಿದ್ದಾಗ ಮಾರತ್ ಹಳ್ಳಿ ಜಂಕ್ಷನ್ ಸಮೀಪ ರಸ್ತೆ ಉಬ್ಬು ಕಂಡು ಹಠಾತ್ ಬ್ರೇಕ್ ಹಾಕಿದ್ದಾನೆ.
ಆಗ ಯಮದೂತನಂತೆ ಹಿಂದೆಯೇ ಬರುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಬೈಕಿಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಿನಾಯಕನನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಸ್ಥಳೀಯರು ದಾಖಲಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಕಿಲ್ಲರ್ ಬಿಎಂಟಿಸಿಗೆ ವ್ಯಕ್ತಿ ಬಲಿ : ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನೊಬ್ಬ ಮೃತಪಟ್ಟಿರುವ ಘಟನೆ ಮಲ್ಲೇಶ್ವರ 18ನೇ ಕ್ರಾಸ್ ಸಮೀಪ ಶುಕ್ರವಾರ ನಡೆದಿದೆ.
ವಿಧಾನಸೌಧ ಸಚಿವಾಲಯದ 'ಡಿ' ದರ್ಜೆ ನೌಕರರಾದ ಟಿ. ದಾಸರಹಳ್ಳಿ ನಿವಾಸಿ ಬಿ. ಶ್ಯಾಮಸುಂದರ್ (50) ಮೃತರು.
ಮನೆಯಿಂದ ಶುಕ್ರವಾರ ಬೆಳಗ್ಗೆ ಬೆಳಗ್ಗೆ ತಮ್ಮ ಸ್ಕೂಟರಿನಲ್ಲಿ ಶ್ಯಾಮ್ ಅವರು ಕೆಲಸಕ್ಕೆ ತೆರುವಾಗ ಮಾರ್ಗ ಮಧ್ಯೆ, ಮಲ್ಲೇಶ್ವರ 18ನೇ ಕ್ರಾಸಿನಲ್ಲಿ ಯಶವಂತಪುರದಿಂದ ಮೆಜೆಸ್ಟಿಕ್ ಕಡೆಗೆ ಚಲಿಸುತ್ತಿದ್ದ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಸಂಬಂಧ ಬಸ್ ಚಾಲಕ ಕುಮಾರ್ನನ್ನು ಬಂಧಿಸಲಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಮಲ್ಲೇಶ್ವರ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications