ಬೆಂಗಳೂರು ಹಂಪ್ಗೆ ಶಿಕಾರಿಪುರದ ಟೆಕ್ಕಿ ವಿನಾಯಕ ಬಲಿ

ಈತ ಶುಕ್ರವಾರ ಬೆಳಗ್ಗೆ ಎಚ್ಎಎಲ್ ಬಳಿಯ ಸಾಫ್ಟ್ ವೇರ್ ಕಂಪನಿಗೆ ಕೆಲಸಕ್ಕೆಂದು ಬೈಕಿನಲ್ಲಿ ಹೊರಟಿದ್ದಾಗ ಮಾರ್ಗ ಮಧ್ಯೆ ಕುಂದಲಹಳ್ಳಿ- ಮಾರತ್ ಹಳ್ಳಿ ಜಂಕ್ಷನ್ ಸಮೀಪ ನಡೆದ ಅವಘಡದಲ್ಲಿ ಪ್ರಾಣತೆತ್ತಿದ್ದಾನೆ.
ದಿಢೀರನೆ ಹಂಪ್ ಕಂಡು ಗಾಬರಿಗೊಂಡ ವಿನಾಯಕ ನಾಮದೇವ ಬ್ರೇಕ್ ಹಾಕಿದಾಗ ಹಿಂದಿನಿಂದ ಬಂದ ನೀರಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿದ್ದಾನೆ ಎಂದು ಎಚ್ಎಎಲ್ ಸಂಚಾರ ಪೊಲೀಸರು ತಿಳಿಸಿದ್ದಾರೆ. ಘಟನೆಯ ಸಂಬಂಧ ಟ್ಯಾಂಕರ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಯಮದೂತನಂತೆ ಹಿಂದೆಯೇ ಬರುತ್ತಿದ್ದ ಟ್ಯಾಂಕರ್: ಶಿಕಾರಿಪುರ ತಾಲೂಕು ಮಾಸೂರಿನ Vinayaka Namdev Patanakar ಆರು ತಿಂಗಳ ಹಿಂದೆ ಇಲ್ಲಿನ ಸಾಫ್ಟ್ ವೇರ್ ಕಂಪನಿಯಲ್ಲಿ ಉದ್ಯೋಗ ದೊರೆತಿದ್ದರಿಂದ ನಗರಕ್ಕೆ ಬಂದು ನೆಲೆಸಿದ್ದ. ಎಂದಿನಂತೆ ಶುಕ್ರವಾರ ಬೈಕಿನಲ್ಲಿ ಕೆಲಸಕ್ಕೆ ಅತಿವೇಗವಾಗಿ ತೆರಳುತ್ತಿದ್ದಾಗ ಮಾರತ್ ಹಳ್ಳಿ ಜಂಕ್ಷನ್ ಸಮೀಪ ರಸ್ತೆ ಉಬ್ಬು ಕಂಡು ಹಠಾತ್ ಬ್ರೇಕ್ ಹಾಕಿದ್ದಾನೆ.
ಆಗ ಯಮದೂತನಂತೆ ಹಿಂದೆಯೇ ಬರುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಬೈಕಿಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಿನಾಯಕನನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಸ್ಥಳೀಯರು ದಾಖಲಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಕಿಲ್ಲರ್ ಬಿಎಂಟಿಸಿಗೆ ವ್ಯಕ್ತಿ ಬಲಿ : ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನೊಬ್ಬ ಮೃತಪಟ್ಟಿರುವ ಘಟನೆ ಮಲ್ಲೇಶ್ವರ 18ನೇ ಕ್ರಾಸ್ ಸಮೀಪ ಶುಕ್ರವಾರ ನಡೆದಿದೆ.
ವಿಧಾನಸೌಧ ಸಚಿವಾಲಯದ 'ಡಿ' ದರ್ಜೆ ನೌಕರರಾದ ಟಿ. ದಾಸರಹಳ್ಳಿ ನಿವಾಸಿ ಬಿ. ಶ್ಯಾಮಸುಂದರ್ (50) ಮೃತರು.
ಮನೆಯಿಂದ ಶುಕ್ರವಾರ ಬೆಳಗ್ಗೆ ಬೆಳಗ್ಗೆ ತಮ್ಮ ಸ್ಕೂಟರಿನಲ್ಲಿ ಶ್ಯಾಮ್ ಅವರು ಕೆಲಸಕ್ಕೆ ತೆರುವಾಗ ಮಾರ್ಗ ಮಧ್ಯೆ, ಮಲ್ಲೇಶ್ವರ 18ನೇ ಕ್ರಾಸಿನಲ್ಲಿ ಯಶವಂತಪುರದಿಂದ ಮೆಜೆಸ್ಟಿಕ್ ಕಡೆಗೆ ಚಲಿಸುತ್ತಿದ್ದ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಸಂಬಂಧ ಬಸ್ ಚಾಲಕ ಕುಮಾರ್ನನ್ನು ಬಂಧಿಸಲಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಮಲ್ಲೇಶ್ವರ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications