ಮಗನ ಹುಟ್ಟುಹಬ್ಬ ದಿನವೇ ಟೆಕ್ಕಿ ಪತ್ನಿ ಆತ್ಮಹತ್ಯೆ

ಮಗನ ಹುಟ್ಟುಹಬ್ಬದ ದಿನವೇ...
ಮಗನ ಹುಟ್ಟುಹಬ್ಬ ಮುಗಿಸಿ ಅಂದೇ ರಾತ್ರಿ ಮಹಾತಾಯಿ ಸಾವಿಗೆ ಶರಣಾಗಿದ್ದಾಳೆ. ಮೃತಳನ್ನು ಆಷಿತಾ ಅಲಿಯಾಸ್ ರೌನಿಯಾರ್ ಎಂದು ಗುರುತಿಸಲಾಗಿದ್ದು, ಆಕೆಗಿನ್ನೂ 26 ವರ್ಷ ವಯಸ್ಸಾಗಿತ್ತು. ಈ ಸಂಬಂಧ ವಿವೇಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು, ಪುತ್ರನ ಜನ್ಮ ದಿನವನ್ನು ಅಷ್ಟೊಂದು ಗ್ರ್ಯಾಂಡ್ ಆಗಿ ಸೆಲಬ್ರೇಟ್ ಮಾಡುವುದು ಬೇಡ ಎಂದು ವಿರೋಧ ವ್ಯಕ್ತಪಡಿಸಿದ ಪತಿರಾಯನ ಹೆಸರು ನರೇನ್. 33 ವರ್ಷದ ನರೇನ್ ನೇಪಾಳ ಮೂಲದವರು.
ದಂಪತಿಯ ಮಗನ ಹುಟ್ಟುಹಬ್ಬ ಜನವರಿ 21ರಂದು ಅದ್ದೂರಿಯಾಗಿ ಸೆಲಬ್ರೇಟ್ ಮಾಡಬೇಕೆಂದು ಪತಿ ನರೇನ್ ಗೆ ಆಷಿತಾ ಹೇಳಿದ್ದರು. ಆದರೆ ಹಣಕಾಸಿನ ಸಮಸ್ಯೆಯಿಂದಾಗಿ ಇದಕ್ಕೆ ಪತಿ ಸಮ್ಮತಿ ಸೂಚಿಸಲಿಲ್ಲ. ಸರಳವಾಗಿಯೇ ಹುಟ್ಟುಹಬ್ಬ ಮಾಡಿದ್ದರು. ಇದೇ ವಿಷಯವಾಗಿ ದಂಪತಿ ಮಧ್ಯೆ ಜಗಳವಾಗಿತ್ತು. ಅದೇ ಸಿಟ್ಟು/ ಅಸಮಾಧಾನದಲ್ಲಿ ಆಷಿತಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕುಟುಂಬ ಸದಸ್ಯರು ಪೊಲೀಸರಿಗೆ ತಿಳಿಸಿದ್ದಾರೆ.
ಮಧುಮೇಹ ಜೀವನವನ್ನು ಬಲಿಪಡೆಯಿತು
ಆನಾರೋಗ್ಯ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಲ್ಲೇಶ್ವರ ಎಂಡಿ ಬ್ಲಾಕ್ ನಲ್ಲಿ ಬುಧವಾರ ರಾತ್ರಿ ನಡೆದಿದೆ. ಎಲೆಕ್ಟ್ರಾನಿಕ್ಸ್ ಮಳಿಗೆಯಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ಬಾಬು (45) ಆತ್ಮಹತ್ಯೆಗೆ ಶರಣಾದವರು.
ಅವಿವಾಹಿತ ಬಾಬು ತಾಯಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಬುಧವಾರ ರಾತ್ರಿ 1 ಗಂಟೆ ಸುಮಾರಿಗೆ ಕೊಠಡಿಯಲ್ಲಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಿಂದ ಬೆಂಕಿ ಬರುತ್ತಿರುವುದನ್ನು ಗಮನಿಸಿದ ನೆರೆಮನೆಯವರು ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದಾರೆ.
ಇತ್ತೀಚೆಗೆ ಮಧುಮೇಹದಿಂದ ಬಳಲುತ್ತಿದ್ದ ಬಾಬು ಜೀನವದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಾಯಿ ಪೊಲೀಸರಿಗೆ ತಿಳಿಸಿದ್ದಾರೆ. ಮಲ್ಲೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications