ಉತ್ತರಹಳ್ಳಿ: ಆಟೋ ಮಗು ಪತ್ತೆ- ಸಂಬಂಧಿಕರ ಕೈವಾಡ

ನಿಗೂಢವಾಗಿ ಕಣ್ಮರೆಯಾಗಿದ್ದ ಮಗುವನ್ನು ತಾಯಿ ಮಡಿಲು ಸೇರಿಸಲು ಸುಬ್ರಹ್ಮಣ್ಯಪುರ ಪೊಲೀಸರು ಯಶಸ್ವಿ 'ಕಾರ್ಯಾಚರಣೆ' ನಡೆಸಿದ್ದಾರೆ. ಈ ನಾಪತ್ತೆ ಪ್ರಕರಣದ ಹಿಂದಿನ 'ರಹಸ್ಯ' ಬಹಿರಂಗಪಡಿಸಲು ಪೊಲೀಸರು ನಿರಾಕರಿಸಿದ್ದಾರೆ. ಆದರೆ ಮೂಲಗಳ ಪ್ರಕಾರ ಈ ಕುಕೃತ್ಯದ ಹಿಂದೆ ಕಣ್ಮರೆಯಾಗಿದ್ದ ಮಗುವಿನ ಕುಟುಂಬದ ಸದಸ್ಯರ ಪಾತ್ರ ಇರಬಹುದು ಎಂದು ಶಂಕಿಸಲಾಗಿದೆ.
ಜಿಆರ್ ಸುಧೀಂದ್ರ ಹಾಗೂ ಜ್ಯೋತಿ ದಂಪತಿಯ ನಾಲ್ಕು ತಿಂಗಳ ಗಂಡು ಮಗು ಬುಧವಾರ ಬೆಳಗ್ಗೆ ಸುಮಾರು 11 ಗಂಟೆಯಲ್ಲಿ ನಾಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಗುವನ್ನು ಕತ್ರಿಗುಪ್ಪೆಯಲ್ಲಿ ಪತ್ತೆಹಚ್ಚಿದ್ದಾರೆ.
ಆದರೆ ಪೊಲೀಸರು ಮಗು ಪತ್ತೆಯ ಹಿಂದಿನ ರಹಸ್ಯವನ್ನು ಬಹಿರಂಗಪಡಿಸಲು ಇಚ್ಛಿಸಿಲ್ಲ. ಇನ್ನು ಪಾಲಕರೂ ಮೌನಕ್ಕೆ ಶರಣಾಗಿದ್ದಾರೆ. ಆದರೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕುಟುಂಬದವರೇ ಮಗುವನ್ನು ಬಚ್ಚಿಟ್ಟು ನಾಪತ್ತೆ ನಾಟಕವಾಡಿದ್ದಾರೆ ಎಂದು ತಿಳಿದುಬಂದಿದೆ.
ನಾಪತ್ತೆ ವೃತ್ತಾಂತ ವರದಿ:
ಚಿಕ್ಕಲಸಂದ್ರದ ಕೋಮಲಾ ಬ್ರಿಗೇಡ್ ಅಪಾರ್ಟ್ ಮೆಂಟ್ ಸಮೀಪ ಮಗುವನ್ನು ಆಟೋದಲ್ಲಿ ಮಲಗಿಸಿ ಎದುರಿಗಿದ್ದ ಔಷಧ ಅಂಗಡಿಗೆ ಮಗುವಿನ ತಾಯಿ ಹೋಗಿಬರುವಷ್ಟರಲ್ಲಿ ಮಗು ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದೆ.
ಉತ್ತರಹಳ್ಳಿ ನಿವಾಸಿ ಜಿಆರ್ ಸುಧೀಂದ್ರ ಹಾಗೂ ಜ್ಯೋತಿ ದಂಪತಿಯ 4 ತಿಂಗಳ ಗಂಡುಮಗು ನಾಪತ್ತೆಯಾಗಿರುವುದು. ಅನಾರೋಗ್ಯದ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಸುಮಾರು 11 ಗಂಟೆಯಲ್ಲಿ ಮಗನನ್ನು ಕ್ಲಿನಿಕ್ಕಿಗೆ ಚಿಕಿತ್ಸೆಗೆಂದು ಜ್ಯೋತಿ ಕರೆತಂದಿದ್ದರು. ವೈದ್ಯಕೀಯ ತಪಾಸಣೆ ಬಳಿಕ ಆಟೋದಲ್ಲಿ ಅವರು ಮನೆಗೆ ಹಿಂತಿರುಗುತ್ತಿದ್ದರು. ಆ ವೇಳೆ ಸ್ವಲ್ಪ ಅಚಾತುರ್ಯ ನಡೆದಿದೆ. ಮಾರ್ಗ ಮಧ್ಯೆ ಶನೇಶ್ವರ ದೇವಸ್ಥಾನದ ಹತ್ತಿರ ಆಟೋದಲ್ಲಿ ಮಗನನ್ನು ಮಲಗಿಸಿ ಜ್ಯೋತಿ ಔಷಧ ಖರೀದಿಗೆ ತೆರಳಿದ್ದಾರೆ.
ಮರಳಿ ಬಂದಾಗ ಆಟೋದಲ್ಲಿ ಮಲಗಿಸಿದ್ದ ಮಗು ನಾಪತ್ತೆಯಾಗಿತ್ತು ಎಂದು ಜ್ಯೋತಿ ದೂರಿನಲ್ಲಿ ತಿಳಿಸಿದ್ದಾರೆ. ಮಗು ನಾಪತ್ತೆಯಾಗಿರುವ ಕುರಿತು ಆಟೋ ಚಾಲಕನನ್ನು ಪ್ರಶ್ನಿಸಿದಾಗ, ತಾನು ಮೊಬೈಲಿನಲ್ಲಿ ಮಾತನಾಡುತ್ತಿದ್ದೆ. ಮಗು ಕಣ್ಮರೆ ಬಗ್ಗೆ ತನಗೇನು ಗೊತ್ತಿಲ್ಲ ಎಂದು ಉತ್ತರ ನೀಡಿದವನೇ ತಕ್ಷಣ ಅಲ್ಲಿಂದ ಹೊರಟು ಹೋಗಿದ್ದಾನೆ.
ಆತಂಕಗೊಂಡ ಜ್ಯೋತಿ ಮತ್ತು ಆಕೆಯ ತಾಯಿ ಸುತ್ತುಮತ್ತ ಮಗನಿಗೆ ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ. ಕೊನೆಗೆ ಮನೆಗೆ ಮರಳಿ ನಡೆದ ಘಟನೆ ಕುರಿತು ತಮ್ಮ ಪತಿಗೆ ಜ್ಯೋತಿ ತಿಳಿಸಿದ್ದಾರೆ. ಮಗುವನ್ನು ಕಳೆದುಕೊಂಡ ದಂಪತಿ, ಸುಬ್ರಹ್ಮಣ್ಯಪುರ ಠಾಣೆಗೆ ಹೋಗಿ ಪುತ್ರ ನಾಪತ್ತೆಯಾಗಿರುವ ಸಂಬಂಧ ದೂರು ನೀಡಿದ್ದಾರೆ.
ಉತ್ತರಹಳ್ಳಿ ಜಂಕ್ಷನ್ ಸುತ್ತಮುತ್ತ ಸಾರ್ವಜನಿಕ ಹಾಗೂ ಖಾಸಗಿ ಸ್ಥಳಗಳಲ್ಲಿ ಆಳವಡಿಸಿರುವ ಸಿಸಿಟಿವಿ ದೃಶ್ಯಾವಾಳಿಗಳನ್ನು ತಪಾಸಣೆ ಕಾರ್ಯ ಆರಂಭವಾಗಿದ್ದು, ಆಟೋ ಚಾಲಕನ್ನು ಪತ್ತೆ ಹಚ್ಚಿ, ವಿಚಾರಣೆ ನಡೆಸಿದರೆ ಮಾಹಿತಿ ಸಿಗಬಹುದು ಎಂದು ದಕ್ಷಿಣ ವಿಭಾಗದ ಡಿಸಿಪಿ ಎಚ್ಎಸ್ ರೇವಣ್ಣ ಆಶಿಸಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications