Bangladesh Lynching: ಬಾಂಗ್ಲಾದೇಶ ಹಿಂದೂ ವ್ಯಕ್ತಿ ಹತ್ಯೆ ಪ್ರಕರಣ: "ನಾವು ಎಚ್ಚರಿಕೆಯಿಂದ ವರ್ತಿಸಬೇಕು"
ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆ ಮತ್ತೆ ಶುರುವಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಬಾಂಗ್ಲಾದೇಶದಲ್ಲಿ ತುಸು ಶಾಂತವಾಗಿತ್ತು. ಇದೀಗ ಬಾಂಗ್ಲಾದೇಶದಲ್ಲಿ ಮತ್ತೆ ತೀವ್ರ ಸ್ವರೂಪದ ಪ್ರತಿಭಟನೆಗಳು ಶುರುವಾಗಿದೆ.
ಭಾರತೀಯ ಹಿಂದೂಗಳು ಎಚ್ಚರಗೊಳ್ಳದಿದ್ದರೆ, ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧದ ಕ್ರೌರ್ಯವನ್ನು ಕಡೆಗಣಿಸಿದರೆ, ಅಪಾಯ ನಾಳೆ ನಮ್ಮ ಮನೆ ಬಾಗಿಲಿಗೇ ಬರಲಿದೆ. ಬಾಂಗ್ಲಾದೇಶದಲ್ಲಿ "ದೀಪು ಚಂದ್ರ ದಾಸ್" ಎಂಬ ವ್ಯಕ್ತಿಯನ್ನು ಹಿಂದು ಎಂಬ ಒಂದೇ ಒಂದು ಕಾರಣಕ್ಕಾಗಿ ಇಸ್ಲಾಮಿಕ್ ಮೂಲಭೂತವಾದಿಗಳು ಕ್ರೂರವಾಗಿ ಹತ್ಯೆ ಮಾಡಿರುವುದು ಆತಂಕಕಾರಿ ಘಟನೆ. ಇದು ಅನ್ಯ ಅಸ್ತಿತ್ವವನ್ನು ನಾಶ ಮಾಡಬೇಕು ಎನ್ನುವ ರಿಲಿಜನ್ನಿನ ಮನಸ್ಥಿತಿಯ ಪರಿಣಾಮ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರು ಹೇಳಿದ್ದಾರೆ.

"ಕುರಾನ್ ಮತ್ತು ಮೊಹಮ್ಮದ್ ಪೈಗಂಬರ್" ಎಂಬ ಎರಡು ವಿಚಾರವನ್ನು ಮುಂದಿಟ್ಟುಕೊಂಡು ಯಾರನ್ನು ಬೇಕಾದರೂ, ಏನು ಬೇಕಾದರೂ ಮಾಡುತ್ತೇವೆ ಎನ್ನುವುದು, ಕುಕೃತ್ಯಗಳನ್ನು ಸಮರ್ಥಿಸುವುದು ಮಾನವತೆಗೆ ಅಂಟಿದ ಕಳಂಕ. ತಮಗಾಗದವರ ಬಗ್ಗೆ ಒಂದು ಸುಳ್ಳು ಕಥೆಯನ್ನು ಕಟ್ಟಿಕೊಂಡು, ಅವರನ್ನು ಕ್ರೂರವಾಗಿ ಕೊಲ್ಲುವಂತೆ ತಮ್ಮ ಗುಂಪಿನವರನ್ನು ಪ್ರಚೋದಿಸುವ ತಂತ್ರ ಇದು. ಇಂತಹ ಸಂದರ್ಭಗಳಲ್ಲಿ ಯಾವುದೇ ನ್ಯಾಯಾಂಗ ಪ್ರಕ್ರಿಯೆ, ಮಾನವ ಹಕ್ಕುಗಳು ಅಥವಾ ಕಾನೂನು ಎಂಬ ಅಂಶಗಳಿಗೆ ಅಸ್ತಿತ್ವವೇ ಇಲ್ಲ.
ಈ ಕ್ರೌರ್ಯ ಹೊಸದಲ್ಲ. ಇತಿಹಾಸದ ಪುಟಗಳನ್ನ ತಿರುಗಿಸಿ ನೋಡಿದರೆ, ಏಳನೇ ಶತಮಾನದಿಂದಲೇ ಈ ರೀತಿಯ ಮತಾಂಧ ಹಿಂಸೆ ವಿವಿಧ ರೂಪಗಳಲ್ಲಿ ಕಾಣಿಸಿಕೊಂಡಿದೆ. ದೇಶಗಳು ಬದಲಾಗಿವೆ, ಕಾಲಮಾನ ಬದಲಾಗಿದೆ; ಆದರೆ ಇತರರ ವಿರುದ್ಧದ ದ್ವೇಷ ಮತ್ತು ಅದನ್ನು ರಿಲಿಜನ್ನಿನ ಹೆಸರಿನಲ್ಲಿ ಸಮರ್ಥಿಸುವ ಮನೋಭಾವ ಮಾತ್ರ ಮುಂದುವರಿದಿದೆ.
ಇದರ ಪರಿಣಾಮಗಳನ್ನು ನಾವು ಈಗಾಗಲೇ ಅಫ್ಘಾನಿಸ್ತಾನ, ಪಾಕಿಸ್ತಾನ, ಇದೀಗ ಬಾಂಗ್ಲಾದೇಶ ಸೇರಿದಂತೆ ಹಲವು ದೇಶಗಳಲ್ಲಿ ನೋಡಿದ್ದೇವೆ. ಇದನ್ನು ತಕ್ಷಣವೇ ಗಂಭೀರವಾಗಿ ಪರಿಗಣಿಸದಿದ್ದರೆ, ಗಡಿ ದಾಟಿ ಬಂದೀತು ಎಂದು ಎಚ್ಚರಿಸಿದ್ದಾರೆ.
ಮತಾಂಧತೆ ಯಾವತ್ತೂ ಒಂದು ಭೂಭಾಗಕ್ಕೆ ಅಥವಾ ದೇಶಕ್ಕೆ ಸೀಮಿತವಾಗಿರುವುದಿಲ್ಲ. ಅದು ಅವಕಾಶ ಸಿಕ್ಕಲ್ಲಿ ಎಲ್ಲೆಡೆ ತನ್ನ ಕಬಂಧ ಬಾಹುಗಳನ್ನು ವಿಸ್ತರಿಸುತ್ತಾ ಹೋಗುತ್ತದೆ. ಆದ್ದರಿಂದ, ಈ ವಿಚಾರವನ್ನು ಭಾರತ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಇದು ಕೇವಲ ವಿದೇಶಾಂಗ ನೀತಿಯ ವಿಷಯ ಮಾತ್ರವಲ್ಲ, ಇದು ರಾಷ್ಟೀಯ ಭದ್ರತೆ, ಸಾಮಾಜಿಕ ಸಾಮರಸ್ಯ ಮತ್ತು ಭವಿಷ್ಯದ ತಲೆಮಾರಿನ ಸುರಕ್ಷತೆಗೆ ಸಂಬಂಧಿಸಿದ ಪ್ರಶ್ನೆ.
ಅದೇ ರೀತಿ, ಇದು ಕೇವಲ ಸರ್ಕಾರದ ಜವಾಬ್ದಾರಿ ಮಾತ್ರವಲ್ಲ, ಜೊತೆಗೆ ಹಿಂದೂ ಸಮಾಜವೂ ಎಚ್ಚೆತ್ತುಕೊಳ್ಳಬೇಕು. ಅಂದರೆ ಭಯ, ಆತಂಕ, ದ್ವೇಷ ಅಥವಾ ಪ್ರತೀಕಾರದ ಮನಸ್ಥಿತಿಯಿಂದಲ್ಲ; ಆದರೆ ವಾಸ್ತವವನ್ನು ಅರ್ಥಮಾಡಿಕೊಂಡು, ಸಂಘಟಿತವಾಗಿ, ಹಿಂದೂ ಜಾಗೃತಿಯಿಂದ ಪ್ರತಿಕ್ರಿಯಿಸಬೇಕಾದ ಅಗತ್ಯವಿದೆ.
ಹಿಂದೂ ಸಮಾಜ ಇನ್ನೂ ಜಾತಿ ಮತ ಎಂದು ಬಡಿದಾಡದೆ, ನಾವೆಲ್ಲ ಒಂದಾಗಿ ನಿಂತುಕೊಳ್ಳಬೇಕಾದ ಅವಶ್ಯಕತೆ ಇದೆ. ಇದು ರಾಜಕೀಯ ಲಾಭ-ನಷ್ಟಗಳ ವಿಷಯವಲ್ಲ. ಇದು ಮಾನವೀಯ ಮೌಲ್ಯಗಳು ಉಳಿಯಬೇಕೆ ಅಥವಾ ಮತಾಂಧ ಕ್ರೌರ್ಯಕ್ಕೆ ಸಮಾಜ ಶರಣಾಗಬೇಕೆ ಎಂಬ ಮೂಲಭೂತ ಪ್ರಶ್ನೆ. ಈಗಲಾದರೂ ಎಚ್ಚೆತ್ತುಕೊಳ್ಳದಿದ್ದರೆ, ಮತಾಂಧರ ಸ್ಟ್ರೀಟ್ ಪವರ್'ಗೆ ಸಂವಿಧಾನ, ಕಾನೂನು ಸೋಲುವ ಕಾಲ ದೂರವಿಲ್ ಎಂದೂ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications