ಆನ್ ಲೈನ್ ಬ್ಯಾಂಕಿಂಗ್ ಮಾಡುವವರು ಬಚಾವ್!
ಬೆಂಗಳೂರು, ಫೆ.11 : ವೇತನ ಪರಿಷ್ಕರಣೆಗೆ ಒತ್ತಾಯಿಸಿ ರಾಷ್ಟ್ರೀಕೃತ ಬ್ಯಾಂಕ್ಗಳು ನಡೆಸುತ್ತಿರುವ ದೇಶವ್ಯಾಪಿ ಮುಷ್ಕರದ ಬಿಸಿ ಕರ್ನಾಟಕದಲ್ಲೂ ಗ್ರಾಹಕರಿಗೆ ತಟ್ಟಿದ್ದು, ಸೋಮವಾರ ಎಲ್ಲ ಬ್ಯಾಂಕ್ ಶಾಖೆಗಳಲ್ಲಿಯೂ ವ್ಯವಹಾರಗಳು ಸ್ಥಗಿತಗೊಂಡಿದ್ದರಿಂದ ಸಾರ್ವಜನಿಕರು ಪರದಾಡುವಂತಾಯಿತು.
ಮಂಗಳವಾರವೂ ಬ್ಯಾಂಕ್ ಮುಷ್ಕರ ಮುಂದುವರೆಯಲಿದ್ದು, ಜನರಿಗೆ ಮತ್ತಷ್ಟು ತೊಂದರೆ ಆಗಲಿದೆ. ಸತತವಾಗಿ ಮೂರು ದಿನ ಬ್ಯಾಂಕ್ಗಳು ಕಾರ್ಯ ನಿರ್ವಹಿಸದಿರುವುದರಿಂದ ಹಲವಾರು ಎಟಿಎಂಗಳಲ್ಲಿ ಹಣವಿಲ್ಲದೇ, ಜನರು ಎಟಿಎಂ ಹುಡುಕಿಕೊಂಡು ಅಲೆದಾಡುವಂತಾಯಿತು. [ಫೆ.10,11ರಂದು ಬ್ಯಾಂಕ್ ಮುಷ್ಕರ]

ವಾರದ ಆರಂಭದಲ್ಲಿಯೇ ಬ್ಯಾಂಕ್ಗಳು ಎಲ್ಲ ರೀತಿಯ ಹಣಕಾಸು ವ್ಯವಹಾರಗಳನ್ನು ಸ್ಥಗಿತಗೊಳಿಸಿ ಮಷ್ಕರ ನಡೆಸುತ್ತಿರುವುದರಿಂದ ಗ್ರಾಹಕರಿಗೆ ತೊಂದರೆಗೆ ಸಿಲುಕಿದ್ದಾರೆ. ಮುಷ್ಕರದ ಬಗ್ಗೆ ಮಾಹಿತಿ ಇಲ್ಲದೆ ಗ್ರಾಹಕರು ಬ್ಯಾಂಕ್ಗಳಿಗೆ ಬಂದು ವಾಪಸ್ ಹೋಗಿರುವ ಪ್ರಕರಣಗಳ ಬಗ್ಗೆಯೂ ವರದಿಯಾಗಿದೆ.
ಕರ್ನಾಟಕ ಬ್ಯಾಂಕ್, ಐಎನ್ ಜಿ ವೈಶ್ಯ ಬ್ಯಾಂಕ್ ಸೇರಿದಂತೆ ಖಾಸಗಿ ಸ್ವಾಮ್ಯದ ಬ್ಯಾಂಕ್ ಗಳು ಸಹ ವ್ಯವಹಾರ ಸ್ಥಗಿತಗೊಳಿಸಿ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ಆದರೆ, ನಗರ ಪ್ರದೇಶಗಳಲ್ಲಿ ಆನ್ಲೈನ್ ಮೂಲಕ ವ್ಯವಹಾರ ನಡೆಸುವ ಗ್ರಾಹಕರಿಗೆ ಮುಷ್ಕರದಿಂದ ಹೆಚ್ಚಿನ ತೊಂದರೆ ಆಗಿಲ್ಲ ಎಂದು ಬ್ಯಾಂಕ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹಣದ ಕೊರತೆ ಇಲ್ಲ : ಹಲವಾರು ರಾಷ್ಟ್ರೀಕೃತ ಹಾಗೂ ಕೆಲವು ಖಾಸಗಿ ಬ್ಯಾಂಕ್ಗಳು ಎಟಿಎಂಗಳಿಗೆ ಹಣ ತುಂಬಿಸುವ ಪ್ರಕ್ರಿಯೆಯನ್ನ ಹೊರ ಗುತ್ತಿಗೆ ನೀಡಿವೆ. ಆದ್ದರಿಂದ ಎಟಿಎಂಗಳಿಗೆ ಹಣ ತುಂಬಿಸಲಾಗುತ್ತದೆ. ಆದರೆ, ಬ್ಯಾಂಕ್ ಸಿಬ್ಬಂದಿಯೇ ಎಟಿಎಂಗೆ ಹಣ ತುಂಬಿಸುವ ಕಡೆ ತೊಂದರೆ ಯಾಗಿದೆ.
ಎರಡು ದಿನದ ಮುಷ್ಕರದ ಹಿನ್ನಲೆಯಲ್ಲಿ ಬ್ಯಾಂಕ್ಗಳ ಸಂಯುಕ್ತ ಒಕ್ಕೂಟದ ನೇತೃತ್ವದಲ್ಲಿ ಸಿಬ್ಬಂದಿ ಸೋಮವಾರ ಬೆಂಗಳೂರಿನ ಮೈಸೂರು ಬ್ಯಾಂಕ್ ಪ್ರಧಾನ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಮಂಗಳವಾರ ಕೆನರಾ ಬ್ಯಾಂಕ್ನ ಪ್ರಧಾನ ಕಚೇರಿ ಎದುರು ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications