ಆನ್ ಲೈನ್ ಬ್ಯಾಂಕಿಂಗ್ ಮಾಡುವವರು ಬಚಾವ್!
ಬೆಂಗಳೂರು, ಫೆ.11 : ವೇತನ ಪರಿಷ್ಕರಣೆಗೆ ಒತ್ತಾಯಿಸಿ ರಾಷ್ಟ್ರೀಕೃತ ಬ್ಯಾಂಕ್ಗಳು ನಡೆಸುತ್ತಿರುವ ದೇಶವ್ಯಾಪಿ ಮುಷ್ಕರದ ಬಿಸಿ ಕರ್ನಾಟಕದಲ್ಲೂ ಗ್ರಾಹಕರಿಗೆ ತಟ್ಟಿದ್ದು, ಸೋಮವಾರ ಎಲ್ಲ ಬ್ಯಾಂಕ್ ಶಾಖೆಗಳಲ್ಲಿಯೂ ವ್ಯವಹಾರಗಳು ಸ್ಥಗಿತಗೊಂಡಿದ್ದರಿಂದ ಸಾರ್ವಜನಿಕರು ಪರದಾಡುವಂತಾಯಿತು.
ಮಂಗಳವಾರವೂ ಬ್ಯಾಂಕ್ ಮುಷ್ಕರ ಮುಂದುವರೆಯಲಿದ್ದು, ಜನರಿಗೆ ಮತ್ತಷ್ಟು ತೊಂದರೆ ಆಗಲಿದೆ. ಸತತವಾಗಿ ಮೂರು ದಿನ ಬ್ಯಾಂಕ್ಗಳು ಕಾರ್ಯ ನಿರ್ವಹಿಸದಿರುವುದರಿಂದ ಹಲವಾರು ಎಟಿಎಂಗಳಲ್ಲಿ ಹಣವಿಲ್ಲದೇ, ಜನರು ಎಟಿಎಂ ಹುಡುಕಿಕೊಂಡು ಅಲೆದಾಡುವಂತಾಯಿತು. [ಫೆ.10,11ರಂದು ಬ್ಯಾಂಕ್ ಮುಷ್ಕರ]

ವಾರದ ಆರಂಭದಲ್ಲಿಯೇ ಬ್ಯಾಂಕ್ಗಳು ಎಲ್ಲ ರೀತಿಯ ಹಣಕಾಸು ವ್ಯವಹಾರಗಳನ್ನು ಸ್ಥಗಿತಗೊಳಿಸಿ ಮಷ್ಕರ ನಡೆಸುತ್ತಿರುವುದರಿಂದ ಗ್ರಾಹಕರಿಗೆ ತೊಂದರೆಗೆ ಸಿಲುಕಿದ್ದಾರೆ. ಮುಷ್ಕರದ ಬಗ್ಗೆ ಮಾಹಿತಿ ಇಲ್ಲದೆ ಗ್ರಾಹಕರು ಬ್ಯಾಂಕ್ಗಳಿಗೆ ಬಂದು ವಾಪಸ್ ಹೋಗಿರುವ ಪ್ರಕರಣಗಳ ಬಗ್ಗೆಯೂ ವರದಿಯಾಗಿದೆ.
ಕರ್ನಾಟಕ ಬ್ಯಾಂಕ್, ಐಎನ್ ಜಿ ವೈಶ್ಯ ಬ್ಯಾಂಕ್ ಸೇರಿದಂತೆ ಖಾಸಗಿ ಸ್ವಾಮ್ಯದ ಬ್ಯಾಂಕ್ ಗಳು ಸಹ ವ್ಯವಹಾರ ಸ್ಥಗಿತಗೊಳಿಸಿ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ಆದರೆ, ನಗರ ಪ್ರದೇಶಗಳಲ್ಲಿ ಆನ್ಲೈನ್ ಮೂಲಕ ವ್ಯವಹಾರ ನಡೆಸುವ ಗ್ರಾಹಕರಿಗೆ ಮುಷ್ಕರದಿಂದ ಹೆಚ್ಚಿನ ತೊಂದರೆ ಆಗಿಲ್ಲ ಎಂದು ಬ್ಯಾಂಕ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹಣದ ಕೊರತೆ ಇಲ್ಲ : ಹಲವಾರು ರಾಷ್ಟ್ರೀಕೃತ ಹಾಗೂ ಕೆಲವು ಖಾಸಗಿ ಬ್ಯಾಂಕ್ಗಳು ಎಟಿಎಂಗಳಿಗೆ ಹಣ ತುಂಬಿಸುವ ಪ್ರಕ್ರಿಯೆಯನ್ನ ಹೊರ ಗುತ್ತಿಗೆ ನೀಡಿವೆ. ಆದ್ದರಿಂದ ಎಟಿಎಂಗಳಿಗೆ ಹಣ ತುಂಬಿಸಲಾಗುತ್ತದೆ. ಆದರೆ, ಬ್ಯಾಂಕ್ ಸಿಬ್ಬಂದಿಯೇ ಎಟಿಎಂಗೆ ಹಣ ತುಂಬಿಸುವ ಕಡೆ ತೊಂದರೆ ಯಾಗಿದೆ.
ಎರಡು ದಿನದ ಮುಷ್ಕರದ ಹಿನ್ನಲೆಯಲ್ಲಿ ಬ್ಯಾಂಕ್ಗಳ ಸಂಯುಕ್ತ ಒಕ್ಕೂಟದ ನೇತೃತ್ವದಲ್ಲಿ ಸಿಬ್ಬಂದಿ ಸೋಮವಾರ ಬೆಂಗಳೂರಿನ ಮೈಸೂರು ಬ್ಯಾಂಕ್ ಪ್ರಧಾನ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಮಂಗಳವಾರ ಕೆನರಾ ಬ್ಯಾಂಕ್ನ ಪ್ರಧಾನ ಕಚೇರಿ ಎದುರು ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications