ಮತ್ತೆ ಕಮಲ ಹಿಡಿಯಲು ತಯಾರಾದ ಬಸನಗೌಡ ಪಾಟೀಲ್ ಯತ್ನಾಳ್
ಈ ಹಿಂದೆ ಬಿಜೆಪಿಯಿಂದ ಉಚ್ಛಾಟಿತರಾಗಿದ್ದ ವಿಧಾನಪರಿಷತ್ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತೆ ಬಿಜೆಪಿ ಸೇರುತ್ತಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಬಸನಗೌಡ ಪಾಟೀಲ್ ಹಾಗೂ ಜೆಡಿಎಸ್ನಿಂದ ಹೊರಬಂದು ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿರುವ ಮಲ್ಲಿಕಾರ್ಜುನ ಖೂಬಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ.
ಬಸವನಗೌಡ ವಿರುದ್ಧ ಬಸನಗೌಡ, ಇದು ಅಮಿತ್ ಶಾ ತಂತ್ರ
ಯಡಿಯೂರಪ್ಪ ಅವರ ಬೆಂಬಲಿಗರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರು 2005ರಲ್ಲಿ ವಿಧಾನಪರಿಷತ್ ಚುನಾವಣೆಯಿಂದ ಹಿಂದೆ ಸರಿಯಲಿಲ್ಲ ಎಂಬ ಕಾರಣಕ್ಕೆ ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಆದರೆ ಈಗ ಯಡಿಯೂರಪ್ಪ ಅವರ ಸಂಧಾನದ ಮೇರೆಗೆ ಮತ್ತೆ ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳಲಾಗುತ್ತಿದೆ.
ಈಗಾಗಲೇ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಇದೇ ವಾರದಲ್ಲಿ ಮತ್ತೆ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ.
ಕಾಂಗ್ರೆಸ್ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಬಸನಗೌಡ ಪಾಟೀಲ್ ಅವರನ್ನು ಕಣಕ್ಕಳಿಸಲು ಬಿಜೆಪಿ ಚಿಂತಿಸಿದ್ದು, ಬಸನಗೌಡ ಅವರು ಕೂಡಾ ಈ ನಿರ್ಣಯದ ಸಂಬಂಧ ಉತ್ಸುಕರಾಗಿದ್ದಾರೆ ಎನ್ನಲಾಗಿದೆ.