Ganesh Chaturthi: ಗಣೇಶ ಹಬ್ಬಕ್ಕೆ ₹5000 ದೇಣಿಗೆ ಘೋಷಿಸಿದ ಯತ್ನಾಳ್
ಗಣೇಶ ಚತುರ್ಥಿಗೆ ದಿನಗಣನೆ ಆರಂಭವಾಗಿದ್ದು, ಇನ್ನೇನು ಮುಂದಿನ ಸೋಮವಾರ ಹಬ್ಬ ಜೋರಾಗಿ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆಗಳನ್ನೂ ಭಕ್ತರು ಮಾಡಿಕೊಳ್ಳುತ್ತಿದ್ದಾರೆ. ದೇಶದ ಮೂಲೆ ಮೂಲೆಯಲ್ಲೂ ಗಣೇಶ ಚತುರ್ಥಿ ಅತ್ಯಂತ ಸಡಗರದಿಂದ ನಡೆಯಲಿದ್ದು, ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ತನಕ ಸಂಘಟನೆ ಮೂಲಕ ಹಬ್ಬ ಆಚರಿಸುತ್ತಾರೆ. ಇದೇ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಂಪರ್ ಆಫರ್ ಘೋಷಿಸಿದ್ದಾರೆ.
ಹೌದು, ವಿಜಯಪುರ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಗಣೇಶ ಚತುರ್ಥಿ ಆಚರಿಸುವ ಭಕ್ತ ಮಂಡಳಿಗಳಿಗೆ ಭರವಸೆ ಒಂದನ್ನು ನೀಡಿದ್ದಾರೆ. ಇನ್ನು ಈ ಕುರಿತು ಟ್ವೀಟ್ ಮಾಡಿರುವ ಅವರು, ಸಂಪೂರ್ಣ ಮಾಹಿತಿ ನೀಡಿದ್ದಾರೆ. ಪದೇ ಪದೆ ತಮ್ಮ ಭಾಷಣದ ಮೂಲಕ ಸುದ್ದಿಯಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ತಮ್ಮ ಘೋಷಣೆ ಮೂಲಕ ಸದ್ದು ಮಾಡುತ್ತಿದ್ದಾರೆ. ಹಾಗಾದರೆ ಬಸನಗೌಡ ಪಾಟೀಲ್ ಯತ್ನಾಳ್ ಕೊಟ್ಟಿರುವ ಮಾತು ಏನು? ಬಸನಗೌಡ ಯತ್ನಾಳ್ ಮಾಡಿರುವ ಟ್ವೀಟ್ನ ಪೂರ್ಣ ವಿವರ ಇಲ್ಲಿದೆ.

ಶಾಸಕ ಯತ್ನಾಳ್ ಟ್ವೀಟ್ ಇಲ್ಲಿದೆ!
1. ವಿಜಯಪುರದ ಪ್ರತಿ #ಗಜಾನನ_ಮಂಡಳಿಗಳಿಗೆ ಸ್ವಾತಂತ್ರ #ವೀರ_ಸಾವರ್ಕರ್ ರವರ ಭಾವಚಿತ್ರ ಹಾಗೂ ತಲಾ ₹ 5,000 ದೇಣಿಗೆ ನಮ್ಮ ವತಿಯಿಂದ ನೀಡಲಾಗುವುದು .
2. ಗಜಾನನ ಮಂಡಳಿಗಳ ಪದಾಧಿಕಾರಿಗಳು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಗಣೇಶನ ದೇಣಿಗೆಗಾಗಿ ಶಾಸಕರ ಕಚೇರಿಗೆ ಅಲೆದಾಡುವ ಅವಶ್ಯಕತೆ ಇಲ್ಲ, ನಿಮ್ಮ ನಿಮ್ಮ ಪೆಂಡಾಲ್ ಗಳಲ್ಲಿಯೇ ಬಂದು ನಮ್ಮ #ಸ್ವಾಮಿ_ವಿವೇಕಾನಂದ_ಸೇನೆಯ ಪದಾಧಿಕಾರಿಗಳು ಪ್ರತಿ ಗಣೇಶ ಮಂಡಳಿಗೆ ತಲಾ ₹5,000 ದೇಣಿಗೆ ನೀಡಲಿದ್ದಾರೆ.
3. ಯಾವ ಅನುಮತಿಗಳಿಗೂ ಕಚೇರಿಯಿಂದ, ಕಚೇರಿಗೆ ಅಲೆದಾಡುವ ಅವಶ್ಯಕತೆಯಿಲ್ಲ, ಅಧಿಕಾರಿಗಳೇ ನಿಮ್ಮ ಬಳಿ ಬಂದು ಅನುಮತಿ ನೀಡುತ್ತಾರೆ. ಯಾವುದೇ ಅಧಿಕಾರಿ ಅನುಮತಿಗೆ ಕಿರುಕುಳ ನೀಡಿದರೆ ನನ್ನ ಕಚೇರಿಯ ಗಮನಕ್ಕೆ ತರಬೇಕು.
1. ವಿಜಯಪುರದ ಪ್ರತಿ #ಗಜಾನನ_ಮಂಡಳಿಗಳಿಗೆ ಸ್ವಾತಂತ್ರ #ವೀರ_ಸಾವರ್ಕರ್ ರವರ ಭಾವಚಿತ್ರ ಹಾಗೂ ತಲಾ ₹ 5,000 ದೇಣಿಗೆ ನಮ್ಮ ವತಿಯಿಂದ ನೀಡಲಾಗುವುದು .
— Basanagouda R Patil (Yatnal) (@BasanagoudaBJP) September 11, 2023
2. ಗಜಾನನ ಮಂಡಳಿಗಳ ಪದಾಧಿಕಾರಿಗಳು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಗಣೇಶನ ದೇಣಿಗೆಗಾಗಿ ಶಾಸಕರ ಕಚೇರಿಗೆ ಅಲೆದಾಡುವ ಅವಶ್ಯಕತೆ ಇಲ್ಲ, ನಿಮ್ಮ ನಿಮ್ಮ ಪೆಂಡಾಲ್ ಗಳಲ್ಲಿಯೇ ಬಂದು ನಮ್ಮ… pic.twitter.com/uHarYh28JT
4. ಈ ಬಾರಿ ಸ್ವಾಮಿ ವಿವೇಕಾನಂದ ಸೇನೆಯಿಂದ ಆಚರಿಸಲ್ಪಡುವ ಗಜಾನನ ಮಹಾಮಂಡಳದ ವೇದಿಕೆಗೆ "ಸನಾತನ ಹಿಂದೂ ವೇದಿಕೆ" ಎಂದು ನಾಮಕರಣ ಮಾಡಲಾಗುವುದು.
5. ವಿಜಯಪುರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ವಿಜೃಂಭಣೆಯಿಂದ ಗಣೇಶೋತ್ಸವ ನಡೆಯಲಿದೆ, ಯಾವ ನಿರ್ಬಂಧಗಳೂ ಇರುವುದಿಲ್ಲ.
ಹೀಗೆ ಟ್ವೀಟ್ ಮಾಡಿದ್ದಾರೆ ವಿಜಯಪುರ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್. ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಹೇಳಿಕೆ ಹಾಗೂ ಟ್ವೀಟ್ ಮೂಲಕವೇ ಸದಾ ಸದ್ದು ಮಾಡುವ, ಜೊತೆಗೆ ವಿವಾದದಕ್ಕೆ ಗುರಿಯಾಗುವ ಯತ್ನಾಳ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಯತ್ನಾಳ್ ಟ್ವೀಟ್ ಬಗ್ಗೆ ಈಗ ಪರ-ವಿರೋಧದ ಚರ್ಚೆ ಶುರುವಾಗಿದೆ. ಮತ್ತೊಂದು ಕಡೆ ಹಬ್ಬದ ಸಿದ್ಧತೆಯಲ್ಲಿರುವ ವಿಜಯಪುರ ವಿಧಾನಸಭಾ ಕ್ಷೇತ್ರದ ಗಜಾನನ ಭಕ್ತ ಮಂಡಳಿಗೆ ಶಾಸಕರಿಂದ ಭರವಸೆ ಸಿಕ್ಕಿದೆ.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications