RSS: ಅಮಾನತುಗೊಂಡ ಅಧಿಕಾರಿಗೆ ಕಾನೂನು ಸಲಹೆ, ಬೆಂಬಲ: ಯತ್ನಾಳ್ ಘೋಷಣೆ
ಬೆಂಗಳೂರು, ಅಕ್ಟೋಬರ್ 18: ಪ್ರತ್ಯಕ್ಷವಾಗಿಯು, ಪರೋಕ್ಷವಾಗಿಯು ರಾಜ್ಯ ಸರ್ಕಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS)ದ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ. ಆರ್ಎಸ್ಎಸ್ ಚಟುವಟಿಕೆಯನ್ನು ಸರ್ಕಾರಿ ಜಾಗದಲ್ಲಿ ನಿಷೇಧಿಸಿದ ಬೆನ್ನಲ್ಲೆ, ಸಂಘದ ಪಥಸಂಚಲನದಲ್ಲಿ ಗಣವೇಷಧಾರಿಯಾಗಿದ್ದ ಅಧಿಕಾರಿ ಅಮಾನತು ಮಾಡಲಾಗಿದೆ. ಇದರ ವಿರುದ್ಧ ಆಕ್ರೋಶ ಹೊರ ಹಾಕಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅಧಿಕಾರಿಗಳಿಗೆ ಬೆಂಬಲ ಘೋಷಿಸಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರವು RSS ಶಾಖೆಗಳಲ್ಲಿ ಅಥವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರನ್ನು ಅಮಾನತು ಮಾಡುತ್ತಿರುವುದನ್ನು ಖಂಡಿಸಿ ಶಾಸಕ ಯತ್ನಾಳ್ ಅವರು ಎಕ್ಸ್ ಪೊಸ್ಟ್ ಮಾಡಿದ್ದಾರೆ.

ಸಂಘ ಹಾಗು ಹಿಂದೂ ಸಮಾಜವನ್ನು ಎದುರಿಸಲಾಗದೆ ಕಾರ್ಯಕರ್ತರನ್ನು ಗುರಿಯಾಗಿಸುತ್ತಿರುವ ಈ ಸರ್ಕಾರದ ಅಯೋಗ್ಯತನವನ್ನು ನಾನು ಖಂಡಿಸುತ್ತೇನೆ ಹಾಗು ಸರ್ಕಾರದಿಂದ ಗುರಿಯಾಗಿಸುತ್ತಿರುವ ಅಧಿಕಾರಿಗಳಿಗೆ ಸಂಪೂರ್ಣ ಕಾನೂನು ಸಹಾಯ ಹಾಗು ಬೆಂಬಲವನ್ನು ಘೋಷಿಸುತ್ತೇನೆ ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥಸಂಚಲನದಲ್ಲಿ ಭಾಗವಹಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಪ್ರವೀಣ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿದೆ. ಸಂಘ ದೇಶದ ಅಭ್ಯುದಯಕ್ಕೆ ಕೆಲಸ ಮಾಡುತ್ತಿದೆಯೇ ಹೊರತು ದೇಶ ವಿರೋಧಿ ಸಂಘಟನೆಯಲ್ಲ. 100 ವರ್ಷಗಳ ಇತಿಹಾಸದಲ್ಲಿ ಯಾವುದೇ ಕ್ರಿಮಿನಲ್ ಹಿನ್ನೆಲೆಯಿಲ್ಲದ ಸಂಸ್ಕೃತಿ, ಸದಾಚಾರ, ದೇಶಾಭಿಮಾನ, ಶಿಸ್ತನ್ನು ಕಲಿಸುವ ರಾಷ್ಟ್ರೀಯ ಸ್ವಯಂ ಸೇವಕದ ವಿರುದ್ಧ ಇರುವ selective amnesia ಏಕೆಂದು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದೆ ತರ್ಕಾನುಸಾರ ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡು ಪಿ.ಆಫ್.ಐ, ಎಸ.ಡಿ.ಪಿ.ಐ ಮುಖಂಡರನ್ನು ಬೆಂಬಲಿಸಿದ ಮುಖಂಡರನ್ನು ಸರ್ಕಾರ ಅಮಾನತು ಮಾಡಿ ಕಾನೂನಿನ ಮುಂದೆ ಎಲ್ಲರೂ ಒಂದೇ ಸಾಬೀತುಪಡಿಸಲಿ. ಆಗದಿದ್ದರೆ, ಕೂಡಲೇ ಅಮಾನತನ್ನು ಹಿಂಪಡೆಯಬೇಕೆಂದರು.
ಲಿಂಗಸೂರಿನಲ್ಲಿ ಜರುಗಿದ ಆರ್ಎಸ್ಎಸ್ ಪಥಸಂಚನದಲ್ಲಿ ಗಣವೇಷಧಾರಿಯಾಗಿದ್ದ ಸಿರವಾರ ಗ್ರಾಮ ಪಂಚಾಯಿತಿ ಅಧಿಕಾರಿ ಪ್ರವೀಣ್ ಕುಮಾರ್ ವಿರುದ್ಧ ಕ್ರಮ ಜರುಗಿಸಲಾಗಿದೆ. ಸಂಘದ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸರ್ಕಾರಿ ಸೇವಾ ನಿಯಮ ಉಲ್ಲಂಘಿಸಲಾಗಿದೆ ಎಂದು ಹೇಳಿ ಸರ್ಕಾರ ಆ ಅಧಿಕಾರಿಯನ್ನು ಅಮಾನತು ಮಾಡಿದೆ. ಇದರ ವಿರುದ್ಧ ಬಿಜೆಪಿ ವಲಯದಲ್ಲಿ ವ್ಯಾಪಕ ಆಕ್ರೋಶ ಕೇಳಿ ಬಂದಿದೆ.
RSS ಚಟುವಟಿಕೆಗೆ ಬ್ರೇಕ್
ಇತ್ತೀಚೆಗೆ ನಡೆದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಸಂಘದ ಹೆಸರು ಹೇಳದೇ ಖಾಸಗಿ ಸಂಘ, ಸಂಸ್ಥೆಗಳ ಕಾರ್ಯಕ್ರಮಗಳನ್ನು ಸರ್ಕಾರಿ ಶಾಲೆ, ಕಾಲೇಜು ಮತ್ತು ಜಾಗಗಳಲ್ಲಿ ಕಾರ್ಯಕ್ರಮ ನಡೆದಂತೆ ನಿಷೇಧಿಸಿದೆ. ಒಂದು ವೇಳೆ ಕಾರ್ಯಕ್ರಮ ನಡೆಸಬೇಕಾದರೆ ಯಾವುದೇ ಖಾಸಗಿ ಸಂಸ್ಥೆಗಳು ಸರ್ಕಾರದ ಪೂರ್ವಾನುಮತಿ ಪಡೆಯುವಂತೆ ಸರ್ಕಾರ ನಿರ್ಧಾರ ಕೈಗೊಂಡು ಪ್ರಕಟಿಸಿದೆ. ಈ ಸಂಬಂಧ ಹೊಸ ನಿಯಮ ಜಾರಿಗೆ ತರುವ ಬಗ್ಗೆಯು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications