RSS: ಅಮಾನತುಗೊಂಡ ಅಧಿಕಾರಿಗೆ ಕಾನೂನು ಸಲಹೆ, ಬೆಂಬಲ: ಯತ್ನಾಳ್ ಘೋಷಣೆ
ಬೆಂಗಳೂರು, ಅಕ್ಟೋಬರ್ 18: ಪ್ರತ್ಯಕ್ಷವಾಗಿಯು, ಪರೋಕ್ಷವಾಗಿಯು ರಾಜ್ಯ ಸರ್ಕಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS)ದ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ. ಆರ್ಎಸ್ಎಸ್ ಚಟುವಟಿಕೆಯನ್ನು ಸರ್ಕಾರಿ ಜಾಗದಲ್ಲಿ ನಿಷೇಧಿಸಿದ ಬೆನ್ನಲ್ಲೆ, ಸಂಘದ ಪಥಸಂಚಲನದಲ್ಲಿ ಗಣವೇಷಧಾರಿಯಾಗಿದ್ದ ಅಧಿಕಾರಿ ಅಮಾನತು ಮಾಡಲಾಗಿದೆ. ಇದರ ವಿರುದ್ಧ ಆಕ್ರೋಶ ಹೊರ ಹಾಕಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅಧಿಕಾರಿಗಳಿಗೆ ಬೆಂಬಲ ಘೋಷಿಸಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರವು RSS ಶಾಖೆಗಳಲ್ಲಿ ಅಥವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರನ್ನು ಅಮಾನತು ಮಾಡುತ್ತಿರುವುದನ್ನು ಖಂಡಿಸಿ ಶಾಸಕ ಯತ್ನಾಳ್ ಅವರು ಎಕ್ಸ್ ಪೊಸ್ಟ್ ಮಾಡಿದ್ದಾರೆ.

ಸಂಘ ಹಾಗು ಹಿಂದೂ ಸಮಾಜವನ್ನು ಎದುರಿಸಲಾಗದೆ ಕಾರ್ಯಕರ್ತರನ್ನು ಗುರಿಯಾಗಿಸುತ್ತಿರುವ ಈ ಸರ್ಕಾರದ ಅಯೋಗ್ಯತನವನ್ನು ನಾನು ಖಂಡಿಸುತ್ತೇನೆ ಹಾಗು ಸರ್ಕಾರದಿಂದ ಗುರಿಯಾಗಿಸುತ್ತಿರುವ ಅಧಿಕಾರಿಗಳಿಗೆ ಸಂಪೂರ್ಣ ಕಾನೂನು ಸಹಾಯ ಹಾಗು ಬೆಂಬಲವನ್ನು ಘೋಷಿಸುತ್ತೇನೆ ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥಸಂಚಲನದಲ್ಲಿ ಭಾಗವಹಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಪ್ರವೀಣ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿದೆ. ಸಂಘ ದೇಶದ ಅಭ್ಯುದಯಕ್ಕೆ ಕೆಲಸ ಮಾಡುತ್ತಿದೆಯೇ ಹೊರತು ದೇಶ ವಿರೋಧಿ ಸಂಘಟನೆಯಲ್ಲ. 100 ವರ್ಷಗಳ ಇತಿಹಾಸದಲ್ಲಿ ಯಾವುದೇ ಕ್ರಿಮಿನಲ್ ಹಿನ್ನೆಲೆಯಿಲ್ಲದ ಸಂಸ್ಕೃತಿ, ಸದಾಚಾರ, ದೇಶಾಭಿಮಾನ, ಶಿಸ್ತನ್ನು ಕಲಿಸುವ ರಾಷ್ಟ್ರೀಯ ಸ್ವಯಂ ಸೇವಕದ ವಿರುದ್ಧ ಇರುವ selective amnesia ಏಕೆಂದು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದೆ ತರ್ಕಾನುಸಾರ ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡು ಪಿ.ಆಫ್.ಐ, ಎಸ.ಡಿ.ಪಿ.ಐ ಮುಖಂಡರನ್ನು ಬೆಂಬಲಿಸಿದ ಮುಖಂಡರನ್ನು ಸರ್ಕಾರ ಅಮಾನತು ಮಾಡಿ ಕಾನೂನಿನ ಮುಂದೆ ಎಲ್ಲರೂ ಒಂದೇ ಸಾಬೀತುಪಡಿಸಲಿ. ಆಗದಿದ್ದರೆ, ಕೂಡಲೇ ಅಮಾನತನ್ನು ಹಿಂಪಡೆಯಬೇಕೆಂದರು.
ಲಿಂಗಸೂರಿನಲ್ಲಿ ಜರುಗಿದ ಆರ್ಎಸ್ಎಸ್ ಪಥಸಂಚನದಲ್ಲಿ ಗಣವೇಷಧಾರಿಯಾಗಿದ್ದ ಸಿರವಾರ ಗ್ರಾಮ ಪಂಚಾಯಿತಿ ಅಧಿಕಾರಿ ಪ್ರವೀಣ್ ಕುಮಾರ್ ವಿರುದ್ಧ ಕ್ರಮ ಜರುಗಿಸಲಾಗಿದೆ. ಸಂಘದ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸರ್ಕಾರಿ ಸೇವಾ ನಿಯಮ ಉಲ್ಲಂಘಿಸಲಾಗಿದೆ ಎಂದು ಹೇಳಿ ಸರ್ಕಾರ ಆ ಅಧಿಕಾರಿಯನ್ನು ಅಮಾನತು ಮಾಡಿದೆ. ಇದರ ವಿರುದ್ಧ ಬಿಜೆಪಿ ವಲಯದಲ್ಲಿ ವ್ಯಾಪಕ ಆಕ್ರೋಶ ಕೇಳಿ ಬಂದಿದೆ.
RSS ಚಟುವಟಿಕೆಗೆ ಬ್ರೇಕ್
ಇತ್ತೀಚೆಗೆ ನಡೆದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಸಂಘದ ಹೆಸರು ಹೇಳದೇ ಖಾಸಗಿ ಸಂಘ, ಸಂಸ್ಥೆಗಳ ಕಾರ್ಯಕ್ರಮಗಳನ್ನು ಸರ್ಕಾರಿ ಶಾಲೆ, ಕಾಲೇಜು ಮತ್ತು ಜಾಗಗಳಲ್ಲಿ ಕಾರ್ಯಕ್ರಮ ನಡೆದಂತೆ ನಿಷೇಧಿಸಿದೆ. ಒಂದು ವೇಳೆ ಕಾರ್ಯಕ್ರಮ ನಡೆಸಬೇಕಾದರೆ ಯಾವುದೇ ಖಾಸಗಿ ಸಂಸ್ಥೆಗಳು ಸರ್ಕಾರದ ಪೂರ್ವಾನುಮತಿ ಪಡೆಯುವಂತೆ ಸರ್ಕಾರ ನಿರ್ಧಾರ ಕೈಗೊಂಡು ಪ್ರಕಟಿಸಿದೆ. ಈ ಸಂಬಂಧ ಹೊಸ ನಿಯಮ ಜಾರಿಗೆ ತರುವ ಬಗ್ಗೆಯು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
-
Gruhalakshmi scheme: ರಾಜ್ಯದ ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್: 26, 27ನೇ ಕಂತಿನ ಹಣ ಜಮಾದ ಬಗ್ಗೆ ಮಹತ್ವದ ಅಪ್ಡೇಟ್ -
Horoscope 28 February: ಫೆಬ್ರವರಿ 28ರ ದ್ವಾದಶ ರಾಶಿ ಫಲ: ಯಾವ ರಾಶಿಗೆ ಯಶಸ್ಸು, ಯಾರಿಗೆ ಸವಾಲು ಇಲ್ಲಿದೆ ಸಂಪೂರ್ಣ ಮಾಹಿತಿ -
LPG Price: ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಏರಿಕೆ: ಇಲ್ಲಿದೆ ಮಾರ್ಚ್ 1ರ ದರಪಟ್ಟಿ -
ರಣಜಿ ಟೂರ್ನಿಯಲ್ಲಿ ಜಮ್ಮು-ಕಾಶ್ಮೀರ ವಿರುದ್ಧ ಸೋತರೂ ಗೆದ್ದ ಕನ್ನಡಿಗ: ಮೋಡಿಯಂತೂ ಅಲ್ಲ, ಇಲ್ಲಿದೆ ಮಾಹಿತಿ -
Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಬಿಸಿಲೂ ಹೆಚ್ಚು -
ಮಾರ್ಚ್ 3, 2026 – ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ಕೇತುಗ್ರಸ್ತ ಮಹಾ ಚಂದ್ರಗ್ರಹಣ: ದ್ವಾದಶ ರಾಶಿಗಳ ಫಲಿತಾಂಶ -
Gold Rate Today: ಆಭರಣ ಪ್ರಿಯರ ಗಮನಕ್ಕೆ: ಬೆಂಗಳೂರಿನಲ್ಲಿ ಇಂದು ಚಿನ್ನ-ಬೆಳ್ಳಿ ದರ ಹೇಗಿದೆ? ಇಲ್ಲಿದೆ ಮಾಹಿತಿ -
Bengaluru Rental Row: ಬೆಂಗಳೂರು ಬಾಡಿಗೆದಾರರಿಗೆ ಶಾಕ್: ಪೇಂಟಿಂಗ್, ಕ್ಲೀನಿಂಗ್ ಹೆಸರಲ್ಲಿ 51,000 ರೂ. ಕಡಿತ -
National Highway: ರಾಜ್ಯದಲ್ಲಿ ಹೊಸ ರಾಷ್ಟ್ರೀಯ ಹೆದ್ದಾರಿಯ ಮಹತ್ವದ ಅಪ್ಡೇಟ್ -
ಹರ್ಮೂಜ್ ಜಲಸಂಧಿ ಬಂದ್: ಭಾರತಕ್ಕೆ ತಟ್ಟಲಿದೆ ತೈಲ ದರದ ಬಿಸಿ, ಆರ್ಥಿಕತೆಗೂ ಭಾರಿ ಹೊಡೆತ -
ಅಮೆರಿಕಕ್ಕೆ ಸೆಡ್ಡು ಹೊಡೆದು 16,800 ಕೋಟಿ ರೂ ಒಪ್ಪಂದ ಕಡಿದುಕೊಂಡ ಆಂತ್ರೋಪಿಕ್: ಬೆಂಗಳೂರು ಟೆಕ್ಕಿ ಮೆಚ್ಚುಗೆ -
March Monthly Horoscope: ಮಾರ್ಚ್ ಮಾಸ ಭವಿಷ್ಯ: 12 ರಾಶಿಗಳ ಜೀವನದಲ್ಲಿ ಯಾವ ಬದಲಾವಣೆ ? ಯಾರಿಗೆ ಅದೃಷ್ಟ, ಯಾರಿಗೆ ಪರೀಕ್ಷೆ












Click it and Unblock the Notifications