ಬಿಜೆಪಿ ಕೋವಿಡ್ ಹಗರಣ: ಬಸನಗೌಡ ಪಾಟೀಲ್ ಯತ್ನಾಳ್ಗೆ ಸಿದ್ದರಾಮಯ್ಯ ಒತ್ತಾಯಿಸಿದ್ದೇನು?
ಬೆಂಗಳೂರು, ಡಿಸೆಂಬರ್ 31: ಬಿಜೆಪಿ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದಾಗ ಭಾರೀ ಕೋವಿಡ್ ಹಗರಣ ನಡೆದಿದೆ ಎಂದು ಸ್ವಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದರು. ಈ ಬಹುಕೋಟಿ ಹಗರಣದ ದಾಖಲೆಗಳನ್ನು ತನಿಖಾ ಆಯೋಗದ ಮುಂದೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಹೌದು, ಬಿಜೆಪಿ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮೇಲೆ ಬಹುಕೋಟಿ ಕೊರೊನಾ ಹಗರಣ ನಡೆದಿದೆ ಎಂದಿರುವ ನೀವು ಅದರ ದಾಖಲೆಗಳನ್ನು ತನಿಖಾ ಆಯೋಗದ ಮುಂದೆ ಸಲ್ಲಿಸುವಂತೆ ಸಿದ್ದರಾಮಯ್ಯ ಅವರು ಶನಿವಾರ ಒತ್ತಾಯಿಸಿದ್ದಾರೆ. ಈ ಮೂಲಕ ಬಿಜೆಪಿ ವಿರುದ್ಧ ಸ್ವಪಕ್ಷದವರ ಹೇಳಿಕೆಗಳನ್ನು ಅಸ್ತ್ರವನ್ನಾಗಿ ಮಾಡಿಕೊಳ್ಳುತ್ತಿದ್ದಾರೆ.

ಸಿಂಧನೂರು ಕಾರ್ಯಕ್ರಮ ಬಳಿಕ ಬಸಾಪುರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ಔಷಧ ಮತ್ತು ಉಪಕರಣಗಳು ಮತ್ತು ಚಿಕಿತ್ಸೆಯಲ್ಲಿ 40,000 ಕೋಟಿ ರೂಪಾಯಿಗಳ ಅವ್ಯವಹಾರವನ್ನು ಆಗಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಮಾಡಿದ್ದರೆಂದು ಅವರ ಪಕ್ಷದವರೇ ಹೇಳಿದ್ದಾರೆ ಎಂದು ಪುನರುಚ್ಚರಿಸಿದರು.
ಹಗರಣದ ಸಾಕ್ಷ್ಯ ನೀಡಲಿ: ಸಿಎಂ ಆಗ್ರಹ
ನಾವು ತನಿಖಾ ಆಯೋಗವನ್ನು ರಚಿಸಿದ್ದೇವೆ. ಬಿಜೆಪಿ ಆಡಳಿತದ ಅವಧಿಯಲ್ಲಿ ನಡೆದ ಕೋವಿಡ್-19 ಅಕ್ರಮಗಳ ಕುರಿತು ತನಿಖೆ ನಡೆಸಬೇಕು. ಬಸನಗೌಡ ಪಾಟೀಲ್ ಯತ್ನಾಳ್ ಅವರು ನ್ಯಾಯಮೂರ್ತಿ ಮೈಕೆಲ್ ಡಿ'ಕುನ್ಹಾ ಆಯೋಗಕ್ಕೆ ಮಾಡಿದ ಭ್ರಷ್ಟಾಚಾರ ಆರೋಪಗಳ ಕುರಿತು ಬಿಜೆಪಿ ಕೋವಿಡ್ ಹಗರಣಗಳ ಕುರಿತು ಸಾಕ್ಷ್ಯಗಳನ್ನು ನೀಡಲಿ ಎಂದು ಆಗ್ರಹಿಸಿದರು.
ಬಿಜೆಪಿ ವಿರುದ್ಧ ಏಕೆ ಪ್ರಶ್ನಿಸಲಿಲ್ಲ: ಎಚ್ಡಿಕೆಗೆ ತಿರಗೇಟು
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರ್ಥಿಕ ಸಲಹೆಗಾರನಾಗಿ ಯಲಬುರ್ಗಾ ಬಸವರಾಜ್ ರಾಯರಡ್ಡಿ ಅವರನ್ನು ನೇಮಿಸಬೇಕು ಎಂದು ಎಚ್ಡಿ ಕುಮಾರಸವಾಮಿ ತಿಳಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ರಾಯರಡ್ಡಿ ಅವರಿಗೆ ಆರ್ಥಿಕ ವಿಚಾರದಲ್ಲಿ ಪರಿಣತಿ ಇದೆ, ಹಾಗಾಗಿ ಅವರನ್ನು ಸಲಹೆಗಾರರನ್ನಾಗಿ ನೇಮಿಸಿದ್ದೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೂಡ ಅಧಿಕಾರದಲ್ಲಿದ್ದಾಗ ಸಲಹೆಗಾರರನ್ನು ನೇಮಿಸಿಕೊಂಡಿದ್ದರು. ಆರ್ಥಿಕ ವ್ಯವಹಾರಗಳು ಸೇರಿದಂತೆ ಈ ಎಲ್ಲವನ್ನು ನೀವು ಆಗ ಏಕೆ ಪ್ರಶ್ನೆ ಮಾಡಿಲ್ಲ ಎಂದು ಎಚ್ಡಿ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.
ಬಿಜೆಪಿ ಮೇಲಿನ ಯತ್ನಾಳ್ ಆರೋಪವೇನು?
ಕೊರೊನಾ ಮೊದಲನೇ ಅಲೆ ವೇಳೆ ಬಿಜೆಪಿ ಅಧಿಕಾರದಲ್ಲಿತ್ತು. ಆದ ಇಂದಿನ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಿಎಂ ಆಗಿದ್ದರು. ಈ ವೇಳೆ ಒಂದು ಮಾಸ್ಕ ಬೆಲೆ 45 ರೂಪಾಯಿ ಇತ್ತು. ಇದನ್ನು ಯಡಿಯೂರಪ್ಪನವರು 485 ರೂಪಾಯಿಗೆ ಏರಿಸಿದರು. ಹತ್ತು ಸಾವಿರ ಬೆಡ್ ವ್ಯವಸ್ಥೆಯನ್ನು ಬಾಡಿಗೆ ರೂಪದಲ್ಲಿ ಮಾಡಲಾಗಿತ್ತು. ಒಟ್ಟಾರೆ ಕೋವಿಡ್ ವೇಳೆ ಸುಮಾರು 40,000 ಕೋಟಿ ಅವ್ಯವಹಾರ ನಡೆದಿದೆ ಮಾಧ್ಯಮಗಳ ಮುಂದೆ ಹೇಳಿದ್ದರು.
ಯತ್ನಾಳ್ ಆರೋಪ ನಿಜವಿರಬಹುದು: ಪಾಟೀಲ್
ಸ್ವಪಕ್ಷ ಬಿಜೆಪಿ ಮೇಲಿನ ಶಾಸಕ ಬಸನಗೌಡ ಪಾಟೀಲ್ ಅವರ ಆರೋಪ ನಿಜವಿರಬಹುದು. ಅಲ್ಲದೇ ಈವರೆಗೆ ಯತ್ನಾಳ್ ಅವರ ವಿರುದ್ಧ ಪಕ್ಷ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಚಿವ ಎಂಬಿ ಪಾಟೀಲ್ ಇತ್ತೀಚೆಗೆ ಹೇಳಿದ್ದರು.
ಅದರ ಬೆನ್ನಲ್ಲೆಈ ವಿಚಾರವನ್ನೇ ಪ್ರಸ್ತಾಪಿಸಿರುವ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಸ್ವಪಕ್ಷದವರ ಬಹುಕೋಟಿ ಅವ್ಯವಹಾರವನ್ನೇ ಅಸ್ತ್ರವಾಗಿ ಬಳಸುತ್ತಿದ್ದಾರೆ. ಈ ಹಗರಣ ಸಾಕ್ಷ್ಯ ಒದಗಿಸುವಂತೆ ಅವರು ಯತ್ನಾಳ್ ಅವರನ್ನು ಒತ್ತಾಯಿಸಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral












Click it and Unblock the Notifications