ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ; ಈ ಬಾರಿ ಯಾವುದೇ ಆಪರೇಷನ್ ಕಮಲ ಮಾಡುವುದಿಲ್ಲ: ಯತ್ನಾಳ್
ಬೆಂಗಳೂರು,ಮಾರ್ಚ್30: ರಾಜ್ಯ ವಿಧಾನಸಭಾ ಚುನಾವಣಾ ದಿನಾಂತ ಘೋಷಣೆಯಾಗಿದ್ದು, ಚುನಾವಣೆಗೆ ದಿನಗಣನೆ ಶುರುವಾಗಿದೆ. ಇತ್ತ ರಾಜಕೀಯ ಪಕ್ಷಗಳು ಹಲವು ತಂತ್ರಗಾರಿಕೆಯೊಂದಿಗೆ ರಾಜ್ಯಾದ್ಯಂತ ಅಬ್ಬರದ ಪ್ರಚಾರವನ್ನ ನಡೆಸುತ್ತಿವೆ.
ಇನ್ನೂ ರಾಜ್ಯ ವಿಧಾನಸಭಾ ಚುನಾವಣೆ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಆದರೆ ಈ ಬಾರಿ ಯಾವುದೇ ಆಪರೇಷನ್ ಕಮಲ ಮಾಡುವುದಿಲ್ಲ. ಆಪರೇಷನ್ ಕಮಲ ಮಾಡದಿರಲು ಹೈಕಮಾಂಡ್ ನಿರ್ಧರಿಸಿದೆ. ಆದ್ದರಿಂದ ನಮ್ಮ ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

75 ವರ್ಷ ವಯಸ್ಸಾದವರಿಗೆ, ಭ್ರಷ್ಟಾಚಾರದಲ್ಲಿ ತೊಡಗಿದವರಿಗೆ ಮತ್ತು ಒಂದೇ ಕುಟುಂಬದವರಿಗೆ ಚುನಾವಣೆಯಲ್ಲಿ ಟಿಕೆಟ್ ನೀಡುವುದಿಲ್ಲ ಎಂಬ ನಿರ್ಣಯವನ್ನು ಮಾಡಿ ಮೋದಿ ಹಾಗೂ ಅಮಿತ್ ಶಾ ಒಳ್ಳೆಯ ಕೆಲಸವನ್ನು ಮಾಡಿದ್ದಾರೆ ಎಂದು ಹೇಳಿದರು.
ಇನ್ನೂ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಮೀಸಲಾತಿಯನ್ನು ಕಿತ್ತು ಹಾಕುತ್ತೇವೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ಕುರಿತು ಮಾತನಾಡಿದ ಅವರು, ತಾಕತ್ ಇದ್ರೆ ಮೀಸಲಾತಿ ವಾಪಸ್ ಪಡೆಯುತ್ತೇವೆ ಎಂಬ ಹೇಳಿಕೆಯನ್ನು ಡಿ.ಕೆ. ಶಿವಕುಮಾರ್ ಇನ್ನೊಂದು ಸಲ ಹೇಳಲಿ. ಧಮ್ ಇದ್ರೆ ಡಿಕೆ ಶಿವಕುಮಾರ್ ಅವರು ಮೀಸಲಾತಿಯನ್ನು ವಾಪಸ್ ಪಡೆಯಲಿ. ತಾಕತ್ ಇದ್ರೆ ಅವರು ಅದನ್ನು ಮಾಡಿ ನೋಡಲಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಡಿ.ಕೆ. ಶಿವಕುಮಾರ್ ಸವಾಲೆಸೆದಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಜನ ಸರ್ವನಾಶ ಮಾಡಿ ಬಿಡುತ್ತಾರೆ. ಒಕ್ಕಲಿಗರು, ಲಿಂಗಾಯತರು ಈ ರಾಜ್ಯದ ರಾಜಕಾರಣದಲ್ಲಿ ದೊಡ್ಡ ಶಕ್ತಿ ಇದ್ದ ಹಾಗೆ. ಅವರೊಂದಿಗೆ ಹಿಂದುಳಿದವರು, ದಲಿತರು ಸೇರಿದಂತೆ ಎಲ್ಲರಿಗೂ ಸಾಮಾಜಿಕವಾಗಿ ನ್ಯಾಯ ಸಿಕ್ಕಿದ್ದರಿಂದ ಡಿ.ಕೆ. ಶಿವಕುಮಾರ್ ಅವರನ್ನು ಒಕ್ಕಲಿಗರೇ ಸೋಲಿಸುತ್ತಾರೆ. ಅವರು ಅವರ ಬ್ರದರ್ಸ್ಗಳಿಗೋಸ್ಕರ ಈ ರೀತಿ ಹೇಳಿದ್ದಾರೆ. ಅವರು ಮೀಸಲಾತಿ ವಾಪಸ್ ಪಡೆದರೆ ಅವರ ಬ್ರದರ್ಸ್ ಜೊತೆ ಮೆಕ್ಕಾ-ಮದಿನಾಗೆ ಹೋಗಬೇಕಾಗುತ್ತದೆ ಎಂದು ಡಿ.ಕೆ. ಶಿವಕುಮಾರ್ ಗೆ ಟಾಂಗ್ ನೀಡಿದರು.

ಇನ್ನೂ ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಾಗಿದೆ. ಅಲ್ಲದೇ ಲಿಂಗಾಯತರು ಹಾಗೂ ಒಕ್ಕಲಿಗರಿಗೂ ಮೀಸಲಾತಿ ಹೆಚ್ಚಾಗಿದೆ. ನಮ್ಮ ದೇಶದ ಪ್ರಧಾನಿ ಐತಿಹಾಸಿಕ ನಿರ್ಣಯವನ್ನು ತೆಗೆದುಕೊಂಡಿದ್ದಾರೆ. ಮಾರ್ಚ್ 27ನೇ ತಾರೀಕಿನಂದು ಗೆಜೆಟ್ ನೋಟಿಫಿಕೇಷನ್ ಆಗಿದೆ. ಆದ್ದರಿಂದ ಪ್ರಧಾನಿ, ಅಮಿತ್ ಶಾ ಹಾಗೂ ನನ್ನ ಸಹೋದರಿ ಶೋಭಾ ಕರಂದ್ಲಾಜೆಯವರಿಗೆ ಧನ್ಯವಾದ ಹೇಳುತ್ತೇನೆ ಎಂದು ಹೇಳಿದರು.
ಬಿಜೆಪಿಯಿಂದ ಯಾರಾದರೂ ಕಾಂಗ್ರೆಸ್ಸಿಗೆ ಹೋದರೆ ಅವರ ಮರಣ ಶಾಸನವನ್ನು ಅವರೇ ಬರೆದುಕೊಳ್ಳುತ್ತಾರೆ. ರಾಜ್ಯದಲ್ಲಿ ಬಿ. ಎಸ್. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ನೇತ್ರತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ವಿಜಯಪುರದಲ್ಲಿ ಸಾವಿರಾರು ಕೋಟಿ ರೂಪಾಯಿ ಅಭಿವೃದ್ಧಿ ಕೆಲಸಗಳು ಆಗಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುತ್ತದೆ. ಮತ್ತೆ ನಾವು ವಿಧಾನಸಭೆಯಲ್ಲಿ ಬಹುಮತ ಪಡೆಯುತ್ತೇವೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ಟಿಕೆಟ್ ಹಂಚಿಕೆ ಮಾನದಂಡವನ್ನು ನಿರ್ಣಯ ಮಾಡುತ್ತಾರೆ. ಕುಟುಂಬ ರಾಜಕಾರಣವನ್ನು ನಾನೂ ವಿರೋಧ ಮಾಡುತ್ತೇನೆ. ಒಬ್ಬರ ಕುಟುಂಬಕ್ಕೆ ಎರಡು ಮೂರು ಎಷ್ಟು ಕೊಡಬೇಕು? ಕಾರ್ಯಕರ್ತರು ಪಕ್ಷಕ್ಕೆ ದುಡಿದವರು ಎಷ್ಟು ಜನರಿದ್ದಾರೆ? ಅವರೆಲ್ಲರೂ ಇವರ ಮಕ್ಕಳಿಗಾಗಿ ದುಡಿದ ಹಾಗಾಗುತ್ತದೆ. ಆದರೆ, ಒಂದೆಡರು ಕ್ಷೇತ್ರಗಳನ್ನು ಹೊರತು ಪಡಿಸಿ ಹೊಸ ಮುಖಗಳಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಹೇಳಿದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications