ಸೋನಿಯಾಗಾಂಧಿ ವಿಷಕನ್ಯೆ ಹೇಳಿಕೆ: ರಾಜೀನಾಮೆ ಬೇಕಾದ್ರೆ ಕೊಡ್ತೇನೆ ಆದ್ರೆ ಕ್ಷಮೆ ಕೇಳಲ್ಲ ಎಂದ ಯತ್ನಾಳ್
ಹುಬ್ಬಳ್ಳಿ, ಮೇ 01: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರಿಗೆ ವಿಷಕನ್ಯೆ ಅಂದಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಕಾಂಗ್ರೆಸ್ ಮುಖಂಡರು ಯತ್ನಾಳ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು. ತಮ್ಮ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಯತ್ನಾಳ್ ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, "ದೊರೆಸ್ವಾಮಿ ನಾಟಕ ಕಂಪೆನಿಗೆ ಕಾಂಗ್ರೆಸ್ ಏಜೆಂಟ್ ಅಂದಿದ್ದೆ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ನವರು 91 ಸಾರಿ ಬೈದಿದ್ದಾರೆ, ಅವರನ್ನು ವಿಷಸರ್ಪ ಎಂದಿದ್ದಕ್ಕೆ ನಾನು ವಿಷಕನ್ಯೆ ಎಂದು ಹೇಳಿದ್ದೇನೆ, ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ, ಬೇಕಾದರೆ ರಾಜೀನಾಮೆ ಕೊಡುತ್ತೇನೆ" ಎಂದು ಹೇಳಿದರು.

ಮುಖ್ಯಮಂತ್ರಿಯಾಗುವ ಬಗ್ಗೆ ಪ್ರತಿಕ್ರಿಯೆ ನೀಡಿದ ಯತ್ನಾಳ್ ಅದನ್ನು ಪಕ್ಷ ತೀರ್ಮಾನ ಮಾಡುತ್ತದೆ. ಬೊಮ್ಮಾಯಿಯವರನ್ನಾದರೂ ಸಿಎಂ ಮಾಡಲಿ ಅಥವಾ ನನ್ನನ್ನಾದರೂ ಮಾಡಲಿ ಎನ್ನುವ ಮೂಲಕ ಪರೋಕ್ಷವಾಗಿ ತಾನು ಸಿಎಂ ರೇಸ್ನಲ್ಲಿದ್ದೇನೆ ಎಂದು ಸಂದೇಶ ನೀಡಿದ್ದಾರೆ. ಸಿಎಂ ಬೊಮ್ಮಾಯಿಯವರದ್ದು ನಮ್ಮ ತರಹ ಬಲವಾದ ಹಿಂದುತ್ವ ಅಲ್ಲ, ಅವರು ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ನಾನು ಮುಖ್ಯಮಂತ್ರಿ ಹುದ್ದೆಯ ಕನಸು ಕಂಡಿಲ್ಲ ಎಂದು ಹೇಳಿದರು.
ಕುಟುಂಬ ರಾಜಕಾರಣ ವಿರೋಧಿ ಎಂದ ಯತ್ನಾಳ್
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಕಡೆಗಣಿಸ್ತಿದ್ಯಾ ಎನ್ನುವ ಬಗ್ಗೆ ಉತ್ತರ ನೀಡಿದ ಯತ್ನಾಳ್, ಅವರ ಹತ್ತಿರವೇ ಅಧಿಕಾರ ಇದೆ ಅಲ್ಲವಾ, ಕೆಲವೊಮ್ಮ ಅಧಿಕಾರ ಹೋಗುತ್ತೆ. ನಾನು ನೇರವಾಗಿ ಮಾತನಾಡುವ ವ್ಯಕ್ತಿ, ಕುಟುಂಬ ರಾಜಕಾರಣವನ್ನು ನಾನು ವಿರೋಧಿಸುತ್ತೇನೆ. ಈಗ ನನ್ನ ಹತ್ತಿರವೂ ಅಧಿಕಾರ ಇಲ್ಲ, ನನ್ನನ್ನು ಸಿಎಂ ಅಭ್ಯರ್ಥಿ ಅಂತೀರಿ, ನಾನು ಲಿಂಗಾಯತ ಸಮುದಾಯಕ್ಕೆ ಅನ್ಯಾಯ ಮಾಡಿಲ್ಲ, ನಾನು ಗೆಲ್ಲುತ್ತೇನೆ, ಮುನ್ನಡೆ ಬಗ್ಗೆ ತಲೆಕೆಡಿಸಿಕೊಳ್ಳಲ್ಲ" ಎಂದು ಹೇಳಿದರು.
ನಾಲ್ಕು ಜನರನ್ನು ಎನ್ಕೌಂಟರ್ ಮಾಡ್ಬೇಕಿತ್ತು
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಯಾವತ್ತೂ ಹಿಂದುತ್ವದ ಪರವಾಗಿ ಮಾತನಾಡಿಲ್ಲ ಎಂದು ಯತ್ನಾಳ್ ಹೇಳಿದರು. ಹುಬ್ಬಳ್ಳಿಯಲ್ಲಿ ಕೋಮು ಗಲಭೆಯಾದಾಗ 4 ಜನರನ್ನು ಎನ್ಕೌಂಟರ್ ಮಾಡ್ಬೇಕಿತ್ತು, ಹಳೇ ಹುಬ್ಬಳ್ಳಿಯಲ್ಲಿ ಗಲಾಟೆ ಆದಾಗ ಶೆಟ್ಟರ್ ಅವರೇ ಅಧಿಕಾರದಲ್ಲಿ ಇದ್ದದ್ದು, ಪೊಲೀಸ್ ಠಾಣೆಗೆ ಹೋಗಿದ್ದ ನಾಲ್ವರನ್ನು ಎನ್ಕೌಂಟರ್ ಮಾಡ್ಬೇಕಿತ್ತು ಎಂದು ಹೇಳಿದರು.
ಕಾಂಗ್ರೆಸ್ನವರಿಗೆ ಈಗ ಲಿಂಗಾಯತ ಸಮುದಾಯದ ಜಪ ಮಾಡ್ತಿದ್ದಾರೆ. ಶೆಟ್ಟರ್ ಬಿಟ್ಟುಹೋಗಿದ್ದರ ಪರಿಣಾಮದ ಚರ್ಚೆ ಮಾಡಲು ನಾವು ಸಭೆ ಮಾಡಿದ್ದು ನಿಜ, ಲಿಂಗಾಯತ ಮುಖ್ಯಮಂತ್ರಿ ಅನ್ನೋ ಪ್ರಶ್ನೆ ಈಗ ಇಲ್ಲ, ಕಾಂಗ್ರೆಸ್ಗೆ ಧೈರ್ಯ ಇದ್ದರೆ ಲಿಂಗಾಯತರನ್ನು ಸಿಎಂ ಮಾಡಲಿ ಎಂದು ಸವಾಲು ಹಾಕಿದರು.
ವಿಜಯಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದು ಕಾಂಗ್ರೆಸ್ಗೆ ಬೆಂಬಲ ನೀಡುತ್ತಿರುವ ಬಗ್ಗೆ ಮಾತನಾಡಿದ ಯತ್ನಾಳ್, ವಿಜಯಪುರದಲ್ಲಿ ಹಿಂದೂ-ಮುಸ್ಲಿಂ ಎಲೆಕ್ಷನ್ ನಡೀತಿದೆ, ಯಾರಾದರೂ ವಾಪಸ್ ಪಡೆಯಲಿ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ಹೇಳಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications