ಬಸವ ಜಯಂತಿ; ಸಮಾಜ ಸುಧಾರಣೆಯ ಆಶಯ ಪಾಲಿಸೋಣ
ಬೆಂಗಳೂರು, ಏಪ್ರಿಲ್ 26 : ಭಾನುವಾರ ಬಸವ ಜಯಂತಿ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೇರಿದಂತೆ ನಾಡಿನ ವಿವಿಧ ಗಣ್ಯರು ರಾಜ್ಯದ ಜನರಿಗೆ ಬಸವ ಜಯಂತಿಯ ಶುಭಾಶಯಗಳನ್ನು ಕೋರಿದ್ದಾರೆ.
ಬಸವ ಜಯಂತಿಯನ್ನು ಸರ್ಕಾರಿ ಕಚೇರಿಗಳಲ್ಲಿ ಈ ಬಾರಿ ಸರಳವಾಗಿ ಆಚರಿಸಲಾಗುತ್ತಿದೆ. ಕೊರೊನಾ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಜಾರಿಯಲ್ಲಿದೆ. ಆದ್ದರಿಂದ, ಹೆಚ್ಚು ಜನರು ಸೇರದೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.
ಕರ್ನಾಟಕದ ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಸವಣ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸಾಂಕೇತಿಕವಾಗಿ ಬಸವ ಜಯಂತಿ ಆಚರಿಸಲಾಗುತ್ತದೆ. ಜನರು ಮನೆಯಲ್ಲಿಯೇ ಇರಬೇಕು ಎಂದು ಮನವಿ ಮಾಡಲಾಗಿದೆ.

12ನೇ ಶತಮಾನದ ತತ್ವಜ್ಞಾನಿ, ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದ ಬಸವಣ್ಣ ದೇಶ ಕಂಡ ಸಾಮಾಜಿಕ ಸುಧಾಕರ. ವಚನ ಸಾಹಿತ್ಯದ ಮೂಲಕ ಜನರನ್ನು ತಲುಪಿದ ಸಾಹಿತಿ. ಸಮಾನತೆಯ ಪಾಠವನ್ನು ವಿಶ್ವಕ್ಕೆ ಸಾರಿದ ಮಹಾನ್ ಜ್ಞಾನಿ.
ಆಡು ಭಾಷೆಯಲ್ಲಿ ಸರಳವಾಗಿ ಜನರಿಗೆ ಅರ್ಥವಾಗುವಂತೆ ವಚನಗಳನ್ನು ರಚನೆ ಮಾಡಿದ ಬಸವಣ್ಣನವರು, ಸಮಾಜದಲ್ಲಿ ಹಲವಾರು ಬದಲಾವಣೆಗಳನ್ನು ತಂದರು. ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ಹೋಗಲಾಡಿಸಿದರು.
ಇಷ್ಟಲಿಂಗ ಪೂಜೆಯನ್ನು ಪರಿಚಯಿಸಿದರು. ಶಿವ ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಎಲ್ಲರು ಇಷ್ಟಲಿಂಗವನ್ನು ಧರಿಸಿ ಪೂಜಿಸಬಹುದು ಎಂದು ಸಮಾಜಕ್ಕೆ ಕರೆ ನೀಡಿದರು. ಮಹಿಳೆಯರು ಮತ್ತು ಪುರುಷರಿಗೆ ಸಮಾನವಾದ ಹಕ್ಕು ಸಿಗಬೇಕು ಎಂದು ಪ್ರತಿಪಾದಿಸಿದರು.
ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದ ಬಸವಣ್ಣನವರು ಇಡೀ ವಿಶ್ವಕ್ಕೆ ಪ್ರಜಾಪ್ರಭುತ್ವದಕ್ಕೆ 12ನೇ ಶತಮಾಡನದಲ್ಲಿ ಅಡಿಪಾಯ ಹಾಕಿಕೊಟ್ಟರು. ಅವರ ಅನುಭವ ಮಂಟಪದ ಆಲೋಚನೆ ಇಂದಿಗೂ ಪ್ರಸ್ತುತವಾಗಿದೆ.
ಬಸವಣ್ಣನವರ ಆದರ್ಶಗಳನ್ನು ಪಾಲನೆ ಮಾಡಿದರೆ ಸಮಾಜದಲ್ಲಿ ಅಮೂಲಾಗ್ರವಾದ ಬದಲಾವಣೆ ಕಂಡುಕೊಳ್ಳಲು ಸಾಧ್ಯವಿದೆ. ವರ್ಣ, ವರ್ಗ, ಲಿಂಗ ಬೇಧವನ್ನು ವಚನಗಳಲ್ಲಿ ಧಿಕ್ಕರಿಸಿದವರು ಬಸವಣ್ಣ.
ಕಾಯಕದಲ್ಲಿ ನಂಬಿಕೆ ಇಟ್ಟುಕೊಳ್ಳಬೇಕು ಎಂಬ ಸಂದೇಶವನ್ನು ಜಗತ್ತಿಗೆ ಸಾರಿದವರು ಬಸವಣ್ಣ. ಅಂದು ಅವರು ನುಡಿದಂತೆ ನಡೆದು ಮಾದರಿಯಾದರು.
ಜಗತ್ತಿಗೆ ವೈಚಾರಿಕತೆಯ ಬೆಳಕು ನೀಡಿದ ಬಸವಣ್ಣ ಹುಟ್ಟಿದ ಸ್ಥಳ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ. ಇಂದಿನ ದಿನಗಳಲ್ಲಿಯೂ ಬಸವಣ್ಣನವರ ತತ್ವಗಳು ಅನುಕರಣೀಯ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications