ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಬಸವನ ಗೌಡ ಬಾದರ್ಲಿ
ಭರ್ಜರಿ 9ಸಾವಿರ ಮತಗಳ ಅಂತರದಲ್ಲಿ ಬಸವನಗೌಡ ಬಾದರ್ಲಿ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕೆಂಪರಾಜ್, ಅಮೃತ್, ರಾಜೇಂದ್ರ ಹಾಗೂ ಸಾಮಿಯಾ ತಬ್ರೇಜ್ ಆಯ್ಕೆಯಾಗಿದ್ದಾರೆ.
ಬೆಂಗಳೂರು, ಮೇ 21: ಕುತೂಹಲ ಕೆರಳಿಸಿದ್ದ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಸಹೋದರನ ಪುತ್ರ ಬಸವನಗೌಡ ಬಾದರ್ಲಿ ಆಯ್ಕೆಯಾಗಿದ್ದಾರೆ.
ರಾಜ್ಯಾದ್ಯಂತ ಕಳೆದ ವಾರ ಯುವ ಕಾಂಗ್ರೆಸ್ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆದಿತ್ತು. ಇನ್ನು ಅಧ್ಯಕ್ಷ ಸ್ಥಾನ ಸೇರಿದಂತೆ ರಾಜ್ಯ ಪದಾಧಿಕಾರಿಗಳ ಆಯ್ಕೆಗೆ ಶನಿವಾರ ನಗರದ ಅರಮನೆ ಮೈದಾನದಲ್ಲಿ ಮತದಾನ ನಡೆದಿತ್ತು.[ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷಗಿರಿ ಮುಕುಟ ಯಾರಿಗೆ?]

ಇದರಲ್ಲಿ ಭರ್ಜರಿ 9ಸಾವಿರ ಮತಗಳ ಅಂತರದಲ್ಲಿ ಬಸವನಗೌಡ ಬಾದರ್ಲಿ ಜಯ ಸಾಧಿಸಿದ್ದಾರೆ. ಈ ಮೂಲಕ ಆಡಳಿತರೂಢ ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಬಾದರ್ಲಿ ಪಾಲಾಗಿದೆ.
ಇನ್ನು ಉಪಾಧ್ಯಕ್ಷರಾಗಿ ಕೆಂಪರಾಜ್, ಅಮೃತ್, ರಾಜೇಂದ್ರ ಹಾಗೂ ಮಹಿಳಾ ವಿಭಾಗದ ಮೀಸಲಾತಿಯಲ್ಲಿ ಸಾಮಿಯಾ ತಬ್ರೇಜ್ ಆಯ್ಕೆಯಾಗಿದ್ದಾರೆ.
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷಗಿರಿಗೆ ತೀವ್ರ ಪೈಪೋಟಿ ನಡೆದಿತ್ತು. ಒಟ್ಟು 8 ಜನ ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಅಮೃತಾಗೌಡ, ಬಸವನಗೌಡ ಬಾದರ್ಲಿ, ಉಮೇಶ್ ಬೋರೇಗೌಡ, ಬೈರೇಗೌಡ, ರಾಜೇಂದ್ರ, ಶಿವಕುಮಾರ್, ಕೆಂಪರಾಜ್, ಪುಷ್ಪಲತಾ, ಸಾಮಿಯ ತಬರೇಜ್ ಕಣದಲ್ಲಿದ್ದರು. ಇವರಲ್ಲಿ ಶಾಸಕ ಕೆ.ಎಸ್ ರಾಜಣ್ಣ ಪುತ್ರ ಆರ್. ರಾಜೇಂದ್ರ ಹಾಗೂ ಬಸವನಗೌಡ ಬಾದರ್ಲಿ ಮಧ್ಯೆ ರಾಜ್ಯಾಧ್ಯಕ್ಷ ಹುದ್ದೆಗೆ ಪೈಪೋಟಿ ನಡೆದಿತ್ತು. ಇದೀಗ ಬಸವನಗೌಡ ಬಾದರ್ಲಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
{promotion-urls}
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ












Click it and Unblock the Notifications