ವಿಧಾನಸೌಧದ ಆವರಣದಲ್ಲಿ ಬಸವಣ್ಣನ ಪ್ರತಿಮೆ ನಿರ್ಮಾಣ
ಬೆಂಗಳೂರು, ಜೂನ್ 25; ಕರ್ನಾಟಕದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ ಬಸವಣ್ಣನ ಪ್ರತಿಮೆ ನಿರ್ಮಾಣವಾಗಲಿದೆ. ಪುತ್ಥಳಿ ನಿರ್ಮಾಣ ಮಾಡಲು ಕಡತವನ್ನು ಮಂಡನೆ ಮಾಡಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ.
9/6/2021ರಂದು ಮುಖ್ಯಮಂತ್ರಿಗಳು ಈ ಕುರಿತ ಟಿಪ್ಪಣಿಗೆ ಸಹಿ ಹಾಕಿದ್ದಾರೆ. ವಿಧಾನಸೌಧದ ಆವರಣದಲ್ಲಿ ಜಗಜ್ಯೋತಿ ಶ್ರೀ ಬಸವಣ್ಣನವರ ಪುತ್ಥಳಿಯನ್ನು ಸ್ಥಾಪಿಸಲು ಸೂಕ್ತ ಪ್ರಸ್ತಾವನೆಯೊಂದಿಗೆ ಕಡತವನ್ನು ಮಂಡಿಸಲು ಸೂಚನೆ ನೀಡಿದ್ದಾರೆ.
12ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ ಸಮಾನತೆಯ ಹರಿಕಾರ ಜಗಜ್ಯೋತಿ ಶ್ರೀ ಬಸವಣ್ಣನವರ ಪುತ್ಥಳಿಯನ್ನು ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದ ಆವರಣದಲ್ಲಿ ನಿರ್ಮಿಸುವುದರಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುಖುಟಪ್ರಾಯವಾಗುತ್ತದೆ ಎಂದು ಟಿಪ್ಪಣಿಯಲ್ಲಿ ಹೇಳಿದ್ದಾರೆ.

ತುಮಕೂರಿನ ಸಿದ್ಧಗಂಗಾ ಮಠ ಮುಖ್ಯಮಂತ್ರಿಗಳ ಪ್ರಸ್ತಾವನೆ ಬಗ್ಗೆ ಸಂತಸ ವ್ಯಕ್ತಪಡಿಸಿದೆ. ವಿಧಾನಸೌಧ ಆವರಣದಲ್ಲಿ ವಿಶ್ವಗುರು ಬಸವಣ್ಣನವರ ಪುತ್ಥಳಿಯನ್ನು ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಲು ಆದೇಶ ಹೊರಡಿಸಿರುವುದು ಎಲ್ಲಾ ಬಸವ ಅಭಿಮಾನಿಗಳಿಗೆ ಹರ್ಷ ತಂದಿದೆ ಎಂದು ಹೇಳಿದೆ.
2020ರಲ್ಲಿ ಮಾಜಿ ಸಚಿವ ಎಸ್. ಕೆ. ಬೆಳ್ಳುಬ್ಬಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಭೇಟಿಯಾಗಿ ವಿಧಾನಸೌಧ ಅಥವ ವಿಕಾಸಸೌಧದ ಆವರಣದಲ್ಲಿ ಬಸವಣ್ಣನ ಪುತ್ಥಳಿ ನಿರ್ಮಿಸುವಂತೆ ಮನವಿ ಮಾಡಿದ್ದರು.
"ಬಸವಣ್ಣ ಬಸವನಬಾಗೇವಾಡಿ ಇಂಗಳೇಶ್ವರದಲ್ಲಿ ಜನಿಸಿ, ಬಿಜ್ಜಳ ರಾಜನ ಆಸ್ಥಾನದಲ್ಲಿ ಮಂತ್ರಿಯಾಗಿ ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿದರು. ಕಲ್ಯಾಣ ಕ್ರಾಂತಿಗೆ ಕಾರಣರಾಗಿ, ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರು" ಎಂದು ಬೆಳ್ಳುಬ್ಬಿ ಹೇಳಿದ್ದರು.

"ಈಗಾಗಲೇ ಮುರುಘಾ ಶರಣರು ತಮಗೆ ಮನವಿ ಮಾಡಿಕೊಂಡಿದ್ದರು. ಈ ಬೇಡಿಕೆಯನ್ನು ಮಾಜಿ ಸಚಿವನಾಗಿ ಸರ್ಕಾರಕ್ಕೆ ತಲುಪಿಸಿದ್ದೇನೆ. ಪುತ್ಥಳಿ ನಿರ್ಮಿಸುವ ಭರವಸೆ ನೀಡಬೇಕು" ಎಂದು ಮನವಿ ಮಾಡಿದ್ದರು.
-
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು











Click it and Unblock the Notifications